ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲ ವಸೂಲಾತಿಗಾಗಿ ಕಿರುಕುಳ ನೀಡುವುದು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ತುರ್ತು ಸಹಾಯವಾಣಿ ಸಂಖ್ಯೆ 112ಕ್ಕೆ ಕರೆ ಮಾಡುವಂತೆ ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕೆ. ರಾಮರಾಜನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿವಿಧ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ವಯಕ್ತಿಕ ಹಾಗೂ ಜಂಟಿ ಸಾಲವನ್ನು ನೀಡಿ ಸಾಲ ಮರು ಪಾವತಿ ಮಾಡುವ ಸಂದರ್ಭ ದೈಹಿಕ ಹಲ್ಲೆ, ಅವಾಚ್ಯ ಪದಗಳಿಂದ ನಿಂದನೆ ಮಾಡುವುದು, ಸಮಯವಲ್ಲದ ಸಮಯದಲ್ಲಿ ಮನೆಗೆ ನುಗ್ಗಿ ಹೆದರಿಸಿರುವ ಕುರಿತು ಮಾಹಿತಿ ಬಂದಿದೆ. ಯಾವುದೇ ಹಣಕಾಸು ಸಂಸ್ಥೆಯವರು ಸಾಲ ಪಾವತಿಗಾಗಿ ಜನರಿಗೆ ಹಲ್ಲೆ ನಡೆಸುವುದು, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುವುದು, ಸಮಯವಲ್ಲದ ಸಮಯದಲ್ಲಿ ಮನೆಗೆ ನುಗ್ಗಿ ಹೆದರಿಸುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ಎಚ್ಚರಿಸಲಾಗಿದೆ.
ಯಾವುದೇ ಹಣಕಾಸು ಸಂಸ್ಥೆಯವರು ಸಾಲ ಪಾವತಿಗಾಗಿ ಹಲ್ಲೆ ಮಾಡುವುದು, ಜಗಳ ಮಾಡುವುದು ಮತ್ತು ಸಮಯವಲ್ಲದ ಸಮಯದಲ್ಲಿ ಮನೆಗೆ ನುಗ್ಗಿ ಹೆದರಿಸುವುದು ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ತುರ್ತು ಸಹಾಯವಾಣಿ ಸಂಖ್ಯೆ 112ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಮತ್ತು ಕೆ.ಎಸ್.ಪಿ. ತಂತ್ರಾಂಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಸಾರ್ವಜನಿಕ ರಲ್ಲಿ ಕೋರಲಾಗಿದೆ ಹಾಗೂ ಅಕ್ರಮ ಚಟುವಟಿಕೆಗಳ ಕುರಿತು ಮಾಹಿತಿ ಒದಗಿಸುವವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕೆ. ರಾಮರಾಜನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…