Categories: ಕೊಡಗು

ಮೈಕ್ರೋ ಫೈನಾನ್ಸ್ ಗಳಿಂದ ಕಿರುಕುಳ ಆಗುತ್ತಿದೆಯೇ?: ಹಾಗಾದ್ರೆ 112 ಸಂಖ್ಯೆಗೆ ಕರೆ ಮಾಡಿ

ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲ ವಸೂಲಾತಿಗಾಗಿ ಕಿರುಕುಳ ನೀಡುವುದು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ತುರ್ತು ಸಹಾಯವಾಣಿ ಸಂಖ್ಯೆ 112ಕ್ಕೆ ಕರೆ ಮಾಡುವಂತೆ ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕೆ. ರಾಮರಾಜನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿವಿಧ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ವಯಕ್ತಿಕ ಹಾಗೂ ಜಂಟಿ ಸಾಲವನ್ನು ನೀಡಿ ಸಾಲ ಮರು ಪಾವತಿ ಮಾಡುವ ಸಂದರ್ಭ ದೈಹಿಕ ಹಲ್ಲೆ, ಅವಾಚ್ಯ ಪದಗಳಿಂದ ನಿಂದನೆ ಮಾಡುವುದು, ಸಮಯವಲ್ಲದ ಸಮಯದಲ್ಲಿ ಮನೆಗೆ ನುಗ್ಗಿ ಹೆದರಿಸಿರುವ ಕುರಿತು ಮಾಹಿತಿ ಬಂದಿದೆ. ಯಾವುದೇ ಹಣಕಾಸು ಸಂಸ್ಥೆಯವರು ಸಾಲ ಪಾವತಿಗಾಗಿ ಜನರಿಗೆ ಹಲ್ಲೆ ನಡೆಸುವುದು, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುವುದು, ಸಮಯವಲ್ಲದ ಸಮಯದಲ್ಲಿ ಮನೆಗೆ ನುಗ್ಗಿ ಹೆದರಿಸುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ಎಚ್ಚರಿಸಲಾಗಿದೆ.

ಯಾವುದೇ ಹಣಕಾಸು ಸಂಸ್ಥೆಯವರು ಸಾಲ ಪಾವತಿಗಾಗಿ ಹಲ್ಲೆ ಮಾಡುವುದು, ಜಗಳ ಮಾಡುವುದು ಮತ್ತು ಸಮಯವಲ್ಲದ ಸಮಯದಲ್ಲಿ ಮನೆಗೆ ನುಗ್ಗಿ ಹೆದರಿಸುವುದು ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ತುರ್ತು ಸಹಾಯವಾಣಿ ಸಂಖ್ಯೆ 112ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಮತ್ತು ಕೆ.ಎಸ್.ಪಿ. ತಂತ್ರಾಂಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಸಾರ್ವಜನಿಕ ರಲ್ಲಿ ಕೋರಲಾಗಿದೆ ಹಾಗೂ ಅಕ್ರಮ ಚಟುವಟಿಕೆಗಳ ಕುರಿತು ಮಾಹಿತಿ ಒದಗಿಸುವವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕೆ. ರಾಮರಾಜನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಡಿಕೆ 100 ದಿನ, ನೆನಪಾದ ಮೋದಿ…

ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…

5 hours ago

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

16 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

21 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

2 days ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago