ಕೋಲಾರ: ದೇಶದಲ್ಲಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಮತ್ತೊಮ್ಮೆ ಮೋದಿ ಪ್ರಧಾನಿ ಆಗಬೇಕು ಅನ್ನುವುದು ನಮ್ಮ ಎಲ್ಲರ ಗುರಿಯಾಗಿದ್ದು, ಅನಿಟ್ಟಿನಲ್ಲಿ ಎಚ್.ಡಿ ಕುಮಾರಸ್ವಾಮಿ ಸಹ ದುಡಿಯುತ್ತಾ ಇದ್ದು ಅವರ ಕೈಬಲಪಡಿಸಲು ಮೈತ್ರಿಕೂಟ ಜೆಡಿಎಸ್ ಅಭ್ಯರ್ಥಿಯನ್ನು ಕೂಡಲೇ ಘೋಷಿಸುವಂತೆ ಜಿಲ್ಲಾ ಜೆಡಿಎಸ್ ಎಸ್ಸಿ ಘಟಕದ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೋಲಾರ ಮೀಸಲು ಲೋಕಸಭಾ ವ್ಯಾಪ್ತಿಯಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳು ಇದ್ದು ಮೂರು ಕಡೆ ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಉಳಿದ ಐದು ಕಡೆ ಕಾಂಗ್ರೆಸ್ ಪಕ್ಷಕ್ಕೆ ಪ್ರತಿಸ್ಪರ್ಧಿಯಾಗಿ ಎರಡನೇ ಸ್ಥಾನವನ್ನು ಜೆಡಿಎಸ್ ಪಕ್ಷವು ಪಡೆದಿದೆ ಅದರಿಂದ ಮೈತ್ರಿಕೂಟದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿದರೆ ಗೆಲುವು ಸಾಧಿಸಬಹುದು ಅನಿಟ್ಟಿನಲ್ಲಿ ವರಿಷ್ಠರು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಬೇಕು ಎಂದು ಒತ್ತಾಯಿಸಿದರು.
ಮಾಜಿ ಮುಖ್ಯಮಂತ್ರಿ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರು ಆಗಿರುವ ಎಚ್.ಡಿ ಕುಮಾರಸ್ವಾಮಿ ಅವರು ಚೆನ್ನೈನಲ್ಲಿ ಮೂರನೇ ಬಾರಿ ಹೃದಯ ಚಿಕಿತ್ಸೆಗೆ ಒಳಗಾಗಿದ್ದು ಅವರು ಆದಷ್ಟು ಬೇಗ ಗುಣಮುಖರಾಗಿ ಮತ್ತೆ ರಾಜ್ಯದ ಬಡವರ ದಲಿತರ, ಮಹಿಳೆಯರ, ರೈತರ ಕಷ್ಟಗಳಿಗೆ ಧ್ವನಿಯಾಗಿ ಕೆಲಸ ಮಾಡುವಂತ ಅವಕಾಶವನ್ನು ದೇವರು ಆಶೀರ್ವಾದ ನೀಡಲಿ ಎಂದು ಯಲುವಗುಳಿ ನಾಗರಾಜ್ ಆಶಿಸಿದರು.
ಉಡುಪಿ : ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ…
ಬೆಂಗಳೂರು: ಸಿಲಿಕಾನ್ ಸಿಟಿಯ ವರ್ತೂರಿನಲ್ಲಿ ಭಯಾನಕ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿಯ ಹೆಸರಿನಲ್ಲಿ ಮದುವೆಯ ಸತ್ಯವನ್ನು ಮುಚ್ಚಿಟ್ಟು, ಲಿವ್-ಇನ್…
ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ಅವರು ನೇಮಕಗೊಂಡಿದ್ದಾರೆ... ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಎ.ಬಿ…
ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…
ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…
ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಹಫ್ತಾ ವಸೂಲಿ…