ಕೋಲಾರ: ದೇಶದಲ್ಲಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಮತ್ತೊಮ್ಮೆ ಮೋದಿ ಪ್ರಧಾನಿ ಆಗಬೇಕು ಅನ್ನುವುದು ನಮ್ಮ ಎಲ್ಲರ ಗುರಿಯಾಗಿದ್ದು, ಅನಿಟ್ಟಿನಲ್ಲಿ ಎಚ್.ಡಿ ಕುಮಾರಸ್ವಾಮಿ ಸಹ ದುಡಿಯುತ್ತಾ ಇದ್ದು ಅವರ ಕೈಬಲಪಡಿಸಲು ಮೈತ್ರಿಕೂಟ ಜೆಡಿಎಸ್ ಅಭ್ಯರ್ಥಿಯನ್ನು ಕೂಡಲೇ ಘೋಷಿಸುವಂತೆ ಜಿಲ್ಲಾ ಜೆಡಿಎಸ್ ಎಸ್ಸಿ ಘಟಕದ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೋಲಾರ ಮೀಸಲು ಲೋಕಸಭಾ ವ್ಯಾಪ್ತಿಯಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳು ಇದ್ದು ಮೂರು ಕಡೆ ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಉಳಿದ ಐದು ಕಡೆ ಕಾಂಗ್ರೆಸ್ ಪಕ್ಷಕ್ಕೆ ಪ್ರತಿಸ್ಪರ್ಧಿಯಾಗಿ ಎರಡನೇ ಸ್ಥಾನವನ್ನು ಜೆಡಿಎಸ್ ಪಕ್ಷವು ಪಡೆದಿದೆ ಅದರಿಂದ ಮೈತ್ರಿಕೂಟದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿದರೆ ಗೆಲುವು ಸಾಧಿಸಬಹುದು ಅನಿಟ್ಟಿನಲ್ಲಿ ವರಿಷ್ಠರು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಬೇಕು ಎಂದು ಒತ್ತಾಯಿಸಿದರು.
ಮಾಜಿ ಮುಖ್ಯಮಂತ್ರಿ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರು ಆಗಿರುವ ಎಚ್.ಡಿ ಕುಮಾರಸ್ವಾಮಿ ಅವರು ಚೆನ್ನೈನಲ್ಲಿ ಮೂರನೇ ಬಾರಿ ಹೃದಯ ಚಿಕಿತ್ಸೆಗೆ ಒಳಗಾಗಿದ್ದು ಅವರು ಆದಷ್ಟು ಬೇಗ ಗುಣಮುಖರಾಗಿ ಮತ್ತೆ ರಾಜ್ಯದ ಬಡವರ ದಲಿತರ, ಮಹಿಳೆಯರ, ರೈತರ ಕಷ್ಟಗಳಿಗೆ ಧ್ವನಿಯಾಗಿ ಕೆಲಸ ಮಾಡುವಂತ ಅವಕಾಶವನ್ನು ದೇವರು ಆಶೀರ್ವಾದ ನೀಡಲಿ ಎಂದು ಯಲುವಗುಳಿ ನಾಗರಾಜ್ ಆಶಿಸಿದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…