ಕೋಲಾರ: ದೇಶದಲ್ಲಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಮತ್ತೊಮ್ಮೆ ಮೋದಿ ಪ್ರಧಾನಿ ಆಗಬೇಕು ಅನ್ನುವುದು ನಮ್ಮ ಎಲ್ಲರ ಗುರಿಯಾಗಿದ್ದು, ಅನಿಟ್ಟಿನಲ್ಲಿ ಎಚ್.ಡಿ ಕುಮಾರಸ್ವಾಮಿ ಸಹ ದುಡಿಯುತ್ತಾ ಇದ್ದು ಅವರ ಕೈಬಲಪಡಿಸಲು ಮೈತ್ರಿಕೂಟ ಜೆಡಿಎಸ್ ಅಭ್ಯರ್ಥಿಯನ್ನು ಕೂಡಲೇ ಘೋಷಿಸುವಂತೆ ಜಿಲ್ಲಾ ಜೆಡಿಎಸ್ ಎಸ್ಸಿ ಘಟಕದ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೋಲಾರ ಮೀಸಲು ಲೋಕಸಭಾ ವ್ಯಾಪ್ತಿಯಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳು ಇದ್ದು ಮೂರು ಕಡೆ ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಉಳಿದ ಐದು ಕಡೆ ಕಾಂಗ್ರೆಸ್ ಪಕ್ಷಕ್ಕೆ ಪ್ರತಿಸ್ಪರ್ಧಿಯಾಗಿ ಎರಡನೇ ಸ್ಥಾನವನ್ನು ಜೆಡಿಎಸ್ ಪಕ್ಷವು ಪಡೆದಿದೆ ಅದರಿಂದ ಮೈತ್ರಿಕೂಟದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿದರೆ ಗೆಲುವು ಸಾಧಿಸಬಹುದು ಅನಿಟ್ಟಿನಲ್ಲಿ ವರಿಷ್ಠರು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಬೇಕು ಎಂದು ಒತ್ತಾಯಿಸಿದರು.
ಮಾಜಿ ಮುಖ್ಯಮಂತ್ರಿ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರು ಆಗಿರುವ ಎಚ್.ಡಿ ಕುಮಾರಸ್ವಾಮಿ ಅವರು ಚೆನ್ನೈನಲ್ಲಿ ಮೂರನೇ ಬಾರಿ ಹೃದಯ ಚಿಕಿತ್ಸೆಗೆ ಒಳಗಾಗಿದ್ದು ಅವರು ಆದಷ್ಟು ಬೇಗ ಗುಣಮುಖರಾಗಿ ಮತ್ತೆ ರಾಜ್ಯದ ಬಡವರ ದಲಿತರ, ಮಹಿಳೆಯರ, ರೈತರ ಕಷ್ಟಗಳಿಗೆ ಧ್ವನಿಯಾಗಿ ಕೆಲಸ ಮಾಡುವಂತ ಅವಕಾಶವನ್ನು ದೇವರು ಆಶೀರ್ವಾದ ನೀಡಲಿ ಎಂದು ಯಲುವಗುಳಿ ನಾಗರಾಜ್ ಆಶಿಸಿದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…