Categories: ಕೋಲಾರ

ಮೈತ್ರಿಕೂಟದಿಂದ ಜೆಡಿಎಸ್‌ ಅಭ್ಯರ್ಥಿ ಘೋಷಣೆಗೆ ಜಿ.ಸುನಿಲ್ ಕುಮಾರ್ ಒತ್ತಾಯ

ಕೋಲಾರ: ಮುಂಬರುವ ಕೋಲಾರ ಮೀಸಲು ಲೋಕಸಭಾ ಚುನಾವಣೆಗೆ ಜೆಡಿಎಸ್‌-ಬಿಜೆಪಿ ಮೈತ್ರಿಕೂಟದಿಂದ ಜೆಡಿಎಸ್ ಅಭ್ಯರ್ಥಿಯನ್ನು ಕೂಡಲೇ ವರಿಷ್ಠರು ಘೋಷಣೆ ಮಾಡಿದರೆ ಗೆಲ್ಲಲು ಸುಲಭವಾಗುತ್ತದೆ ಎಂದು ಜೆಡಿಎಸ್ ಎಸ್ಸಿ ಘಟಕದ ತಾಲೂಕ ಅಧ್ಯಕ್ಷ ಲಕ್ಷ್ಮೀಸಾಗರ ಜಿ.ಸುನಿಲ್ ಕುಮಾರ್ ಅವರು ಜೆಡಿಎಸ್‌ ವರಿಷ್ಠರನ್ನು ಒತ್ತಾಯಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು, ಈಗಾಗಲೇ ರಾಜ್ಯದಲ್ಲಿ ಜೆಡಿಎಸ್‌-ಬಿಜೆಪಿ ಪಕ್ಷಗಳು ಮೈತ್ರಿಯಾಗಿ ಚುನಾವಣೆಯನ್ನು ಎದುರಿಸಲು ಸಿದ್ಧವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ‌ ಪ್ರಧಾನಿ ಎಚ್.ಡಿ ದೇವೇಗೌಡರ ನಿರ್ಧಾರವು ಒಳ್ಳೆಯ ಬೆಳವಣಿಗೆಯಾಗಿದೆ. ಈಗಾಗಲೇ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌. ಡಿ.‌ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಜೆಡಿಎಸ್‌ ಪಕ್ಷದಿಂದಲ್ಲೇ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಕಾರ್ಯಕ್ರಮ ಒಂದರಲ್ಲಿ ಹೇಳಿದ್ದಾರೆ. ಅದರಂತೆ ಕೂಡಲೇ ಅಭ್ಯರ್ಥಿಯನ್ನು ಘೋಷಣೆ ಮಾಡಿದರೆ ಮೈತ್ರಿಕೂಟದಿಂದ ಮತದಾರರನ್ನು ಸಂಪರ್ಕಿಸಲು ಸಹಕಾರಿಯಾಗುತ್ತದೆ ಎಂದರು.

ಈಗಾಗಲೇ ಮೈತ್ರಿಕೂಟದಲ್ಲಿ ಬಿಜೆಪಿಯ 20 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ ಕೋಲಾರ ಕ್ಷೇತ್ರದ ಅಭ್ಯರ್ಥಿ ಘೋಷಣೆ ಮಾಡದಿದರೆ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರಿಗೆ ನರೇಂದ್ರ ಮೋದಿ ಹಾಗೂ ಎಚ್ ಡಿ ಕುಮಾರಸ್ವಾಮಿ ಅವರ ಆಡಳಿತದ ಜನಪರ, ರೈತ ಮಹಿಳೆಯರ ಪರವಾದ ಯೋಜನೆಗಳ ಬಗ್ಗೆ ಮನವರಿಕೆ ಮಾಡಿ ಎರಡು ಪಕ್ಷಗಳ ಕಾರ್ಯಕರ್ತರಲ್ಲಿ ಸಮನ್ವಯತೆ ಸಾಧಿಸಿಕೊಂಡು ಮತ ಪಡೆಯಲು ಸಾಧ್ಯವಾಗುತ್ತದೆ.  ಆ ನಿಟ್ಟಿನಲ್ಲಿ ಕೂಡಲೇ ಮೈತ್ರಿಕೂಟದ ಜೆಡಿಎಸ್‌ ಅಭ್ಯರ್ಥಿಯನ್ನು ಘೋಷಣೆ ಮಾಡಬೇಕು ಎಂದು ಜಿ.ಸುನಿಲ್ ಕುಮಾರ್ ವರಿಷ್ಠರನ್ನು ಒತ್ತಾಯಿಸಿದರು.

Ramesh Babu

Journalist

Recent Posts

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

12 minutes ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

24 minutes ago

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

3 hours ago

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

4 hours ago

ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ

ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ‌ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…

8 hours ago

ಪೊಲೀಸ್‌ ಡ್ರೆಸ್‌ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ.!

ಸಬ್ ಇನ್ಸ್‌ಪೆಕ್ಟರ್‌ ಡ್ರೆಸ್‌ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…

11 hours ago