ಕೋಲಾರ: ಮುಂಬರುವ ಕೋಲಾರ ಮೀಸಲು ಲೋಕಸಭಾ ಚುನಾವಣೆಗೆ ಜೆಡಿಎಸ್-ಬಿಜೆಪಿ ಮೈತ್ರಿಕೂಟದಿಂದ ಜೆಡಿಎಸ್ ಅಭ್ಯರ್ಥಿಯನ್ನು ಕೂಡಲೇ ವರಿಷ್ಠರು ಘೋಷಣೆ ಮಾಡಿದರೆ ಗೆಲ್ಲಲು ಸುಲಭವಾಗುತ್ತದೆ ಎಂದು ಜೆಡಿಎಸ್ ಎಸ್ಸಿ ಘಟಕದ ತಾಲೂಕ ಅಧ್ಯಕ್ಷ ಲಕ್ಷ್ಮೀಸಾಗರ ಜಿ.ಸುನಿಲ್ ಕುಮಾರ್ ಅವರು ಜೆಡಿಎಸ್ ವರಿಷ್ಠರನ್ನು ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು, ಈಗಾಗಲೇ ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಪಕ್ಷಗಳು ಮೈತ್ರಿಯಾಗಿ ಚುನಾವಣೆಯನ್ನು ಎದುರಿಸಲು ಸಿದ್ಧವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ನಿರ್ಧಾರವು ಒಳ್ಳೆಯ ಬೆಳವಣಿಗೆಯಾಗಿದೆ. ಈಗಾಗಲೇ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ.ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಜೆಡಿಎಸ್ ಪಕ್ಷದಿಂದಲ್ಲೇ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಕಾರ್ಯಕ್ರಮ ಒಂದರಲ್ಲಿ ಹೇಳಿದ್ದಾರೆ. ಅದರಂತೆ ಕೂಡಲೇ ಅಭ್ಯರ್ಥಿಯನ್ನು ಘೋಷಣೆ ಮಾಡಿದರೆ ಮೈತ್ರಿಕೂಟದಿಂದ ಮತದಾರರನ್ನು ಸಂಪರ್ಕಿಸಲು ಸಹಕಾರಿಯಾಗುತ್ತದೆ ಎಂದರು.
ಈಗಾಗಲೇ ಮೈತ್ರಿಕೂಟದಲ್ಲಿ ಬಿಜೆಪಿಯ 20 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ ಕೋಲಾರ ಕ್ಷೇತ್ರದ ಅಭ್ಯರ್ಥಿ ಘೋಷಣೆ ಮಾಡದಿದರೆ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರಿಗೆ ನರೇಂದ್ರ ಮೋದಿ ಹಾಗೂ ಎಚ್ ಡಿ ಕುಮಾರಸ್ವಾಮಿ ಅವರ ಆಡಳಿತದ ಜನಪರ, ರೈತ ಮಹಿಳೆಯರ ಪರವಾದ ಯೋಜನೆಗಳ ಬಗ್ಗೆ ಮನವರಿಕೆ ಮಾಡಿ ಎರಡು ಪಕ್ಷಗಳ ಕಾರ್ಯಕರ್ತರಲ್ಲಿ ಸಮನ್ವಯತೆ ಸಾಧಿಸಿಕೊಂಡು ಮತ ಪಡೆಯಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಕೂಡಲೇ ಮೈತ್ರಿಕೂಟದ ಜೆಡಿಎಸ್ ಅಭ್ಯರ್ಥಿಯನ್ನು ಘೋಷಣೆ ಮಾಡಬೇಕು ಎಂದು ಜಿ.ಸುನಿಲ್ ಕುಮಾರ್ ವರಿಷ್ಠರನ್ನು ಒತ್ತಾಯಿಸಿದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…