ಕೋಲಾರ: ಮುಂಬರುವ ಕೋಲಾರ ಮೀಸಲು ಲೋಕಸಭಾ ಚುನಾವಣೆಗೆ ಜೆಡಿಎಸ್-ಬಿಜೆಪಿ ಮೈತ್ರಿಕೂಟದಿಂದ ಜೆಡಿಎಸ್ ಅಭ್ಯರ್ಥಿಯನ್ನು ಕೂಡಲೇ ವರಿಷ್ಠರು ಘೋಷಣೆ ಮಾಡಿದರೆ ಗೆಲ್ಲಲು ಸುಲಭವಾಗುತ್ತದೆ ಎಂದು ಜೆಡಿಎಸ್ ಎಸ್ಸಿ ಘಟಕದ ತಾಲೂಕ ಅಧ್ಯಕ್ಷ ಲಕ್ಷ್ಮೀಸಾಗರ ಜಿ.ಸುನಿಲ್ ಕುಮಾರ್ ಅವರು ಜೆಡಿಎಸ್ ವರಿಷ್ಠರನ್ನು ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು, ಈಗಾಗಲೇ ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಪಕ್ಷಗಳು ಮೈತ್ರಿಯಾಗಿ ಚುನಾವಣೆಯನ್ನು ಎದುರಿಸಲು ಸಿದ್ಧವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ನಿರ್ಧಾರವು ಒಳ್ಳೆಯ ಬೆಳವಣಿಗೆಯಾಗಿದೆ. ಈಗಾಗಲೇ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ.ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಜೆಡಿಎಸ್ ಪಕ್ಷದಿಂದಲ್ಲೇ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಕಾರ್ಯಕ್ರಮ ಒಂದರಲ್ಲಿ ಹೇಳಿದ್ದಾರೆ. ಅದರಂತೆ ಕೂಡಲೇ ಅಭ್ಯರ್ಥಿಯನ್ನು ಘೋಷಣೆ ಮಾಡಿದರೆ ಮೈತ್ರಿಕೂಟದಿಂದ ಮತದಾರರನ್ನು ಸಂಪರ್ಕಿಸಲು ಸಹಕಾರಿಯಾಗುತ್ತದೆ ಎಂದರು.
ಈಗಾಗಲೇ ಮೈತ್ರಿಕೂಟದಲ್ಲಿ ಬಿಜೆಪಿಯ 20 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ ಕೋಲಾರ ಕ್ಷೇತ್ರದ ಅಭ್ಯರ್ಥಿ ಘೋಷಣೆ ಮಾಡದಿದರೆ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರಿಗೆ ನರೇಂದ್ರ ಮೋದಿ ಹಾಗೂ ಎಚ್ ಡಿ ಕುಮಾರಸ್ವಾಮಿ ಅವರ ಆಡಳಿತದ ಜನಪರ, ರೈತ ಮಹಿಳೆಯರ ಪರವಾದ ಯೋಜನೆಗಳ ಬಗ್ಗೆ ಮನವರಿಕೆ ಮಾಡಿ ಎರಡು ಪಕ್ಷಗಳ ಕಾರ್ಯಕರ್ತರಲ್ಲಿ ಸಮನ್ವಯತೆ ಸಾಧಿಸಿಕೊಂಡು ಮತ ಪಡೆಯಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಕೂಡಲೇ ಮೈತ್ರಿಕೂಟದ ಜೆಡಿಎಸ್ ಅಭ್ಯರ್ಥಿಯನ್ನು ಘೋಷಣೆ ಮಾಡಬೇಕು ಎಂದು ಜಿ.ಸುನಿಲ್ ಕುಮಾರ್ ವರಿಷ್ಠರನ್ನು ಒತ್ತಾಯಿಸಿದರು.
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…