Categories: ಕೋಲಾರ

ಮೈತ್ರಿಕೂಟದ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನಮ್ಮ ಗುರಿ-ಓಂಶಕ್ತಿ ಚಲಪತಿ

ಕೋಲಾರ: ಮೀಸಲು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಪಕ್ಷದ‌ ಅಭ್ಯರ್ಥಿ ಸಿಗಲಿಲ್ಲ ಎಂಬ ನೋವು ಕಾರ್ಯಕರ್ತರಲ್ಲಿ ಇದ್ದರೂ ಕೂಡ ನರೇಂದ್ರ ಮೋದಿಯವರನ್ನು ದೇಶದಲ್ಲಿ ಸತತವಾಗಿ ಮೂರನೇ ಬಾರಿಗೂ ಪ್ರಧಾನಿಯಾಗಿ ಮಾಡಲು ಪಕ್ಷದ ಹೈಕಮಾಂಡ್ ನಿರ್ಧಾರದಂತೆ ಈ ಬಾರಿ ಮೈತ್ರಿಕೂಟದ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನಮ್ಮ ಗುರಿಯಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ತಿಳಿಸಿದರು.

ನಗರದಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಸಂಸದರನ್ನು ಆಯ್ಕೆ ಮಾಡಲಾಗಿತ್ತು. ಆದರೆ, ಈ ಬಾರಿ ಎನ್.ಡಿ.ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜೆಡಿಎಸ್‌ ಪಕ್ಷದಿಂದ ಸ್ಪರ್ಧೆಗೆ ಬಿಜೆಪಿ ಹೈಕಮಾಂಡ್ ನಿರ್ಧಾರ ಮಾಡಿದ್ದು, ಯಾರೇ ಅಭ್ಯರ್ಥಿಯಾದರೂ ಮೈತ್ರಿ ಧರ್ಮವನ್ನು ಬಿಜೆಪಿ ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ಪಾಲಿಸಲಿದ್ದಾರೆ ಈ ಬಾರಿಯ ಚುನಾವಣೆಯಲ್ಲಿ ದೇಶದಲ್ಲಿ ಬಿಜೆಪಿ ಮೈತ್ರಿಕೂಟದಿಂದ 400 ಸೀಟುಗಳ ಗುರಿಯನ್ನು ಹೊಂದಿದ್ದು ಅದರಲ್ಲಿ ಕೋಲಾರ ಕ್ಷೇತ್ರವು ಒಂದಾಗಿದ್ದು ಅನಿಟ್ಟಿನಲ್ಲಿ ಮೈತ್ರಿಕೂಟದಿಂದ ನರೇಂದ್ರ ಮೋದಿಯವರನ್ನು ಬೆಂಬಲಿಸಲು ಕಾರ್ಯಕರ್ತರು ತುದಿಗಾಲಿನಲ್ಲಿ ನಿಂತಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಕೆಲವು ನಾಯಕರಿಗೆ ಮೋದಿಯವರನ್ನು ಟೀಕೆ ಮಾಡುವಂತೆ ಕಾಂಗ್ರೆಸ್ ಹೈಕಮಾಂಡ್ ಟಾಸ್ಕ್ ನೀಡಿದ್ದಾರೆ. ಅವರ ಹಣತೆಯಂತೆ ನಡೆದುಕೊಳ್ಳುತ್ತಾ ಇದ್ದು ಮೋದಿ ಅವರ ವಿರುದ್ದ ದಿನನಿತ್ಯ ಮಾತಾಡಿಲ್ಲ ಎಂದರೆ ಕಾಂಗ್ರೆಸ್ ಪಕ್ಷದಲ್ಲಿ ಅವರಿಗೆ ಬೆಲೆ ಕಡಿಮೆಯಾಗುತ್ತದೆ. ದೇಶದಲ್ಲಿ 80% ಯುವಕರು ಮೋದಿಯನ್ನು ಬೆಂಬಲಿಸುತ್ತಾರೆ ಎಂಬ ಉದ್ದೇಶಕ್ಕಾಗಿ ಸಚಿವ ಶಿವರಾಜ್ ತಂಗಡಿಗಿ ಮೋದಿ ಎಂದರೆ ಕಪಾಳಕ್ಕೆ ಹೊಡಿರಿ ಅಂತ ಮಾತಾಡಿದ್ದಾರೆ. ಅವರಿಗೆ ತಾಕತ್ತು ಇದ್ದರೆ ಬಿಜೆಪಿಯ ಹಾಗೂ ಹಿಂದುತ್ವದ ಒಬ್ಬ ಕಾರ್ಯಕರ್ತರನ್ನು ಮುಟ್ಟಿ ನೋಡಲಿ ಎಂದು ಸವಾಲು ಹಾಕಿದರು.

ಈ ಬಾರಿ ರಾಜ್ಯದಲ್ಲಿ ಮೈತ್ರಿಕೂಟದಿಂದ 28 ಕ್ಷೇತ್ರಗಳಲ್ಲೂ ಗೆಲ್ಲಲಿದ್ದಾರೆ. ದೇಶವು ಸುಭದ್ರವಾಗಿ ಇರಲು ಮೋದಿಯವರ ಅಭಿವೃದ್ಧಿ, ಜನಪ್ರಿಯ ಯೋಜನೆಗಳ ಜೊತೆಗೆ ಮಾಜಿ ಪ್ರಧಾನಿ ದೇವೇಗೌಡರ ಹಾಗೂ ಕುಮಾರಸ್ವಾಮಿ ಹಾಗೂ ವಿಜಯೇಂದ್ರ ಅವರ ಹಾದಿಯಲ್ಲಿ ಎಲ್ಲಾ ಕಡೆ ಗೆಲ್ಲಲಿದ್ದೇವೆ. ರಾಜ್ಯದಲ್ಲಿ ಕೆ.ಎಸ್ ಈಶ್ವರಪ್ಪ ಹಾಗೂ ಎಸ್.ಆರ್ ವಿಶ್ವನಾಥ್ ಅವರನ್ನು ಪಕ್ಷವು ಗೌರವಯುತವಾಗಿ ನಡೆಸಿಕೊಳ್ಳಲಿದೆ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಒಗ್ಗಟ್ಟಿನಿಂದ ಮೋದಿ ಗೆಲ್ಲಿಸಿ ದೇಶವನ್ನು ಗೆಲ್ಲಿಸುವ ಕೆಲಸ ಮಾಡತ್ತೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

Ramesh Babu

Journalist

Recent Posts

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

4 minutes ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

28 minutes ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

8 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

19 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago