ಕೋಲಾರ: ಮೀಸಲು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಪಕ್ಷದ ಅಭ್ಯರ್ಥಿ ಸಿಗಲಿಲ್ಲ ಎಂಬ ನೋವು ಕಾರ್ಯಕರ್ತರಲ್ಲಿ ಇದ್ದರೂ ಕೂಡ ನರೇಂದ್ರ ಮೋದಿಯವರನ್ನು ದೇಶದಲ್ಲಿ ಸತತವಾಗಿ ಮೂರನೇ ಬಾರಿಗೂ ಪ್ರಧಾನಿಯಾಗಿ ಮಾಡಲು ಪಕ್ಷದ ಹೈಕಮಾಂಡ್ ನಿರ್ಧಾರದಂತೆ ಈ ಬಾರಿ ಮೈತ್ರಿಕೂಟದ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನಮ್ಮ ಗುರಿಯಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ತಿಳಿಸಿದರು.
ನಗರದಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಸಂಸದರನ್ನು ಆಯ್ಕೆ ಮಾಡಲಾಗಿತ್ತು. ಆದರೆ, ಈ ಬಾರಿ ಎನ್.ಡಿ.ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜೆಡಿಎಸ್ ಪಕ್ಷದಿಂದ ಸ್ಪರ್ಧೆಗೆ ಬಿಜೆಪಿ ಹೈಕಮಾಂಡ್ ನಿರ್ಧಾರ ಮಾಡಿದ್ದು, ಯಾರೇ ಅಭ್ಯರ್ಥಿಯಾದರೂ ಮೈತ್ರಿ ಧರ್ಮವನ್ನು ಬಿಜೆಪಿ ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ಪಾಲಿಸಲಿದ್ದಾರೆ ಈ ಬಾರಿಯ ಚುನಾವಣೆಯಲ್ಲಿ ದೇಶದಲ್ಲಿ ಬಿಜೆಪಿ ಮೈತ್ರಿಕೂಟದಿಂದ 400 ಸೀಟುಗಳ ಗುರಿಯನ್ನು ಹೊಂದಿದ್ದು ಅದರಲ್ಲಿ ಕೋಲಾರ ಕ್ಷೇತ್ರವು ಒಂದಾಗಿದ್ದು ಅನಿಟ್ಟಿನಲ್ಲಿ ಮೈತ್ರಿಕೂಟದಿಂದ ನರೇಂದ್ರ ಮೋದಿಯವರನ್ನು ಬೆಂಬಲಿಸಲು ಕಾರ್ಯಕರ್ತರು ತುದಿಗಾಲಿನಲ್ಲಿ ನಿಂತಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಕೆಲವು ನಾಯಕರಿಗೆ ಮೋದಿಯವರನ್ನು ಟೀಕೆ ಮಾಡುವಂತೆ ಕಾಂಗ್ರೆಸ್ ಹೈಕಮಾಂಡ್ ಟಾಸ್ಕ್ ನೀಡಿದ್ದಾರೆ. ಅವರ ಹಣತೆಯಂತೆ ನಡೆದುಕೊಳ್ಳುತ್ತಾ ಇದ್ದು ಮೋದಿ ಅವರ ವಿರುದ್ದ ದಿನನಿತ್ಯ ಮಾತಾಡಿಲ್ಲ ಎಂದರೆ ಕಾಂಗ್ರೆಸ್ ಪಕ್ಷದಲ್ಲಿ ಅವರಿಗೆ ಬೆಲೆ ಕಡಿಮೆಯಾಗುತ್ತದೆ. ದೇಶದಲ್ಲಿ 80% ಯುವಕರು ಮೋದಿಯನ್ನು ಬೆಂಬಲಿಸುತ್ತಾರೆ ಎಂಬ ಉದ್ದೇಶಕ್ಕಾಗಿ ಸಚಿವ ಶಿವರಾಜ್ ತಂಗಡಿಗಿ ಮೋದಿ ಎಂದರೆ ಕಪಾಳಕ್ಕೆ ಹೊಡಿರಿ ಅಂತ ಮಾತಾಡಿದ್ದಾರೆ. ಅವರಿಗೆ ತಾಕತ್ತು ಇದ್ದರೆ ಬಿಜೆಪಿಯ ಹಾಗೂ ಹಿಂದುತ್ವದ ಒಬ್ಬ ಕಾರ್ಯಕರ್ತರನ್ನು ಮುಟ್ಟಿ ನೋಡಲಿ ಎಂದು ಸವಾಲು ಹಾಕಿದರು.
ಈ ಬಾರಿ ರಾಜ್ಯದಲ್ಲಿ ಮೈತ್ರಿಕೂಟದಿಂದ 28 ಕ್ಷೇತ್ರಗಳಲ್ಲೂ ಗೆಲ್ಲಲಿದ್ದಾರೆ. ದೇಶವು ಸುಭದ್ರವಾಗಿ ಇರಲು ಮೋದಿಯವರ ಅಭಿವೃದ್ಧಿ, ಜನಪ್ರಿಯ ಯೋಜನೆಗಳ ಜೊತೆಗೆ ಮಾಜಿ ಪ್ರಧಾನಿ ದೇವೇಗೌಡರ ಹಾಗೂ ಕುಮಾರಸ್ವಾಮಿ ಹಾಗೂ ವಿಜಯೇಂದ್ರ ಅವರ ಹಾದಿಯಲ್ಲಿ ಎಲ್ಲಾ ಕಡೆ ಗೆಲ್ಲಲಿದ್ದೇವೆ. ರಾಜ್ಯದಲ್ಲಿ ಕೆ.ಎಸ್ ಈಶ್ವರಪ್ಪ ಹಾಗೂ ಎಸ್.ಆರ್ ವಿಶ್ವನಾಥ್ ಅವರನ್ನು ಪಕ್ಷವು ಗೌರವಯುತವಾಗಿ ನಡೆಸಿಕೊಳ್ಳಲಿದೆ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಒಗ್ಗಟ್ಟಿನಿಂದ ಮೋದಿ ಗೆಲ್ಲಿಸಿ ದೇಶವನ್ನು ಗೆಲ್ಲಿಸುವ ಕೆಲಸ ಮಾಡತ್ತೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…