Categories: ಕೋಲಾರ

ಮೈತ್ರಿಕೂಟದ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನಮ್ಮ ಗುರಿ-ಓಂಶಕ್ತಿ ಚಲಪತಿ

ಕೋಲಾರ: ಮೀಸಲು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಪಕ್ಷದ‌ ಅಭ್ಯರ್ಥಿ ಸಿಗಲಿಲ್ಲ ಎಂಬ ನೋವು ಕಾರ್ಯಕರ್ತರಲ್ಲಿ ಇದ್ದರೂ ಕೂಡ ನರೇಂದ್ರ ಮೋದಿಯವರನ್ನು ದೇಶದಲ್ಲಿ ಸತತವಾಗಿ ಮೂರನೇ ಬಾರಿಗೂ ಪ್ರಧಾನಿಯಾಗಿ ಮಾಡಲು ಪಕ್ಷದ ಹೈಕಮಾಂಡ್ ನಿರ್ಧಾರದಂತೆ ಈ ಬಾರಿ ಮೈತ್ರಿಕೂಟದ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನಮ್ಮ ಗುರಿಯಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ತಿಳಿಸಿದರು.

ನಗರದಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಸಂಸದರನ್ನು ಆಯ್ಕೆ ಮಾಡಲಾಗಿತ್ತು. ಆದರೆ, ಈ ಬಾರಿ ಎನ್.ಡಿ.ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜೆಡಿಎಸ್‌ ಪಕ್ಷದಿಂದ ಸ್ಪರ್ಧೆಗೆ ಬಿಜೆಪಿ ಹೈಕಮಾಂಡ್ ನಿರ್ಧಾರ ಮಾಡಿದ್ದು, ಯಾರೇ ಅಭ್ಯರ್ಥಿಯಾದರೂ ಮೈತ್ರಿ ಧರ್ಮವನ್ನು ಬಿಜೆಪಿ ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ಪಾಲಿಸಲಿದ್ದಾರೆ ಈ ಬಾರಿಯ ಚುನಾವಣೆಯಲ್ಲಿ ದೇಶದಲ್ಲಿ ಬಿಜೆಪಿ ಮೈತ್ರಿಕೂಟದಿಂದ 400 ಸೀಟುಗಳ ಗುರಿಯನ್ನು ಹೊಂದಿದ್ದು ಅದರಲ್ಲಿ ಕೋಲಾರ ಕ್ಷೇತ್ರವು ಒಂದಾಗಿದ್ದು ಅನಿಟ್ಟಿನಲ್ಲಿ ಮೈತ್ರಿಕೂಟದಿಂದ ನರೇಂದ್ರ ಮೋದಿಯವರನ್ನು ಬೆಂಬಲಿಸಲು ಕಾರ್ಯಕರ್ತರು ತುದಿಗಾಲಿನಲ್ಲಿ ನಿಂತಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಕೆಲವು ನಾಯಕರಿಗೆ ಮೋದಿಯವರನ್ನು ಟೀಕೆ ಮಾಡುವಂತೆ ಕಾಂಗ್ರೆಸ್ ಹೈಕಮಾಂಡ್ ಟಾಸ್ಕ್ ನೀಡಿದ್ದಾರೆ. ಅವರ ಹಣತೆಯಂತೆ ನಡೆದುಕೊಳ್ಳುತ್ತಾ ಇದ್ದು ಮೋದಿ ಅವರ ವಿರುದ್ದ ದಿನನಿತ್ಯ ಮಾತಾಡಿಲ್ಲ ಎಂದರೆ ಕಾಂಗ್ರೆಸ್ ಪಕ್ಷದಲ್ಲಿ ಅವರಿಗೆ ಬೆಲೆ ಕಡಿಮೆಯಾಗುತ್ತದೆ. ದೇಶದಲ್ಲಿ 80% ಯುವಕರು ಮೋದಿಯನ್ನು ಬೆಂಬಲಿಸುತ್ತಾರೆ ಎಂಬ ಉದ್ದೇಶಕ್ಕಾಗಿ ಸಚಿವ ಶಿವರಾಜ್ ತಂಗಡಿಗಿ ಮೋದಿ ಎಂದರೆ ಕಪಾಳಕ್ಕೆ ಹೊಡಿರಿ ಅಂತ ಮಾತಾಡಿದ್ದಾರೆ. ಅವರಿಗೆ ತಾಕತ್ತು ಇದ್ದರೆ ಬಿಜೆಪಿಯ ಹಾಗೂ ಹಿಂದುತ್ವದ ಒಬ್ಬ ಕಾರ್ಯಕರ್ತರನ್ನು ಮುಟ್ಟಿ ನೋಡಲಿ ಎಂದು ಸವಾಲು ಹಾಕಿದರು.

ಈ ಬಾರಿ ರಾಜ್ಯದಲ್ಲಿ ಮೈತ್ರಿಕೂಟದಿಂದ 28 ಕ್ಷೇತ್ರಗಳಲ್ಲೂ ಗೆಲ್ಲಲಿದ್ದಾರೆ. ದೇಶವು ಸುಭದ್ರವಾಗಿ ಇರಲು ಮೋದಿಯವರ ಅಭಿವೃದ್ಧಿ, ಜನಪ್ರಿಯ ಯೋಜನೆಗಳ ಜೊತೆಗೆ ಮಾಜಿ ಪ್ರಧಾನಿ ದೇವೇಗೌಡರ ಹಾಗೂ ಕುಮಾರಸ್ವಾಮಿ ಹಾಗೂ ವಿಜಯೇಂದ್ರ ಅವರ ಹಾದಿಯಲ್ಲಿ ಎಲ್ಲಾ ಕಡೆ ಗೆಲ್ಲಲಿದ್ದೇವೆ. ರಾಜ್ಯದಲ್ಲಿ ಕೆ.ಎಸ್ ಈಶ್ವರಪ್ಪ ಹಾಗೂ ಎಸ್.ಆರ್ ವಿಶ್ವನಾಥ್ ಅವರನ್ನು ಪಕ್ಷವು ಗೌರವಯುತವಾಗಿ ನಡೆಸಿಕೊಳ್ಳಲಿದೆ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಒಗ್ಗಟ್ಟಿನಿಂದ ಮೋದಿ ಗೆಲ್ಲಿಸಿ ದೇಶವನ್ನು ಗೆಲ್ಲಿಸುವ ಕೆಲಸ ಮಾಡತ್ತೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

Ramesh Babu

Journalist

Recent Posts

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

5 hours ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

5 hours ago

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

17 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

20 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

2 days ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

2 days ago