ಕೋಲಾರ: ಮೀಸಲು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಪಕ್ಷದ ಅಭ್ಯರ್ಥಿ ಸಿಗಲಿಲ್ಲ ಎಂಬ ನೋವು ಕಾರ್ಯಕರ್ತರಲ್ಲಿ ಇದ್ದರೂ ಕೂಡ ನರೇಂದ್ರ ಮೋದಿಯವರನ್ನು ದೇಶದಲ್ಲಿ ಸತತವಾಗಿ ಮೂರನೇ ಬಾರಿಗೂ ಪ್ರಧಾನಿಯಾಗಿ ಮಾಡಲು ಪಕ್ಷದ ಹೈಕಮಾಂಡ್ ನಿರ್ಧಾರದಂತೆ ಈ ಬಾರಿ ಮೈತ್ರಿಕೂಟದ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನಮ್ಮ ಗುರಿಯಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ತಿಳಿಸಿದರು.
ನಗರದಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಸಂಸದರನ್ನು ಆಯ್ಕೆ ಮಾಡಲಾಗಿತ್ತು. ಆದರೆ, ಈ ಬಾರಿ ಎನ್.ಡಿ.ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜೆಡಿಎಸ್ ಪಕ್ಷದಿಂದ ಸ್ಪರ್ಧೆಗೆ ಬಿಜೆಪಿ ಹೈಕಮಾಂಡ್ ನಿರ್ಧಾರ ಮಾಡಿದ್ದು, ಯಾರೇ ಅಭ್ಯರ್ಥಿಯಾದರೂ ಮೈತ್ರಿ ಧರ್ಮವನ್ನು ಬಿಜೆಪಿ ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ಪಾಲಿಸಲಿದ್ದಾರೆ ಈ ಬಾರಿಯ ಚುನಾವಣೆಯಲ್ಲಿ ದೇಶದಲ್ಲಿ ಬಿಜೆಪಿ ಮೈತ್ರಿಕೂಟದಿಂದ 400 ಸೀಟುಗಳ ಗುರಿಯನ್ನು ಹೊಂದಿದ್ದು ಅದರಲ್ಲಿ ಕೋಲಾರ ಕ್ಷೇತ್ರವು ಒಂದಾಗಿದ್ದು ಅನಿಟ್ಟಿನಲ್ಲಿ ಮೈತ್ರಿಕೂಟದಿಂದ ನರೇಂದ್ರ ಮೋದಿಯವರನ್ನು ಬೆಂಬಲಿಸಲು ಕಾರ್ಯಕರ್ತರು ತುದಿಗಾಲಿನಲ್ಲಿ ನಿಂತಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಕೆಲವು ನಾಯಕರಿಗೆ ಮೋದಿಯವರನ್ನು ಟೀಕೆ ಮಾಡುವಂತೆ ಕಾಂಗ್ರೆಸ್ ಹೈಕಮಾಂಡ್ ಟಾಸ್ಕ್ ನೀಡಿದ್ದಾರೆ. ಅವರ ಹಣತೆಯಂತೆ ನಡೆದುಕೊಳ್ಳುತ್ತಾ ಇದ್ದು ಮೋದಿ ಅವರ ವಿರುದ್ದ ದಿನನಿತ್ಯ ಮಾತಾಡಿಲ್ಲ ಎಂದರೆ ಕಾಂಗ್ರೆಸ್ ಪಕ್ಷದಲ್ಲಿ ಅವರಿಗೆ ಬೆಲೆ ಕಡಿಮೆಯಾಗುತ್ತದೆ. ದೇಶದಲ್ಲಿ 80% ಯುವಕರು ಮೋದಿಯನ್ನು ಬೆಂಬಲಿಸುತ್ತಾರೆ ಎಂಬ ಉದ್ದೇಶಕ್ಕಾಗಿ ಸಚಿವ ಶಿವರಾಜ್ ತಂಗಡಿಗಿ ಮೋದಿ ಎಂದರೆ ಕಪಾಳಕ್ಕೆ ಹೊಡಿರಿ ಅಂತ ಮಾತಾಡಿದ್ದಾರೆ. ಅವರಿಗೆ ತಾಕತ್ತು ಇದ್ದರೆ ಬಿಜೆಪಿಯ ಹಾಗೂ ಹಿಂದುತ್ವದ ಒಬ್ಬ ಕಾರ್ಯಕರ್ತರನ್ನು ಮುಟ್ಟಿ ನೋಡಲಿ ಎಂದು ಸವಾಲು ಹಾಕಿದರು.
ಈ ಬಾರಿ ರಾಜ್ಯದಲ್ಲಿ ಮೈತ್ರಿಕೂಟದಿಂದ 28 ಕ್ಷೇತ್ರಗಳಲ್ಲೂ ಗೆಲ್ಲಲಿದ್ದಾರೆ. ದೇಶವು ಸುಭದ್ರವಾಗಿ ಇರಲು ಮೋದಿಯವರ ಅಭಿವೃದ್ಧಿ, ಜನಪ್ರಿಯ ಯೋಜನೆಗಳ ಜೊತೆಗೆ ಮಾಜಿ ಪ್ರಧಾನಿ ದೇವೇಗೌಡರ ಹಾಗೂ ಕುಮಾರಸ್ವಾಮಿ ಹಾಗೂ ವಿಜಯೇಂದ್ರ ಅವರ ಹಾದಿಯಲ್ಲಿ ಎಲ್ಲಾ ಕಡೆ ಗೆಲ್ಲಲಿದ್ದೇವೆ. ರಾಜ್ಯದಲ್ಲಿ ಕೆ.ಎಸ್ ಈಶ್ವರಪ್ಪ ಹಾಗೂ ಎಸ್.ಆರ್ ವಿಶ್ವನಾಥ್ ಅವರನ್ನು ಪಕ್ಷವು ಗೌರವಯುತವಾಗಿ ನಡೆಸಿಕೊಳ್ಳಲಿದೆ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಒಗ್ಗಟ್ಟಿನಿಂದ ಮೋದಿ ಗೆಲ್ಲಿಸಿ ದೇಶವನ್ನು ಗೆಲ್ಲಿಸುವ ಕೆಲಸ ಮಾಡತ್ತೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…