Categories: ಕೋಲಾರ

ಮೈತ್ರಿಕೂಟದ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನಮ್ಮ ಗುರಿ-ಓಂಶಕ್ತಿ ಚಲಪತಿ

ಕೋಲಾರ: ಮೀಸಲು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಪಕ್ಷದ‌ ಅಭ್ಯರ್ಥಿ ಸಿಗಲಿಲ್ಲ ಎಂಬ ನೋವು ಕಾರ್ಯಕರ್ತರಲ್ಲಿ ಇದ್ದರೂ ಕೂಡ ನರೇಂದ್ರ ಮೋದಿಯವರನ್ನು ದೇಶದಲ್ಲಿ ಸತತವಾಗಿ ಮೂರನೇ ಬಾರಿಗೂ ಪ್ರಧಾನಿಯಾಗಿ ಮಾಡಲು ಪಕ್ಷದ ಹೈಕಮಾಂಡ್ ನಿರ್ಧಾರದಂತೆ ಈ ಬಾರಿ ಮೈತ್ರಿಕೂಟದ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನಮ್ಮ ಗುರಿಯಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ತಿಳಿಸಿದರು.

ನಗರದಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಸಂಸದರನ್ನು ಆಯ್ಕೆ ಮಾಡಲಾಗಿತ್ತು. ಆದರೆ, ಈ ಬಾರಿ ಎನ್.ಡಿ.ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜೆಡಿಎಸ್‌ ಪಕ್ಷದಿಂದ ಸ್ಪರ್ಧೆಗೆ ಬಿಜೆಪಿ ಹೈಕಮಾಂಡ್ ನಿರ್ಧಾರ ಮಾಡಿದ್ದು, ಯಾರೇ ಅಭ್ಯರ್ಥಿಯಾದರೂ ಮೈತ್ರಿ ಧರ್ಮವನ್ನು ಬಿಜೆಪಿ ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ಪಾಲಿಸಲಿದ್ದಾರೆ ಈ ಬಾರಿಯ ಚುನಾವಣೆಯಲ್ಲಿ ದೇಶದಲ್ಲಿ ಬಿಜೆಪಿ ಮೈತ್ರಿಕೂಟದಿಂದ 400 ಸೀಟುಗಳ ಗುರಿಯನ್ನು ಹೊಂದಿದ್ದು ಅದರಲ್ಲಿ ಕೋಲಾರ ಕ್ಷೇತ್ರವು ಒಂದಾಗಿದ್ದು ಅನಿಟ್ಟಿನಲ್ಲಿ ಮೈತ್ರಿಕೂಟದಿಂದ ನರೇಂದ್ರ ಮೋದಿಯವರನ್ನು ಬೆಂಬಲಿಸಲು ಕಾರ್ಯಕರ್ತರು ತುದಿಗಾಲಿನಲ್ಲಿ ನಿಂತಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಕೆಲವು ನಾಯಕರಿಗೆ ಮೋದಿಯವರನ್ನು ಟೀಕೆ ಮಾಡುವಂತೆ ಕಾಂಗ್ರೆಸ್ ಹೈಕಮಾಂಡ್ ಟಾಸ್ಕ್ ನೀಡಿದ್ದಾರೆ. ಅವರ ಹಣತೆಯಂತೆ ನಡೆದುಕೊಳ್ಳುತ್ತಾ ಇದ್ದು ಮೋದಿ ಅವರ ವಿರುದ್ದ ದಿನನಿತ್ಯ ಮಾತಾಡಿಲ್ಲ ಎಂದರೆ ಕಾಂಗ್ರೆಸ್ ಪಕ್ಷದಲ್ಲಿ ಅವರಿಗೆ ಬೆಲೆ ಕಡಿಮೆಯಾಗುತ್ತದೆ. ದೇಶದಲ್ಲಿ 80% ಯುವಕರು ಮೋದಿಯನ್ನು ಬೆಂಬಲಿಸುತ್ತಾರೆ ಎಂಬ ಉದ್ದೇಶಕ್ಕಾಗಿ ಸಚಿವ ಶಿವರಾಜ್ ತಂಗಡಿಗಿ ಮೋದಿ ಎಂದರೆ ಕಪಾಳಕ್ಕೆ ಹೊಡಿರಿ ಅಂತ ಮಾತಾಡಿದ್ದಾರೆ. ಅವರಿಗೆ ತಾಕತ್ತು ಇದ್ದರೆ ಬಿಜೆಪಿಯ ಹಾಗೂ ಹಿಂದುತ್ವದ ಒಬ್ಬ ಕಾರ್ಯಕರ್ತರನ್ನು ಮುಟ್ಟಿ ನೋಡಲಿ ಎಂದು ಸವಾಲು ಹಾಕಿದರು.

ಈ ಬಾರಿ ರಾಜ್ಯದಲ್ಲಿ ಮೈತ್ರಿಕೂಟದಿಂದ 28 ಕ್ಷೇತ್ರಗಳಲ್ಲೂ ಗೆಲ್ಲಲಿದ್ದಾರೆ. ದೇಶವು ಸುಭದ್ರವಾಗಿ ಇರಲು ಮೋದಿಯವರ ಅಭಿವೃದ್ಧಿ, ಜನಪ್ರಿಯ ಯೋಜನೆಗಳ ಜೊತೆಗೆ ಮಾಜಿ ಪ್ರಧಾನಿ ದೇವೇಗೌಡರ ಹಾಗೂ ಕುಮಾರಸ್ವಾಮಿ ಹಾಗೂ ವಿಜಯೇಂದ್ರ ಅವರ ಹಾದಿಯಲ್ಲಿ ಎಲ್ಲಾ ಕಡೆ ಗೆಲ್ಲಲಿದ್ದೇವೆ. ರಾಜ್ಯದಲ್ಲಿ ಕೆ.ಎಸ್ ಈಶ್ವರಪ್ಪ ಹಾಗೂ ಎಸ್.ಆರ್ ವಿಶ್ವನಾಥ್ ಅವರನ್ನು ಪಕ್ಷವು ಗೌರವಯುತವಾಗಿ ನಡೆಸಿಕೊಳ್ಳಲಿದೆ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಒಗ್ಗಟ್ಟಿನಿಂದ ಮೋದಿ ಗೆಲ್ಲಿಸಿ ದೇಶವನ್ನು ಗೆಲ್ಲಿಸುವ ಕೆಲಸ ಮಾಡತ್ತೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

Ramesh Babu

Journalist

Recent Posts

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

7 minutes ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

6 hours ago

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

9 hours ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

10 hours ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

21 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

1 day ago