Categories: ಕೋಲಾರ

ಮೈತ್ರಿ ಪಕ್ಷದ ನಾಯಕತ್ವ ಬೇಸತ್ತು ಶಿವಕುಮಾರ್ ಕಾಂಗ್ರೆಸ್ ಸೇರ್ಪಡೆ

ಕೋಲಾರ: ಪಿಎಲ್ಡಿ ಬ್ಯಾಂಕ್ ಚುನಾವಣೆಯಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿ ಪಕ್ಷದ ಮುಖಂಡರ ನಾಯಕತ್ವದ ವಿರುದ್ದ ಬೇಸತ್ತು ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಕೆಂದಟ್ಟಿ ಎ.ಶಿವಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಹೊರತು ಯಾವುದೇ ಹಣದ ಆಮಿಷಗಳಿಗೆ ಒಳಗಾಗಿ ಪಕ್ಷಕ್ಕೆ ಬಂದಿಲ್ಲ ಆಮಿಷಗಳಿಂದ ಪಕ್ಷ ಸೇರ್ಪಡೆ ಏನಾದರೂ ಇದ್ದರೆ ಅದು ಮೈತ್ರಿ ಪಕ್ಷದಲ್ಲಿ ಮಾತ್ರವೇ ಎಂದು ಬಣಕನಹಳ್ಳಿ ನಟರಾಜ್ ಹೇಳಿಕೆಗೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೈಲಾಂಡಹಳ್ಳಿ ಮುರಳಿ ಟಾಂಗ್ ನೀಡಿದ್ದಾರೆ

ಈ ಕುರಿತು ಪತ್ರಿಕ ಹೇಳಿಕೆ ನೀಡಿದ ಅವರು ಅಧಿಕಾರದ ಆಸೆ ಆಮಿಷಗಳಿಗೆ ಸೇರ್ಪಡೆ ಮಾಡಿಕೊಳ್ಳುವ ಸಂಸ್ಕೃತಿ ಕಾಂಗ್ರೆಸ್ ಪಕ್ಷದಲ್ಲಿ ಇಲ್ಲ ನೂತನ ಅಧ್ಯಕ್ಷ ಶಿವಕುಮಾರ್ ಅವರ ಹಿನ್ನಲೆಯನ್ನು ತಿಳಿದು ಬಣಕನಹಳ್ಳಿ ನಟರಾಜ್ ಮಾತನಾಡಬೇಕು ಅವರ ರಾಜಕೀಯ ಜೀವನದಲ್ಲಿ ಯಾವತ್ತೂ ಅಧಿಕಾರ ಹಣದ ಆಮಿಷಗಳಿಗೆ ಒಳಗಾಗುವ ವ್ಯಕ್ತಿಯಲ್ಲ ಮೈತ್ರಿ ಪಕ್ಷದಲ್ಲಿನ ನಾಯಕರು ಮುಖಂಡರು ವರ್ತನೆ ಸರಿ ಇಲ್ಲದ ಕಾರಣ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಸೇರ್ಪಡೆಯಾಗಿದ್ದಾರೆ ಮೂರು ಬಾರಿ ಪಿಎಲ್ಡಿ ಬ್ಯಾಂಕ್ ನಿರ್ದೇಶಕರಾಗಿ ಸಾಧ್ಯವಾದಷ್ಟು ರೈತರಿಗೆ ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ಕೆಲಸವನ್ನು ಮಾಡಿದ್ದಾರೆ ಅಂತಹವರಿಗೆ ಅವಕಾಶ ಸಿಗಲಿಲ್ಲ ಕಾಂಗ್ರೆಸ್ ಪಕ್ಷವು ಅವರಿಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ

ಕಾಂಗ್ರೆಸ್ ಪಕ್ಷವು ಯಾವತ್ತೂ ಕೂಡ ತಾಲೂಕು ಸೊಸೈಟಿ, ಪಿಎಲ್ಡಿ ಬ್ಯಾಂಕ್, ಮತ್ತು ಸಹಕಾರಿ ಸಂಸ್ಥೆಗಳ ಚುನಾವಣೆಗಳನ್ನು ಗಂಭೀರವಾಗಿ ತೆಗೆದುಕೊಂಡು ಇರಲಿಲ್ಲ ಕೋಲಾರದಲ್ಲಿ ಶಾಸಕರಾಗಿ ಕೊತ್ತೂರು ಮಂಜುನಾಥ್ ಮತ್ತು ಎಂಎಲ್ಸಿಯಾಗಿ ಅನಿಲ್ ಕುಮಾರ್ ಅವರು ಬಂದ ನಂತರದಲ್ಲಿ ಸಹಕಾರಿ ಸಂಸ್ಥೆಗಳ ಚುನಾವಣೆಯಲ್ಲಿ ಹೋರಾಟ ಮಾಡಿ ಮೈತ್ರಿ ಪಕ್ಷಗಳ ಮಧ್ಯೆ ಗೆಲ್ಲಿಸಿಕೊಂಡಿದ್ದಾರೆ ಹಿಂದಿನ ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಅವಿರೋಧ ಅಂತ ಹೇಳಿ ಬಲಿಷ್ಠ ವ್ಯಕ್ತಿಗಳನ್ನು ಚುನಾವಣಾ ಕಣದಿಂದ ಸರಿಸಿದ್ದರು ಇಲ್ಲದೇ ಹೋಗಿದ್ದರೆ ತಾಲೂಕು ಸೊಸೈಟಿಯಲ್ಲಿ ಸಹ ಕಾಂಗ್ರೆಸ್ ಪಕ್ಷವು ಕೈಹಿಡಿಯುತ್ತಿದ್ದರು ಎಂಬುದನ್ನು ಮೈತ್ರಿ ಪಕ್ಷದ ಮುಖಂಡರಿಗೆ ಮನವರಿಕೆಯಾಗಬೇಕು ಎಂದರು

ಸುಮಾರು ಹತ್ತು ವರ್ಷಗಳ ಕಾಲ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ವರ್ತೂರ್ ಪ್ರಕಾಶ್ ಶಾಸಕರಾಗಿ ಸಚಿವರಾಗಿದ್ದ ಸಂದರ್ಭದಲ್ಲಿ ಯಾವತ್ತೂ ಸಹಕಾರಿ ಸಂಸ್ಥೆಗಳ ಚುನಾವಣೆಯಲ್ಲಿ ಗೆಲುವು ಸಾಧಿಸಲಿಲ್ಲ ಮಾಜಿ ಸಚಿವರಾದ ಸಿ.ಬೈರೇಗೌಡರು ಹಾಗೂ ಕೆ ಶ್ರೀನಿವಾಸಗೌಡರು ಸಹಕಾರಿ ವ್ಯವಸ್ಥೆಗೆ ಹಾಕಿದ ಅಡಿಪಾಯದಲ್ಲಿ ಜೆಡಿಎಸ್‌ ನವರು ಗೆದ್ದು ಬೀಗುತ್ತಿದ್ದಾರೆ ಇದು ಇವತ್ತಿನ ಜೆಡಿಎಸ್‌ ನಲ್ಲಿರುವ ಸಿಎಂಆರ್ ಶ್ರೀನಾಥ್ ಹಾಗೂ ಇನ್ನಿತರ ಮುಖಂಡರು ಹಾಗೂ ಪರದೆ ಹಿಂದೆ ಮುಖವಾಡ ಹಾಕಿಕೊಂಡು ಇರುವವರ ಮುಖಂಡರ ಗೆಲುವು ಅಲ್ಲ ಇವತ್ತು ಮೈತ್ರಿಯಾಗಿ ಅಭ್ಯರ್ಥಿಯಾಗಿ ಪೈಪೋಟಿಯನ್ನು ನೀಡಿದ್ದರೂ ಕಾಂಗ್ರೆಸ್ ಹೆಚ್ಚು ಸ್ಥಾನಗಳು ಪಡೆಯಲು ಸಾಧ್ಯವಾಯಿತು ಮೂರು ಪಕ್ಷಗಳು ಏಕಾಂಗಿಯಾಗಿ ಸ್ಪರ್ಧೆಯಲ್ಲಿ ಇದ್ದಿದ್ದರೆ ಕಾಂಗ್ರೆಸ್ ಸುಲಭವಾಗಿ ಗೆಲ್ಲುತ್ತಿತ್ತು ಆರೋಪ ಮಾಡುವ ಸಂದರ್ಭದಲ್ಲಿ ತಮ್ಮ ಮೈತ್ರಿ ಪಕ್ಷದ ನಡುವಳಿಕೆ ಬಗ್ಗೆ ಅತ್ಮವಿಮರ್ಶೆ ಮಾಡಿಕೊಳ್ಳುವುದು ಸೂಕ್ತ ಎಂದು ಮೈಲಾಂಡಹಳ್ಳಿ ಮುರಳಿ ಹೇಳಿಕೆ ನೀಡಿದ್ದಾರೆ.

Ramesh Babu

Journalist

Recent Posts

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

4 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

7 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

8 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

24 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

1 day ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

1 day ago