Categories: ಕೋಲಾರ

ಮೈತ್ರಿ ಪಕ್ಷದ ನಾಯಕತ್ವ ಬೇಸತ್ತು ಶಿವಕುಮಾರ್ ಕಾಂಗ್ರೆಸ್ ಸೇರ್ಪಡೆ

ಕೋಲಾರ: ಪಿಎಲ್ಡಿ ಬ್ಯಾಂಕ್ ಚುನಾವಣೆಯಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿ ಪಕ್ಷದ ಮುಖಂಡರ ನಾಯಕತ್ವದ ವಿರುದ್ದ ಬೇಸತ್ತು ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಕೆಂದಟ್ಟಿ ಎ.ಶಿವಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಹೊರತು ಯಾವುದೇ ಹಣದ ಆಮಿಷಗಳಿಗೆ ಒಳಗಾಗಿ ಪಕ್ಷಕ್ಕೆ ಬಂದಿಲ್ಲ ಆಮಿಷಗಳಿಂದ ಪಕ್ಷ ಸೇರ್ಪಡೆ ಏನಾದರೂ ಇದ್ದರೆ ಅದು ಮೈತ್ರಿ ಪಕ್ಷದಲ್ಲಿ ಮಾತ್ರವೇ ಎಂದು ಬಣಕನಹಳ್ಳಿ ನಟರಾಜ್ ಹೇಳಿಕೆಗೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೈಲಾಂಡಹಳ್ಳಿ ಮುರಳಿ ಟಾಂಗ್ ನೀಡಿದ್ದಾರೆ

ಈ ಕುರಿತು ಪತ್ರಿಕ ಹೇಳಿಕೆ ನೀಡಿದ ಅವರು ಅಧಿಕಾರದ ಆಸೆ ಆಮಿಷಗಳಿಗೆ ಸೇರ್ಪಡೆ ಮಾಡಿಕೊಳ್ಳುವ ಸಂಸ್ಕೃತಿ ಕಾಂಗ್ರೆಸ್ ಪಕ್ಷದಲ್ಲಿ ಇಲ್ಲ ನೂತನ ಅಧ್ಯಕ್ಷ ಶಿವಕುಮಾರ್ ಅವರ ಹಿನ್ನಲೆಯನ್ನು ತಿಳಿದು ಬಣಕನಹಳ್ಳಿ ನಟರಾಜ್ ಮಾತನಾಡಬೇಕು ಅವರ ರಾಜಕೀಯ ಜೀವನದಲ್ಲಿ ಯಾವತ್ತೂ ಅಧಿಕಾರ ಹಣದ ಆಮಿಷಗಳಿಗೆ ಒಳಗಾಗುವ ವ್ಯಕ್ತಿಯಲ್ಲ ಮೈತ್ರಿ ಪಕ್ಷದಲ್ಲಿನ ನಾಯಕರು ಮುಖಂಡರು ವರ್ತನೆ ಸರಿ ಇಲ್ಲದ ಕಾರಣ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಸೇರ್ಪಡೆಯಾಗಿದ್ದಾರೆ ಮೂರು ಬಾರಿ ಪಿಎಲ್ಡಿ ಬ್ಯಾಂಕ್ ನಿರ್ದೇಶಕರಾಗಿ ಸಾಧ್ಯವಾದಷ್ಟು ರೈತರಿಗೆ ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ಕೆಲಸವನ್ನು ಮಾಡಿದ್ದಾರೆ ಅಂತಹವರಿಗೆ ಅವಕಾಶ ಸಿಗಲಿಲ್ಲ ಕಾಂಗ್ರೆಸ್ ಪಕ್ಷವು ಅವರಿಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ

ಕಾಂಗ್ರೆಸ್ ಪಕ್ಷವು ಯಾವತ್ತೂ ಕೂಡ ತಾಲೂಕು ಸೊಸೈಟಿ, ಪಿಎಲ್ಡಿ ಬ್ಯಾಂಕ್, ಮತ್ತು ಸಹಕಾರಿ ಸಂಸ್ಥೆಗಳ ಚುನಾವಣೆಗಳನ್ನು ಗಂಭೀರವಾಗಿ ತೆಗೆದುಕೊಂಡು ಇರಲಿಲ್ಲ ಕೋಲಾರದಲ್ಲಿ ಶಾಸಕರಾಗಿ ಕೊತ್ತೂರು ಮಂಜುನಾಥ್ ಮತ್ತು ಎಂಎಲ್ಸಿಯಾಗಿ ಅನಿಲ್ ಕುಮಾರ್ ಅವರು ಬಂದ ನಂತರದಲ್ಲಿ ಸಹಕಾರಿ ಸಂಸ್ಥೆಗಳ ಚುನಾವಣೆಯಲ್ಲಿ ಹೋರಾಟ ಮಾಡಿ ಮೈತ್ರಿ ಪಕ್ಷಗಳ ಮಧ್ಯೆ ಗೆಲ್ಲಿಸಿಕೊಂಡಿದ್ದಾರೆ ಹಿಂದಿನ ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಅವಿರೋಧ ಅಂತ ಹೇಳಿ ಬಲಿಷ್ಠ ವ್ಯಕ್ತಿಗಳನ್ನು ಚುನಾವಣಾ ಕಣದಿಂದ ಸರಿಸಿದ್ದರು ಇಲ್ಲದೇ ಹೋಗಿದ್ದರೆ ತಾಲೂಕು ಸೊಸೈಟಿಯಲ್ಲಿ ಸಹ ಕಾಂಗ್ರೆಸ್ ಪಕ್ಷವು ಕೈಹಿಡಿಯುತ್ತಿದ್ದರು ಎಂಬುದನ್ನು ಮೈತ್ರಿ ಪಕ್ಷದ ಮುಖಂಡರಿಗೆ ಮನವರಿಕೆಯಾಗಬೇಕು ಎಂದರು

ಸುಮಾರು ಹತ್ತು ವರ್ಷಗಳ ಕಾಲ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ವರ್ತೂರ್ ಪ್ರಕಾಶ್ ಶಾಸಕರಾಗಿ ಸಚಿವರಾಗಿದ್ದ ಸಂದರ್ಭದಲ್ಲಿ ಯಾವತ್ತೂ ಸಹಕಾರಿ ಸಂಸ್ಥೆಗಳ ಚುನಾವಣೆಯಲ್ಲಿ ಗೆಲುವು ಸಾಧಿಸಲಿಲ್ಲ ಮಾಜಿ ಸಚಿವರಾದ ಸಿ.ಬೈರೇಗೌಡರು ಹಾಗೂ ಕೆ ಶ್ರೀನಿವಾಸಗೌಡರು ಸಹಕಾರಿ ವ್ಯವಸ್ಥೆಗೆ ಹಾಕಿದ ಅಡಿಪಾಯದಲ್ಲಿ ಜೆಡಿಎಸ್‌ ನವರು ಗೆದ್ದು ಬೀಗುತ್ತಿದ್ದಾರೆ ಇದು ಇವತ್ತಿನ ಜೆಡಿಎಸ್‌ ನಲ್ಲಿರುವ ಸಿಎಂಆರ್ ಶ್ರೀನಾಥ್ ಹಾಗೂ ಇನ್ನಿತರ ಮುಖಂಡರು ಹಾಗೂ ಪರದೆ ಹಿಂದೆ ಮುಖವಾಡ ಹಾಕಿಕೊಂಡು ಇರುವವರ ಮುಖಂಡರ ಗೆಲುವು ಅಲ್ಲ ಇವತ್ತು ಮೈತ್ರಿಯಾಗಿ ಅಭ್ಯರ್ಥಿಯಾಗಿ ಪೈಪೋಟಿಯನ್ನು ನೀಡಿದ್ದರೂ ಕಾಂಗ್ರೆಸ್ ಹೆಚ್ಚು ಸ್ಥಾನಗಳು ಪಡೆಯಲು ಸಾಧ್ಯವಾಯಿತು ಮೂರು ಪಕ್ಷಗಳು ಏಕಾಂಗಿಯಾಗಿ ಸ್ಪರ್ಧೆಯಲ್ಲಿ ಇದ್ದಿದ್ದರೆ ಕಾಂಗ್ರೆಸ್ ಸುಲಭವಾಗಿ ಗೆಲ್ಲುತ್ತಿತ್ತು ಆರೋಪ ಮಾಡುವ ಸಂದರ್ಭದಲ್ಲಿ ತಮ್ಮ ಮೈತ್ರಿ ಪಕ್ಷದ ನಡುವಳಿಕೆ ಬಗ್ಗೆ ಅತ್ಮವಿಮರ್ಶೆ ಮಾಡಿಕೊಳ್ಳುವುದು ಸೂಕ್ತ ಎಂದು ಮೈಲಾಂಡಹಳ್ಳಿ ಮುರಳಿ ಹೇಳಿಕೆ ನೀಡಿದ್ದಾರೆ.

Ramesh Babu

Journalist

Recent Posts

ಭ್ರಷ್ಟಾಚಾರ ಆರೋಪ: ಮೂವರು ಅಧಿಕಾರಿಗಳ 14 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ…

3 hours ago

2026ರಲ್ಲಿ ‘ಸೂಪರ್ ಎಲ್ ನಿನೊ’ ಆತಂಕ: ಭಾರತಕ್ಕೆ ಕಡಿಮೆ ಮಳೆ, ಕೃಷಿ ಮತ್ತು ಜಲಮೂಲಗಳ ಮೇಲೆ ಗಂಭೀರ ಪರಿಣಾಮದ ಎಚ್ಚರಿಕೆ

ನವದೆಹಲಿ: 2026ರಲ್ಲಿ ರೂಪುಗೊಳ್ಳುತ್ತಿರುವ "ಸೂಪರ್ ಎಲ್ ನಿನೊ" ಪರಿಣಾಮ ದೇಶದ ಮಾನ್ಸೂನ್ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ…

8 hours ago

‘SIR ಪ್ರಕ್ರಿಯೆಯಲ್ಲಿ ಗಂಭೀರ ಅಕ್ರಮ ಆರೋಪ: ಸಾಕ್ಷ್ಯಾಧಾರಗಳೊಂದಿಗೆ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು’- ಆರ್ ಅಶೋಕ್

ದೆಹಲಿಯಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಅವರನ್ನು ಇಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶ್ರೀ…

20 hours ago

ಹಳಿ ದಾಟುವಾಗ ಯುವತಿಗೆ ರೈಲು ಡಿಕ್ಕಿ: ಸ್ಥಳದಲ್ಲೇ ಸಾವು

ದೇವನಹಳ್ಳಿ: ತನ್ನ ಗ್ರಾಮದ ಕಡೆಗೆ ತೆರಳಲು ಹೆದ್ದಾರಿ ಪಕ್ಕದ ರೈಲ್ವೇ ಹಳಿ ದಾಟಲು ಹೋದ ಕಾಲೇಜು ಯುವತಿ ರೈಲಿಗೆ ಸಿಲುಕಿ…

20 hours ago

ಸಚಿವ ಸ್ಥಾನ ನೀಡಿದರೆ ಜವಾಬ್ದಾರಿಯಿಂದ ನಿಭಾಯಿಸುತ್ತೇನೆ- ಶಾಸಕಿ ನಯನಾ ಮೋಟಮ್ಮ

ದೊಡ್ಡಬಳ್ಳಾಪುರ: ಶಾಸಕಿ ನಯನಾ ಮೋಟಮ್ಮ ಅವರು ಮಂಗಳವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ,…

21 hours ago

ಸರ್ಕಾರ ರೈತರೊಂದಿಗೆ ಮಾತುಕತೆ ನಡೆಸಿ, ಎಲ್ಲರ ಸಹಮತದೊಂದಿಗೆ ಮುಂದುವರಿಯಬೇಕು- ವಿನಯ್ ಗುರೂಜಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಶಾಸಕ ಶರವಣ ಹಾಗೂ ಶ್ರೀ…

21 hours ago