Categories: ಕೋಲಾರ

ಮೈತ್ರಿ ಪಕ್ಷದ ನಾಯಕತ್ವ ಬೇಸತ್ತು ಶಿವಕುಮಾರ್ ಕಾಂಗ್ರೆಸ್ ಸೇರ್ಪಡೆ

ಕೋಲಾರ: ಪಿಎಲ್ಡಿ ಬ್ಯಾಂಕ್ ಚುನಾವಣೆಯಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿ ಪಕ್ಷದ ಮುಖಂಡರ ನಾಯಕತ್ವದ ವಿರುದ್ದ ಬೇಸತ್ತು ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಕೆಂದಟ್ಟಿ ಎ.ಶಿವಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಹೊರತು ಯಾವುದೇ ಹಣದ ಆಮಿಷಗಳಿಗೆ ಒಳಗಾಗಿ ಪಕ್ಷಕ್ಕೆ ಬಂದಿಲ್ಲ ಆಮಿಷಗಳಿಂದ ಪಕ್ಷ ಸೇರ್ಪಡೆ ಏನಾದರೂ ಇದ್ದರೆ ಅದು ಮೈತ್ರಿ ಪಕ್ಷದಲ್ಲಿ ಮಾತ್ರವೇ ಎಂದು ಬಣಕನಹಳ್ಳಿ ನಟರಾಜ್ ಹೇಳಿಕೆಗೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೈಲಾಂಡಹಳ್ಳಿ ಮುರಳಿ ಟಾಂಗ್ ನೀಡಿದ್ದಾರೆ

ಈ ಕುರಿತು ಪತ್ರಿಕ ಹೇಳಿಕೆ ನೀಡಿದ ಅವರು ಅಧಿಕಾರದ ಆಸೆ ಆಮಿಷಗಳಿಗೆ ಸೇರ್ಪಡೆ ಮಾಡಿಕೊಳ್ಳುವ ಸಂಸ್ಕೃತಿ ಕಾಂಗ್ರೆಸ್ ಪಕ್ಷದಲ್ಲಿ ಇಲ್ಲ ನೂತನ ಅಧ್ಯಕ್ಷ ಶಿವಕುಮಾರ್ ಅವರ ಹಿನ್ನಲೆಯನ್ನು ತಿಳಿದು ಬಣಕನಹಳ್ಳಿ ನಟರಾಜ್ ಮಾತನಾಡಬೇಕು ಅವರ ರಾಜಕೀಯ ಜೀವನದಲ್ಲಿ ಯಾವತ್ತೂ ಅಧಿಕಾರ ಹಣದ ಆಮಿಷಗಳಿಗೆ ಒಳಗಾಗುವ ವ್ಯಕ್ತಿಯಲ್ಲ ಮೈತ್ರಿ ಪಕ್ಷದಲ್ಲಿನ ನಾಯಕರು ಮುಖಂಡರು ವರ್ತನೆ ಸರಿ ಇಲ್ಲದ ಕಾರಣ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಸೇರ್ಪಡೆಯಾಗಿದ್ದಾರೆ ಮೂರು ಬಾರಿ ಪಿಎಲ್ಡಿ ಬ್ಯಾಂಕ್ ನಿರ್ದೇಶಕರಾಗಿ ಸಾಧ್ಯವಾದಷ್ಟು ರೈತರಿಗೆ ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ಕೆಲಸವನ್ನು ಮಾಡಿದ್ದಾರೆ ಅಂತಹವರಿಗೆ ಅವಕಾಶ ಸಿಗಲಿಲ್ಲ ಕಾಂಗ್ರೆಸ್ ಪಕ್ಷವು ಅವರಿಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ

ಕಾಂಗ್ರೆಸ್ ಪಕ್ಷವು ಯಾವತ್ತೂ ಕೂಡ ತಾಲೂಕು ಸೊಸೈಟಿ, ಪಿಎಲ್ಡಿ ಬ್ಯಾಂಕ್, ಮತ್ತು ಸಹಕಾರಿ ಸಂಸ್ಥೆಗಳ ಚುನಾವಣೆಗಳನ್ನು ಗಂಭೀರವಾಗಿ ತೆಗೆದುಕೊಂಡು ಇರಲಿಲ್ಲ ಕೋಲಾರದಲ್ಲಿ ಶಾಸಕರಾಗಿ ಕೊತ್ತೂರು ಮಂಜುನಾಥ್ ಮತ್ತು ಎಂಎಲ್ಸಿಯಾಗಿ ಅನಿಲ್ ಕುಮಾರ್ ಅವರು ಬಂದ ನಂತರದಲ್ಲಿ ಸಹಕಾರಿ ಸಂಸ್ಥೆಗಳ ಚುನಾವಣೆಯಲ್ಲಿ ಹೋರಾಟ ಮಾಡಿ ಮೈತ್ರಿ ಪಕ್ಷಗಳ ಮಧ್ಯೆ ಗೆಲ್ಲಿಸಿಕೊಂಡಿದ್ದಾರೆ ಹಿಂದಿನ ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಅವಿರೋಧ ಅಂತ ಹೇಳಿ ಬಲಿಷ್ಠ ವ್ಯಕ್ತಿಗಳನ್ನು ಚುನಾವಣಾ ಕಣದಿಂದ ಸರಿಸಿದ್ದರು ಇಲ್ಲದೇ ಹೋಗಿದ್ದರೆ ತಾಲೂಕು ಸೊಸೈಟಿಯಲ್ಲಿ ಸಹ ಕಾಂಗ್ರೆಸ್ ಪಕ್ಷವು ಕೈಹಿಡಿಯುತ್ತಿದ್ದರು ಎಂಬುದನ್ನು ಮೈತ್ರಿ ಪಕ್ಷದ ಮುಖಂಡರಿಗೆ ಮನವರಿಕೆಯಾಗಬೇಕು ಎಂದರು

ಸುಮಾರು ಹತ್ತು ವರ್ಷಗಳ ಕಾಲ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ವರ್ತೂರ್ ಪ್ರಕಾಶ್ ಶಾಸಕರಾಗಿ ಸಚಿವರಾಗಿದ್ದ ಸಂದರ್ಭದಲ್ಲಿ ಯಾವತ್ತೂ ಸಹಕಾರಿ ಸಂಸ್ಥೆಗಳ ಚುನಾವಣೆಯಲ್ಲಿ ಗೆಲುವು ಸಾಧಿಸಲಿಲ್ಲ ಮಾಜಿ ಸಚಿವರಾದ ಸಿ.ಬೈರೇಗೌಡರು ಹಾಗೂ ಕೆ ಶ್ರೀನಿವಾಸಗೌಡರು ಸಹಕಾರಿ ವ್ಯವಸ್ಥೆಗೆ ಹಾಕಿದ ಅಡಿಪಾಯದಲ್ಲಿ ಜೆಡಿಎಸ್‌ ನವರು ಗೆದ್ದು ಬೀಗುತ್ತಿದ್ದಾರೆ ಇದು ಇವತ್ತಿನ ಜೆಡಿಎಸ್‌ ನಲ್ಲಿರುವ ಸಿಎಂಆರ್ ಶ್ರೀನಾಥ್ ಹಾಗೂ ಇನ್ನಿತರ ಮುಖಂಡರು ಹಾಗೂ ಪರದೆ ಹಿಂದೆ ಮುಖವಾಡ ಹಾಕಿಕೊಂಡು ಇರುವವರ ಮುಖಂಡರ ಗೆಲುವು ಅಲ್ಲ ಇವತ್ತು ಮೈತ್ರಿಯಾಗಿ ಅಭ್ಯರ್ಥಿಯಾಗಿ ಪೈಪೋಟಿಯನ್ನು ನೀಡಿದ್ದರೂ ಕಾಂಗ್ರೆಸ್ ಹೆಚ್ಚು ಸ್ಥಾನಗಳು ಪಡೆಯಲು ಸಾಧ್ಯವಾಯಿತು ಮೂರು ಪಕ್ಷಗಳು ಏಕಾಂಗಿಯಾಗಿ ಸ್ಪರ್ಧೆಯಲ್ಲಿ ಇದ್ದಿದ್ದರೆ ಕಾಂಗ್ರೆಸ್ ಸುಲಭವಾಗಿ ಗೆಲ್ಲುತ್ತಿತ್ತು ಆರೋಪ ಮಾಡುವ ಸಂದರ್ಭದಲ್ಲಿ ತಮ್ಮ ಮೈತ್ರಿ ಪಕ್ಷದ ನಡುವಳಿಕೆ ಬಗ್ಗೆ ಅತ್ಮವಿಮರ್ಶೆ ಮಾಡಿಕೊಳ್ಳುವುದು ಸೂಕ್ತ ಎಂದು ಮೈಲಾಂಡಹಳ್ಳಿ ಮುರಳಿ ಹೇಳಿಕೆ ನೀಡಿದ್ದಾರೆ.

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

1 day ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

2 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

3 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

3 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

4 days ago