Categories: ಕೋಲಾರ

ಮೈತ್ರಿ ಪಕ್ಷದ ನಾಯಕತ್ವ ಬೇಸತ್ತು ಶಿವಕುಮಾರ್ ಕಾಂಗ್ರೆಸ್ ಸೇರ್ಪಡೆ

ಕೋಲಾರ: ಪಿಎಲ್ಡಿ ಬ್ಯಾಂಕ್ ಚುನಾವಣೆಯಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿ ಪಕ್ಷದ ಮುಖಂಡರ ನಾಯಕತ್ವದ ವಿರುದ್ದ ಬೇಸತ್ತು ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಕೆಂದಟ್ಟಿ ಎ.ಶಿವಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಹೊರತು ಯಾವುದೇ ಹಣದ ಆಮಿಷಗಳಿಗೆ ಒಳಗಾಗಿ ಪಕ್ಷಕ್ಕೆ ಬಂದಿಲ್ಲ ಆಮಿಷಗಳಿಂದ ಪಕ್ಷ ಸೇರ್ಪಡೆ ಏನಾದರೂ ಇದ್ದರೆ ಅದು ಮೈತ್ರಿ ಪಕ್ಷದಲ್ಲಿ ಮಾತ್ರವೇ ಎಂದು ಬಣಕನಹಳ್ಳಿ ನಟರಾಜ್ ಹೇಳಿಕೆಗೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೈಲಾಂಡಹಳ್ಳಿ ಮುರಳಿ ಟಾಂಗ್ ನೀಡಿದ್ದಾರೆ

ಈ ಕುರಿತು ಪತ್ರಿಕ ಹೇಳಿಕೆ ನೀಡಿದ ಅವರು ಅಧಿಕಾರದ ಆಸೆ ಆಮಿಷಗಳಿಗೆ ಸೇರ್ಪಡೆ ಮಾಡಿಕೊಳ್ಳುವ ಸಂಸ್ಕೃತಿ ಕಾಂಗ್ರೆಸ್ ಪಕ್ಷದಲ್ಲಿ ಇಲ್ಲ ನೂತನ ಅಧ್ಯಕ್ಷ ಶಿವಕುಮಾರ್ ಅವರ ಹಿನ್ನಲೆಯನ್ನು ತಿಳಿದು ಬಣಕನಹಳ್ಳಿ ನಟರಾಜ್ ಮಾತನಾಡಬೇಕು ಅವರ ರಾಜಕೀಯ ಜೀವನದಲ್ಲಿ ಯಾವತ್ತೂ ಅಧಿಕಾರ ಹಣದ ಆಮಿಷಗಳಿಗೆ ಒಳಗಾಗುವ ವ್ಯಕ್ತಿಯಲ್ಲ ಮೈತ್ರಿ ಪಕ್ಷದಲ್ಲಿನ ನಾಯಕರು ಮುಖಂಡರು ವರ್ತನೆ ಸರಿ ಇಲ್ಲದ ಕಾರಣ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಸೇರ್ಪಡೆಯಾಗಿದ್ದಾರೆ ಮೂರು ಬಾರಿ ಪಿಎಲ್ಡಿ ಬ್ಯಾಂಕ್ ನಿರ್ದೇಶಕರಾಗಿ ಸಾಧ್ಯವಾದಷ್ಟು ರೈತರಿಗೆ ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ಕೆಲಸವನ್ನು ಮಾಡಿದ್ದಾರೆ ಅಂತಹವರಿಗೆ ಅವಕಾಶ ಸಿಗಲಿಲ್ಲ ಕಾಂಗ್ರೆಸ್ ಪಕ್ಷವು ಅವರಿಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ

ಕಾಂಗ್ರೆಸ್ ಪಕ್ಷವು ಯಾವತ್ತೂ ಕೂಡ ತಾಲೂಕು ಸೊಸೈಟಿ, ಪಿಎಲ್ಡಿ ಬ್ಯಾಂಕ್, ಮತ್ತು ಸಹಕಾರಿ ಸಂಸ್ಥೆಗಳ ಚುನಾವಣೆಗಳನ್ನು ಗಂಭೀರವಾಗಿ ತೆಗೆದುಕೊಂಡು ಇರಲಿಲ್ಲ ಕೋಲಾರದಲ್ಲಿ ಶಾಸಕರಾಗಿ ಕೊತ್ತೂರು ಮಂಜುನಾಥ್ ಮತ್ತು ಎಂಎಲ್ಸಿಯಾಗಿ ಅನಿಲ್ ಕುಮಾರ್ ಅವರು ಬಂದ ನಂತರದಲ್ಲಿ ಸಹಕಾರಿ ಸಂಸ್ಥೆಗಳ ಚುನಾವಣೆಯಲ್ಲಿ ಹೋರಾಟ ಮಾಡಿ ಮೈತ್ರಿ ಪಕ್ಷಗಳ ಮಧ್ಯೆ ಗೆಲ್ಲಿಸಿಕೊಂಡಿದ್ದಾರೆ ಹಿಂದಿನ ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಅವಿರೋಧ ಅಂತ ಹೇಳಿ ಬಲಿಷ್ಠ ವ್ಯಕ್ತಿಗಳನ್ನು ಚುನಾವಣಾ ಕಣದಿಂದ ಸರಿಸಿದ್ದರು ಇಲ್ಲದೇ ಹೋಗಿದ್ದರೆ ತಾಲೂಕು ಸೊಸೈಟಿಯಲ್ಲಿ ಸಹ ಕಾಂಗ್ರೆಸ್ ಪಕ್ಷವು ಕೈಹಿಡಿಯುತ್ತಿದ್ದರು ಎಂಬುದನ್ನು ಮೈತ್ರಿ ಪಕ್ಷದ ಮುಖಂಡರಿಗೆ ಮನವರಿಕೆಯಾಗಬೇಕು ಎಂದರು

ಸುಮಾರು ಹತ್ತು ವರ್ಷಗಳ ಕಾಲ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ವರ್ತೂರ್ ಪ್ರಕಾಶ್ ಶಾಸಕರಾಗಿ ಸಚಿವರಾಗಿದ್ದ ಸಂದರ್ಭದಲ್ಲಿ ಯಾವತ್ತೂ ಸಹಕಾರಿ ಸಂಸ್ಥೆಗಳ ಚುನಾವಣೆಯಲ್ಲಿ ಗೆಲುವು ಸಾಧಿಸಲಿಲ್ಲ ಮಾಜಿ ಸಚಿವರಾದ ಸಿ.ಬೈರೇಗೌಡರು ಹಾಗೂ ಕೆ ಶ್ರೀನಿವಾಸಗೌಡರು ಸಹಕಾರಿ ವ್ಯವಸ್ಥೆಗೆ ಹಾಕಿದ ಅಡಿಪಾಯದಲ್ಲಿ ಜೆಡಿಎಸ್‌ ನವರು ಗೆದ್ದು ಬೀಗುತ್ತಿದ್ದಾರೆ ಇದು ಇವತ್ತಿನ ಜೆಡಿಎಸ್‌ ನಲ್ಲಿರುವ ಸಿಎಂಆರ್ ಶ್ರೀನಾಥ್ ಹಾಗೂ ಇನ್ನಿತರ ಮುಖಂಡರು ಹಾಗೂ ಪರದೆ ಹಿಂದೆ ಮುಖವಾಡ ಹಾಕಿಕೊಂಡು ಇರುವವರ ಮುಖಂಡರ ಗೆಲುವು ಅಲ್ಲ ಇವತ್ತು ಮೈತ್ರಿಯಾಗಿ ಅಭ್ಯರ್ಥಿಯಾಗಿ ಪೈಪೋಟಿಯನ್ನು ನೀಡಿದ್ದರೂ ಕಾಂಗ್ರೆಸ್ ಹೆಚ್ಚು ಸ್ಥಾನಗಳು ಪಡೆಯಲು ಸಾಧ್ಯವಾಯಿತು ಮೂರು ಪಕ್ಷಗಳು ಏಕಾಂಗಿಯಾಗಿ ಸ್ಪರ್ಧೆಯಲ್ಲಿ ಇದ್ದಿದ್ದರೆ ಕಾಂಗ್ರೆಸ್ ಸುಲಭವಾಗಿ ಗೆಲ್ಲುತ್ತಿತ್ತು ಆರೋಪ ಮಾಡುವ ಸಂದರ್ಭದಲ್ಲಿ ತಮ್ಮ ಮೈತ್ರಿ ಪಕ್ಷದ ನಡುವಳಿಕೆ ಬಗ್ಗೆ ಅತ್ಮವಿಮರ್ಶೆ ಮಾಡಿಕೊಳ್ಳುವುದು ಸೂಕ್ತ ಎಂದು ಮೈಲಾಂಡಹಳ್ಳಿ ಮುರಳಿ ಹೇಳಿಕೆ ನೀಡಿದ್ದಾರೆ.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

7 hours ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

2 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

2 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

3 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

3 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

3 days ago