Categories: ಕೋಲಾರ

ಮೈತ್ರಿ ಪಕ್ಷದ ನಾಯಕತ್ವ ಬೇಸತ್ತು ಶಿವಕುಮಾರ್ ಕಾಂಗ್ರೆಸ್ ಸೇರ್ಪಡೆ

ಕೋಲಾರ: ಪಿಎಲ್ಡಿ ಬ್ಯಾಂಕ್ ಚುನಾವಣೆಯಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿ ಪಕ್ಷದ ಮುಖಂಡರ ನಾಯಕತ್ವದ ವಿರುದ್ದ ಬೇಸತ್ತು ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಕೆಂದಟ್ಟಿ ಎ.ಶಿವಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಹೊರತು ಯಾವುದೇ ಹಣದ ಆಮಿಷಗಳಿಗೆ ಒಳಗಾಗಿ ಪಕ್ಷಕ್ಕೆ ಬಂದಿಲ್ಲ ಆಮಿಷಗಳಿಂದ ಪಕ್ಷ ಸೇರ್ಪಡೆ ಏನಾದರೂ ಇದ್ದರೆ ಅದು ಮೈತ್ರಿ ಪಕ್ಷದಲ್ಲಿ ಮಾತ್ರವೇ ಎಂದು ಬಣಕನಹಳ್ಳಿ ನಟರಾಜ್ ಹೇಳಿಕೆಗೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೈಲಾಂಡಹಳ್ಳಿ ಮುರಳಿ ಟಾಂಗ್ ನೀಡಿದ್ದಾರೆ

ಈ ಕುರಿತು ಪತ್ರಿಕ ಹೇಳಿಕೆ ನೀಡಿದ ಅವರು ಅಧಿಕಾರದ ಆಸೆ ಆಮಿಷಗಳಿಗೆ ಸೇರ್ಪಡೆ ಮಾಡಿಕೊಳ್ಳುವ ಸಂಸ್ಕೃತಿ ಕಾಂಗ್ರೆಸ್ ಪಕ್ಷದಲ್ಲಿ ಇಲ್ಲ ನೂತನ ಅಧ್ಯಕ್ಷ ಶಿವಕುಮಾರ್ ಅವರ ಹಿನ್ನಲೆಯನ್ನು ತಿಳಿದು ಬಣಕನಹಳ್ಳಿ ನಟರಾಜ್ ಮಾತನಾಡಬೇಕು ಅವರ ರಾಜಕೀಯ ಜೀವನದಲ್ಲಿ ಯಾವತ್ತೂ ಅಧಿಕಾರ ಹಣದ ಆಮಿಷಗಳಿಗೆ ಒಳಗಾಗುವ ವ್ಯಕ್ತಿಯಲ್ಲ ಮೈತ್ರಿ ಪಕ್ಷದಲ್ಲಿನ ನಾಯಕರು ಮುಖಂಡರು ವರ್ತನೆ ಸರಿ ಇಲ್ಲದ ಕಾರಣ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಸೇರ್ಪಡೆಯಾಗಿದ್ದಾರೆ ಮೂರು ಬಾರಿ ಪಿಎಲ್ಡಿ ಬ್ಯಾಂಕ್ ನಿರ್ದೇಶಕರಾಗಿ ಸಾಧ್ಯವಾದಷ್ಟು ರೈತರಿಗೆ ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ಕೆಲಸವನ್ನು ಮಾಡಿದ್ದಾರೆ ಅಂತಹವರಿಗೆ ಅವಕಾಶ ಸಿಗಲಿಲ್ಲ ಕಾಂಗ್ರೆಸ್ ಪಕ್ಷವು ಅವರಿಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ

ಕಾಂಗ್ರೆಸ್ ಪಕ್ಷವು ಯಾವತ್ತೂ ಕೂಡ ತಾಲೂಕು ಸೊಸೈಟಿ, ಪಿಎಲ್ಡಿ ಬ್ಯಾಂಕ್, ಮತ್ತು ಸಹಕಾರಿ ಸಂಸ್ಥೆಗಳ ಚುನಾವಣೆಗಳನ್ನು ಗಂಭೀರವಾಗಿ ತೆಗೆದುಕೊಂಡು ಇರಲಿಲ್ಲ ಕೋಲಾರದಲ್ಲಿ ಶಾಸಕರಾಗಿ ಕೊತ್ತೂರು ಮಂಜುನಾಥ್ ಮತ್ತು ಎಂಎಲ್ಸಿಯಾಗಿ ಅನಿಲ್ ಕುಮಾರ್ ಅವರು ಬಂದ ನಂತರದಲ್ಲಿ ಸಹಕಾರಿ ಸಂಸ್ಥೆಗಳ ಚುನಾವಣೆಯಲ್ಲಿ ಹೋರಾಟ ಮಾಡಿ ಮೈತ್ರಿ ಪಕ್ಷಗಳ ಮಧ್ಯೆ ಗೆಲ್ಲಿಸಿಕೊಂಡಿದ್ದಾರೆ ಹಿಂದಿನ ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಅವಿರೋಧ ಅಂತ ಹೇಳಿ ಬಲಿಷ್ಠ ವ್ಯಕ್ತಿಗಳನ್ನು ಚುನಾವಣಾ ಕಣದಿಂದ ಸರಿಸಿದ್ದರು ಇಲ್ಲದೇ ಹೋಗಿದ್ದರೆ ತಾಲೂಕು ಸೊಸೈಟಿಯಲ್ಲಿ ಸಹ ಕಾಂಗ್ರೆಸ್ ಪಕ್ಷವು ಕೈಹಿಡಿಯುತ್ತಿದ್ದರು ಎಂಬುದನ್ನು ಮೈತ್ರಿ ಪಕ್ಷದ ಮುಖಂಡರಿಗೆ ಮನವರಿಕೆಯಾಗಬೇಕು ಎಂದರು

ಸುಮಾರು ಹತ್ತು ವರ್ಷಗಳ ಕಾಲ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ವರ್ತೂರ್ ಪ್ರಕಾಶ್ ಶಾಸಕರಾಗಿ ಸಚಿವರಾಗಿದ್ದ ಸಂದರ್ಭದಲ್ಲಿ ಯಾವತ್ತೂ ಸಹಕಾರಿ ಸಂಸ್ಥೆಗಳ ಚುನಾವಣೆಯಲ್ಲಿ ಗೆಲುವು ಸಾಧಿಸಲಿಲ್ಲ ಮಾಜಿ ಸಚಿವರಾದ ಸಿ.ಬೈರೇಗೌಡರು ಹಾಗೂ ಕೆ ಶ್ರೀನಿವಾಸಗೌಡರು ಸಹಕಾರಿ ವ್ಯವಸ್ಥೆಗೆ ಹಾಕಿದ ಅಡಿಪಾಯದಲ್ಲಿ ಜೆಡಿಎಸ್‌ ನವರು ಗೆದ್ದು ಬೀಗುತ್ತಿದ್ದಾರೆ ಇದು ಇವತ್ತಿನ ಜೆಡಿಎಸ್‌ ನಲ್ಲಿರುವ ಸಿಎಂಆರ್ ಶ್ರೀನಾಥ್ ಹಾಗೂ ಇನ್ನಿತರ ಮುಖಂಡರು ಹಾಗೂ ಪರದೆ ಹಿಂದೆ ಮುಖವಾಡ ಹಾಕಿಕೊಂಡು ಇರುವವರ ಮುಖಂಡರ ಗೆಲುವು ಅಲ್ಲ ಇವತ್ತು ಮೈತ್ರಿಯಾಗಿ ಅಭ್ಯರ್ಥಿಯಾಗಿ ಪೈಪೋಟಿಯನ್ನು ನೀಡಿದ್ದರೂ ಕಾಂಗ್ರೆಸ್ ಹೆಚ್ಚು ಸ್ಥಾನಗಳು ಪಡೆಯಲು ಸಾಧ್ಯವಾಯಿತು ಮೂರು ಪಕ್ಷಗಳು ಏಕಾಂಗಿಯಾಗಿ ಸ್ಪರ್ಧೆಯಲ್ಲಿ ಇದ್ದಿದ್ದರೆ ಕಾಂಗ್ರೆಸ್ ಸುಲಭವಾಗಿ ಗೆಲ್ಲುತ್ತಿತ್ತು ಆರೋಪ ಮಾಡುವ ಸಂದರ್ಭದಲ್ಲಿ ತಮ್ಮ ಮೈತ್ರಿ ಪಕ್ಷದ ನಡುವಳಿಕೆ ಬಗ್ಗೆ ಅತ್ಮವಿಮರ್ಶೆ ಮಾಡಿಕೊಳ್ಳುವುದು ಸೂಕ್ತ ಎಂದು ಮೈಲಾಂಡಹಳ್ಳಿ ಮುರಳಿ ಹೇಳಿಕೆ ನೀಡಿದ್ದಾರೆ.

Ramesh Babu

Journalist

Recent Posts

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

2 minutes ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

1 hour ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

4 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

21 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

23 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

23 hours ago