ಮೈದುಂಬಿ ಹರಿದ ಜಕ್ಕಲಮಡಗು ಜಲಾಶಯ: ಜಲಾಶಯಕ್ಕೆ ಶಾಸಕ ಧೀರಜ್ ಮುನಿರಾಜ್, ನಗರಸಭೆ ಅಧ್ಯಕ್ಷೆ ಹಾಗೂ ಸದಸ್ಯರ ಭೇಟಿ: ನಾಳೆ ಶಾಸಕ ಹಾಗೂ ಸಂಸದರಿಂದ ಬಾಗಿನ ಅರ್ಪಣೆ

ಚಿಕ್ಕಬಳ್ಳಾಪುರ ಮತ್ತು ದೊಡ್ಡಬಳ್ಳಾಪುರ ತಾಲೂಕಿನ ಗಡಿಭಾಗದಲ್ಲಿರುವ ಜಕ್ಕಲಮಡಗು ಜಲಾಶಯ ಅವಳಿ ನಗರಗಳಿಗೆ ಕುಡಿಯುವ ನೀರು ಪೂರೈಸುವ ನೀರಿನ ಸೆಲೆಯಾಗಿದ್ದು, ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದ ಇಂದು ಮುಂಜಾನೆ ಜಕ್ಕಲಮಡುಗು ಜಲಾಶಯ ಸಂಪೂರ್ಣ ಭರ್ತಿಯಾಗಿ ಕೋಡಿಬಿದ್ದಿದೆ, ಜಲಾಶಯದ ನೀರನ್ನೇ ನಂಬಿರುವ ಚಿಕ್ಕಬಳ್ಳಾಪುರ ಮತ್ತು ದೊಡ್ಡಬಳ್ಳಾಪುರ ಜನರ ಮುಖದಲ್ಲಿ ಮಂದಹಾಸ ಮೂಡಿದೆ.

ಈ ಹಿನ್ನೆಲೆ ಜಕ್ಕಲಮಡಗು ಜಲಾಶಯಕ್ಕೆ ಇಂದು ದೊಡ್ಡಬಳ್ಳಾಪುರ ಶಾಸಕ‌ ಧೀರಜ್ ಮುನಿರಾಜ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವರ್, ನಗರಸಭೆ ಸದಸ್ಯರು ಭೇಟಿ ನೀಡಿ‌ ಕೋಡಿ ಬಿದ್ದಿರುವ ದೃಶ್ಯ ಕಣ್ತುಂಬಿಕೊಂಡರು.

ನಾಳೆ ಬೆಳಗ್ಗೆ 11ಕ್ಕೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ.ಕೆ.ಸುಧಾಕರ್ ಹಾಗೂ ಶಾಸಕ ಧೀರಜ್ ಮುನಿರಾಜ್ ಅವರು ಜಕ್ಕಲಮಡಗು ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲಿದ್ದಾರೆ ಎಂಬ ಮಾಹಿತಿ ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಜಕ್ಕಲಮಡು ಜಲಾಶಯ 4390 ದಶಲಕ್ಷ ಲೀಟರ್ ಸಂಗ್ರಹಣಾ ಸಾಮರ್ಥ್ಯ, 51.25 ಚ.ಮೀ. ಶೇಖರಣಾ ವಿಸ್ತಿರ್ಣ ಹೊಂದಿದೆ. ಈ ಜಲಾಶಯದಿಂದ ಚಿಕ್ಕಬಳ್ಳಾಪುರ ನಗರ ಶೇ.68 ಪಾಲು ಪಡೆದರೆ, ದೊಡ್ಡಬಳ್ಳಾಪುರ ನಗರಕ್ಕೆ ಶೇ.32 ಪಾಲಿದೆ.

ಈ ಬಾರಿ ಜಲಾಶಯ ತುಂಬಿ ಹರಿಯಲಿದೆ ಎಂಬ ಜನರ ಆಶಾಭಾವನೆಗೆ ತಕ್ಕಂತೆ ಉತ್ತಮ ಮಳೆಯಾಗಿ ಜಲಾಶಯ ತುಂಬಿರುವುದು ಎರಡು ನಗರಗಳ ಜನತೆಗೆ ಅತ್ಯಂತ ಸಂತಸದ ವಿಷಯವಾಗಿದೆ.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

22 minutes ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

12 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

13 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

14 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

14 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

22 hours ago