ಚಿಕ್ಕಬಳ್ಳಾಪುರ ಮತ್ತು ದೊಡ್ಡಬಳ್ಳಾಪುರ ತಾಲೂಕಿನ ಗಡಿಭಾಗದಲ್ಲಿರುವ ಜಕ್ಕಲಮಡಗು ಜಲಾಶಯ ಅವಳಿ ನಗರಗಳಿಗೆ ಕುಡಿಯುವ ನೀರು ಪೂರೈಸುವ ನೀರಿನ ಸೆಲೆಯಾಗಿದ್ದು, ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದ ಇಂದು ಮುಂಜಾನೆ ಜಕ್ಕಲಮಡುಗು ಜಲಾಶಯ ಸಂಪೂರ್ಣ ಭರ್ತಿಯಾಗಿ ಕೋಡಿಬಿದ್ದಿದೆ, ಜಲಾಶಯದ ನೀರನ್ನೇ ನಂಬಿರುವ ಚಿಕ್ಕಬಳ್ಳಾಪುರ ಮತ್ತು ದೊಡ್ಡಬಳ್ಳಾಪುರ ಜನರ ಮುಖದಲ್ಲಿ ಮಂದಹಾಸ ಮೂಡಿದೆ.
ಈ ಹಿನ್ನೆಲೆ ಜಕ್ಕಲಮಡಗು ಜಲಾಶಯಕ್ಕೆ ಇಂದು ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವರ್, ನಗರಸಭೆ ಸದಸ್ಯರು ಭೇಟಿ ನೀಡಿ ಕೋಡಿ ಬಿದ್ದಿರುವ ದೃಶ್ಯ ಕಣ್ತುಂಬಿಕೊಂಡರು.
ಜಕ್ಕಲಮಡು ಜಲಾಶಯ 4390 ದಶಲಕ್ಷ ಲೀಟರ್ ಸಂಗ್ರಹಣಾ ಸಾಮರ್ಥ್ಯ, 51.25 ಚ.ಮೀ. ಶೇಖರಣಾ ವಿಸ್ತಿರ್ಣ ಹೊಂದಿದೆ. ಈ ಜಲಾಶಯದಿಂದ ಚಿಕ್ಕಬಳ್ಳಾಪುರ ನಗರ ಶೇ.68 ಪಾಲು ಪಡೆದರೆ, ದೊಡ್ಡಬಳ್ಳಾಪುರ ನಗರಕ್ಕೆ ಶೇ.32 ಪಾಲಿದೆ.
ಈ ಬಾರಿ ಜಲಾಶಯ ತುಂಬಿ ಹರಿಯಲಿದೆ ಎಂಬ ಜನರ ಆಶಾಭಾವನೆಗೆ ತಕ್ಕಂತೆ ಉತ್ತಮ ಮಳೆಯಾಗಿ ಜಲಾಶಯ ತುಂಬಿರುವುದು ಎರಡು ನಗರಗಳ ಜನತೆಗೆ ಅತ್ಯಂತ ಸಂತಸದ ವಿಷಯವಾಗಿದೆ.
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…
ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…