Categories: Home

ಮೈದುಂಬಿ ಹರಿದ ಜಕ್ಕಲಮಡಗು:‌4390 ದಶಲಕ್ಷ ಲೀಟರ್ ನೀರು ಸಂಗ್ರಹಣಾ ಸಾಮರ್ಥ್ಯ: 51.25 ಚ.ಮೀ. ಶೇಖರಣಾ ವಿಸ್ತಿರ್ಣ

ಚಿಕ್ಕಬಳ್ಳಾಪುರ ಮತ್ತು ದೊಡ್ಡಬಳ್ಳಾಪುರ ತಾಲೂಕಿನ ಗಡಿಭಾಗದಲ್ಲಿರುವ ಜಕ್ಕಲಮಡಗು ಜಲಾಶಯ ಅವಳಿ ನಗರಗಳಿಗೆ ಕುಡಿಯುವ ನೀರು ಪೂರೈಸುವ ನೀರಿನ ಸೆಲೆಯಾಗಿದ್ದು, ಕಳೆದ ವರ್ಷ ಮಳೆಯ ಕೊರತೆಯಿಂದ ಜಲಾಶಯ ಕೋಡಿ ಬಿದ್ದಿರಲಿಲ್ಲ.

ಎರಡು ವರ್ಷಗಳ ಹಿಂದೆ, ಅಂದರೆ, 2022ರ ಜೂನ್ ತಿಂಗಳಲ್ಲೇ ಕೋಡಿಬಿದ್ದು ಎರಡು ನಗರಗಳಲ್ಲಿ ಕಳೆದ ಎರಡು ವರ್ಷದಿಂದ ಯಾವುದೇ ನೀರಿನ ಸಮಸ್ಯೆಯಾಗದಂತ ಪರಿಸ್ಥಿತಿ ಇತ್ತು. ಇದೀಗ ಮತ್ತೊಮ್ಮೆ ಜಲಾಶಯ ತುಂಬಿರುವುದು ಇನ್ನೆರಡು ವರ್ಷಗಳ ನೀರಿನ ಸಮಸ್ಯೆಯನ್ನ ದೂರ ಮಾಡಿದೆ.

ಜಕ್ಕಲಮಡು ಜಲಾಶಯ 4390 ದಶಲಕ್ಷ ಲೀಟರ್ ಸಂಗ್ರಹಣಾ ಸಾಮರ್ಥ್ಯ, 51.25 ಚ.ಮೀ. ಶೇಖರಣಾ ವಿಸ್ತಿರ್ಣ ಹೊಂದಿದೆ. ಈ ಜಲಾಶಯದಿಂದ ಚಿಕ್ಕಬಳ್ಳಾಪುರ ನಗರ ಶೇ.68 ಪಾಲು ಪಡೆದರೆ, ದೊಡ್ಡಬಳ್ಳಾಪುರ ನಗರಕ್ಕೆ ಶೇ.32 ಪಾಲಿದೆ.

ಈ ಬಾರಿ ಜಲಾಶಯ ತುಂಬಿ ಹರಿಯಲಿದೆ ಎಂಬ ಜನರ ಆಶಾಭಾವನೆಗೆ ತಕ್ಕಂತೆ ಉತ್ತಮ ಮಳೆಯಾಗಿ ಜಲಾಶಯ ತುಂಬಿರುವುದು ಎರಡು ನಗರಗಳ ಜನತೆಗೆ ಅತ್ಯಂತ ಸಂತಸದ ವಿಷಯವಾಗಿದೆ.

Ramesh Babu

Journalist

Recent Posts

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

8 hours ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

14 hours ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

15 hours ago

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

18 hours ago

ಅಭಿಮಾನಿಗಳ ಅತಿರೇಕ….ಯಾಕಪ್ಪಾ, ಏನಾಗಿದೆ ಸಮಸ್ಯೆ…?

ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…

19 hours ago

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

2 days ago