ಮೈಸೂರಿನಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ ನಿರ್ಮಾಣಕ್ಕೆ ನಿರ್ಧಾರ-ಸಿಎಂ ಸಿದ್ದರಾಮಯ್ಯ

ವಿಶ್ವದರ್ಜೆಯ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ. ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು. ಇದಕ್ಕಾಗಿ ವಿಶ್ವ ದರ್ಜೆಯ ಅತ್ಯುನ್ನತ ಗುಣಮಟ್ಟದ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತಿದ್ದೇವೆ. ತಂತ್ರಜ್ಞಾನದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಸೆಯುವ ಸಿನಿಮಾಗಳನ್ನು ವಿಶ್ವದರ್ಜೆಯ ಗುಣಮಟ್ಟದಲ್ಲಿ ಇಲ್ಲಿ ನಿರ್ಮಾಣ ಆಗಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ. ಇದನ್ನು ನೋಡುಗರು ಸದುಪಯೋಗಪಡಿಸಿಕೊಳ್ಳಬೇಕು. ನಮ್ಮಲ್ಲಿ ಅಸಹನೆ ಹೆಚ್ಚುತ್ತಿರುವುದರಿಂದ ಸಮಾಜದಲ್ಲಿ ಅಸಂತೋಷ ಹೆಚ್ಚುತ್ತಿದೆ. ಸಂಪತ್ತಿನ ಅಸಮಾನ ಹಂಚಿಕೆ ಈ ಅಸಂತೋಷಕ್ಕೆ ಕಾರಣ. ದೇಶದ 1% ಜನರ ಕೈಯಲ್ಲಿ ದೇಶದ 50% ಸಂಪತ್ತು ಸೇರಿಕೊಂಡಿದೆ. ಇದಕ್ಕೆ ಕಲಾ ಮಾಧ್ಯಮ ಆಗಿರುವ ಸಿನಿಮಾಗಳು ಪರಿಹಾರ ಹುಡುಕಬೇಕು. ಸಮಾಜವನ್ನು ಕಲಾ ಮಾಧ್ಯಮದ ಮೂಲಕ ಬೆಸೆಯಬೇಕು ಎಂದರು.

ಡಾ.ರಾಜ್ ಕುಮಾರ್ ಅವರ ಸಿನಿಮಾಗಳಲ್ಲಿದ್ದ ಮೌಲ್ಯಗಳು ಮತ್ತು ಘನತೆ ಈಗಿನ ಸಿನಿಮಾಗಳಲ್ಲಿ ಕಾಣುತ್ತಿಲ್ಲ. ರಾಜ್ ಕುಮಾರ್ ಸಿನಿಮಾಗಳಲ್ಲಿ ಸೌಹಾರ್ದ ಮತ್ತು ಮಾನವೀಯ ಮೌಲ್ಯಗಳು ತುಂಬಿರುತ್ತಿದ್ದವು. ಹೀಗಾಗಿ ಸರ್ವರಿಗೂ ಅವರ ಸಿನಿಮಾಗಳು ಇಷ್ಟ ಆಗುತ್ತಿದ್ದವು ಎಂದು ತಿಳಿಸಿದರು.

ಮೌಡ್ಯಗಳನ್ನು ಬಿತ್ತುವ, ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾದ ಸಿನಿಮಾಗಳು ಸಮಾಜಕ್ಕೆ ಒಳ್ಳೆಯದಲ್ಲ. ಬಸವಣ್ಣನವರು ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಸಿನಿಮಾಗಳು ಮತ್ತೆ ಮೌಡ್ಯಗಳನ್ನು ಬಿತ್ತುವುದಕ್ಕೆ ಹೋಗಬಾರದು. ಈಗ ತಂತ್ರಜ್ಞಾನ ಬೆಳೆದು ಕೃತಕ ಬುದ್ದಿಮತ್ತೆವರೆಗೂ ಬೆಳೆದು ಬಂದಿದೆ. ನಮ್ಮ ಬದುಕನ್ನು ಪ್ರತಿಬಿಂಬಿಸುವ, ನಮ್ಮ ತಳಮಳಗಳಿಗೆ ಪರಿಹಾರ ಹುಡುಕುವ ಸಿನಿಮಾಗಳು ಬಂದಾಗ ಅಂತಹ ಸಿನಿಮಾಗಳು ಶಾಶ್ವತವಾಗಿ ಸಮಾಜದಲ್ಲಿ ಉಳಿಯುತ್ತವೆ ಎಂದು ಹೇಳಿದರು.

ಬೆಂಗಳೂರು, ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲವೂ ಇದೆ. ತಂತ್ರಜ್ಞಾನದ ಅವಕಾಶಗಳನ್ನು ಬಳಸಿಕೊಂಡು ಉತ್ತಮ‌ ಸಿನಿಮಾಗಳನ್ನು ಮಾಡಿದರೆ ಸಮಾಜಕ್ಕೆ ಒಳ್ಳೆಯದಾಗುತ್ತದೆ. ಸಿನಿಮಾ ಕ್ಷೇತ್ರವೂ ಪ್ರಗತಿ ಕಾಣುತ್ತದೆ. ಈ ದಿಕ್ಕಿನಲ್ಲಿ ಸಿನಿಮಾ ಜಗತ್ತು ಮಾನವೀಯಗೊಳ್ಳಲಿ ಎಂದರು.

Ramesh Babu

Journalist

Recent Posts

ಸೂಕ್ತ ಸಮಯದಲ್ಲಿ ಸಿಗದ ಚಿಕಿತ್ಸೆ: 9 ತಿಂಗಳ ತುಂಬು ಗರ್ಭಿಣಿ ಆಸ್ಪತ್ರೆಯಲ್ಲಿ ಸಾವು: ಮುಗಿಲು ಮುಟ್ಟಿದ ಕುಟುಂಬಸ್ಥರ‌ ಆಕ್ರಂದನ

ದೊಡ್ಡಬಳ್ಳಾಪುರ ತಾಯಿ-ಮಗು ಆಸ್ಪತ್ರೆಯಲ್ಲಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ 9 ತಿಂಗಳ ತುಂಬು ಗರ್ಭಿಣಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಇಂದು…

3 hours ago

ಪ್ರಜ್ವಲ್ ರೇವಣ್ಣ….ಶಿಕ್ಷೆಯ ಪ್ರಮಾಣ ಆದರ್ಶವೇ ಅಥವಾ ಅತಿರೇಕವೇ……?

ಎರಡು ಮುಖಗಳ, ವಿವಿಧ ಆಯಾಮಗಳ ಒಂದು ವಿಮರ್ಶೆ. ಭಾರತದ ಸಂವಿಧಾನ ಪ್ರತಿಪಾದಿಸುವ ಆಶಯಗಳ ಹಿನ್ನೆಲೆಯಲ್ಲಿ....... ಭಾರತದ ಸಂವಿಧಾನ ಮತ್ತು ಅದರ…

5 hours ago

ಕಂದಾಯ ದಾಖಲೆಗಳ ಗಣಕೀಕರಣ: ಭೂ ದಾಖಲೆಗಳ ರಕ್ಷಣೆ: ನಕಲಿಗೆ ಬ್ರೇಕ್

ದೊಡ್ಡಬಳ್ಳಾಪುರ: ಕಂದಾಯ ಇಲಾಖೆಯು ಭೂ ಸುರಕ್ಷಾ ಮಹತ್ವಾಕಾಂಕ್ಷಿ ಯೋಜನೆಯಡಿಯಲ್ಲಿ ತಾಲ್ಲೂಕು ಕಚೇರಿ, ಎ.ಸಿ ಕಚೇರಿ ಮತ್ತು ಡಿ.ಸಿ ಕಚೇರಿಗಳಲ್ಲಿರುವ ಪ್ರಮುಖ…

5 hours ago

ತ್ಯಾಜ್ಯ ಸುರಿಯುವ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು- ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರದ ಹಲವು ಭಾಗಗಳಲ್ಲಿ ಕೆಲವು ಕಾರ್ಖಾನೆಗಳು ಕಲುಷಿತ ಕೆಮಿಕಲ್ ತ್ಯಾಜ್ಯ, ಇನ್ನಿತರ ತ್ಯಾಜ್ಯವನ್ನು ಕೆರೆಗಳಿಗೆ, ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದಾರೆ. ಇದರಿಂದ…

20 hours ago

ಮಾತೃ ಹೃದಯಿ ಕರ್ನಾಟಕ ಸರ್ಕಾರದಿಂದ “ಕೂಸಿನ ಮನೆ” ಯೋಜನೆ

ಕೂಸು ಇದ್ದ ಮನಿಗ ಬೀಸಣಿಕೆ ಯಾತಕ ? ಕೂಸು ಕಂದಯ್ಯ ಒಳ ಹೊರಗ ಆಡಿದರ ಬೀಸಣಿಕೆ ಗಾಳಿ ಸುಳಿದಾವ. ನಮ್ಮ…

22 hours ago

ದೊಡ್ಡಬಳ್ಳಾಪುರ ತಾಲೂಕಿನಿಂದ ಜಿಲ್ಲಾಸ್ಪತ್ರೆ ಕೈತಪ್ಪಲ್ಲ: ಕೈತಪ್ಪಲು ನಾನು ಬಿಡೋದಿಲ್ಲ- ತಾಲೂಕಿನಲ್ಲಿ ಜಿಲ್ಲಾಸ್ಪತ್ರೆ  ಕರ್ತವ್ಯ ನಿರ್ವಹಿಸುವಂತೆ ಮಾಡಿಯೇ ತೀರುತ್ತೇನೆ- ಶಾಸಕ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ ತಾಲೂಕಿಗೆ ಮಂಜೂರಾಗಿದ್ದ ಜಿಲ್ಲಾಸ್ಪತ್ರೆಯನ್ನು ದೇವನಹಳ್ಳಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಸುಳ್ಳು ಮಾಹಿತಿ ತಾಲೂಕಿನ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಇದಕ್ಕೆ…

1 day ago