ಮೈಸೂರಿನಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ ನಿರ್ಮಾಣಕ್ಕೆ ನಿರ್ಧಾರ-ಸಿಎಂ ಸಿದ್ದರಾಮಯ್ಯ

ವಿಶ್ವದರ್ಜೆಯ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ. ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು. ಇದಕ್ಕಾಗಿ ವಿಶ್ವ ದರ್ಜೆಯ ಅತ್ಯುನ್ನತ ಗುಣಮಟ್ಟದ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತಿದ್ದೇವೆ. ತಂತ್ರಜ್ಞಾನದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಸೆಯುವ ಸಿನಿಮಾಗಳನ್ನು ವಿಶ್ವದರ್ಜೆಯ ಗುಣಮಟ್ಟದಲ್ಲಿ ಇಲ್ಲಿ ನಿರ್ಮಾಣ ಆಗಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ. ಇದನ್ನು ನೋಡುಗರು ಸದುಪಯೋಗಪಡಿಸಿಕೊಳ್ಳಬೇಕು. ನಮ್ಮಲ್ಲಿ ಅಸಹನೆ ಹೆಚ್ಚುತ್ತಿರುವುದರಿಂದ ಸಮಾಜದಲ್ಲಿ ಅಸಂತೋಷ ಹೆಚ್ಚುತ್ತಿದೆ. ಸಂಪತ್ತಿನ ಅಸಮಾನ ಹಂಚಿಕೆ ಈ ಅಸಂತೋಷಕ್ಕೆ ಕಾರಣ. ದೇಶದ 1% ಜನರ ಕೈಯಲ್ಲಿ ದೇಶದ 50% ಸಂಪತ್ತು ಸೇರಿಕೊಂಡಿದೆ. ಇದಕ್ಕೆ ಕಲಾ ಮಾಧ್ಯಮ ಆಗಿರುವ ಸಿನಿಮಾಗಳು ಪರಿಹಾರ ಹುಡುಕಬೇಕು. ಸಮಾಜವನ್ನು ಕಲಾ ಮಾಧ್ಯಮದ ಮೂಲಕ ಬೆಸೆಯಬೇಕು ಎಂದರು.

ಡಾ.ರಾಜ್ ಕುಮಾರ್ ಅವರ ಸಿನಿಮಾಗಳಲ್ಲಿದ್ದ ಮೌಲ್ಯಗಳು ಮತ್ತು ಘನತೆ ಈಗಿನ ಸಿನಿಮಾಗಳಲ್ಲಿ ಕಾಣುತ್ತಿಲ್ಲ. ರಾಜ್ ಕುಮಾರ್ ಸಿನಿಮಾಗಳಲ್ಲಿ ಸೌಹಾರ್ದ ಮತ್ತು ಮಾನವೀಯ ಮೌಲ್ಯಗಳು ತುಂಬಿರುತ್ತಿದ್ದವು. ಹೀಗಾಗಿ ಸರ್ವರಿಗೂ ಅವರ ಸಿನಿಮಾಗಳು ಇಷ್ಟ ಆಗುತ್ತಿದ್ದವು ಎಂದು ತಿಳಿಸಿದರು.

ಮೌಡ್ಯಗಳನ್ನು ಬಿತ್ತುವ, ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾದ ಸಿನಿಮಾಗಳು ಸಮಾಜಕ್ಕೆ ಒಳ್ಳೆಯದಲ್ಲ. ಬಸವಣ್ಣನವರು ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಸಿನಿಮಾಗಳು ಮತ್ತೆ ಮೌಡ್ಯಗಳನ್ನು ಬಿತ್ತುವುದಕ್ಕೆ ಹೋಗಬಾರದು. ಈಗ ತಂತ್ರಜ್ಞಾನ ಬೆಳೆದು ಕೃತಕ ಬುದ್ದಿಮತ್ತೆವರೆಗೂ ಬೆಳೆದು ಬಂದಿದೆ. ನಮ್ಮ ಬದುಕನ್ನು ಪ್ರತಿಬಿಂಬಿಸುವ, ನಮ್ಮ ತಳಮಳಗಳಿಗೆ ಪರಿಹಾರ ಹುಡುಕುವ ಸಿನಿಮಾಗಳು ಬಂದಾಗ ಅಂತಹ ಸಿನಿಮಾಗಳು ಶಾಶ್ವತವಾಗಿ ಸಮಾಜದಲ್ಲಿ ಉಳಿಯುತ್ತವೆ ಎಂದು ಹೇಳಿದರು.

ಬೆಂಗಳೂರು, ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲವೂ ಇದೆ. ತಂತ್ರಜ್ಞಾನದ ಅವಕಾಶಗಳನ್ನು ಬಳಸಿಕೊಂಡು ಉತ್ತಮ‌ ಸಿನಿಮಾಗಳನ್ನು ಮಾಡಿದರೆ ಸಮಾಜಕ್ಕೆ ಒಳ್ಳೆಯದಾಗುತ್ತದೆ. ಸಿನಿಮಾ ಕ್ಷೇತ್ರವೂ ಪ್ರಗತಿ ಕಾಣುತ್ತದೆ. ಈ ದಿಕ್ಕಿನಲ್ಲಿ ಸಿನಿಮಾ ಜಗತ್ತು ಮಾನವೀಯಗೊಳ್ಳಲಿ ಎಂದರು.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

2 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

3 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

3 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago