ಮೈಸೂರು ದಸರಾ ಮಹೋತ್ಸವದಲ್ಲಿ ಎರಡು ಬಾರಿ ಪಾಲ್ಗೊಂಡಿದ್ದ ‘ಅಶ್ವತ್ಥಾಮ’ ಆನೆಯು ಸೋಲಾರ್ ಬೇಲಿಯಲ್ಲಿ ವಿದ್ಯುತ್ ಪ್ರವಹಿಸಿ ಇಂದು ಬೆಳಿಗ್ಗೆ ಇಹಲೋಕ ತ್ಯಜಿಸಿದೆ.
ಹುಣಸೂರು- ಪಿರಿಯಾಪಟ್ಟಣ ತಾಲೂಕಿನ ಗಡಿ ಭಾಗದ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿದ್ದ ಅಶ್ವತ್ಥಾಮ ಆನೆಯು ಮೇವು ಅರಸಿಕೊಂಡು ಕಾಡಿಗೆ ತೆರಳಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಸೋಲಾರ್ ಬೇಲಿ ಮೇಲೆ ವಿದ್ಯುತ್ ತಂತಿಯು ಬಿದ್ದಿದ್ದರಿಂದ ವಿದ್ಯುತ್ ಆಘಾತದಿಂದ 38 ವರ್ಷ ಪ್ರಾಯದ ಅಶ್ವತ್ಥಾಮ ಮೃತಪಟ್ಟಿದೆ ಎಂದು ಹೇಳಲಾಗಿದ್ದರೂ, ಅನಾರೋಗ್ಯದಿಂದ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ಮೂಲಗಳು ಹೇಳಿವೆ.
2017ರಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಅಶ್ವತ್ಥಾಮನನ್ನು ಸೆರೆ ಹಿಡಿಯಲಾಗಿತ್ತು. ಶಾಂತ ಹಾಗೂ ಗಾಂಭೀರ್ಯ ಸ್ವಭಾವಕ್ಕೆ ಹೆಸರಾಗಿದ್ದ ಅದನ್ನು ನಾಲ್ಕು ವರ್ಷದಲ್ಲಿಯೇ 2021ರ ದಸರಾಗೆ ಕರೆತರಲಾಗಿತ್ತು. ಅದಕ್ಕೆ ನಡಿಗೆ ತಾಲೀಮು ಸೇರಿದಂತೆ ವಿವಿಧ ತಾಲೀಮನ್ನು ನೀಡಲಾಗಿತ್ತು.
2022ರ ದಸರೆಯಲ್ಲಿ ಪಾಲ್ಗೊಂಡು ಗಮನ ಸೆಳೆದಿದ್ದ ಅಶ್ವತ್ಥಾಮ ಜಂಬೂಸವಾರಿಯಲ್ಲಿ ಭಾಗವಹಿಸಿರಲಿಲ್ಲ.
ಸಿಎಂ ಸಿದ್ದರಾಮಯ್ಯ ಭಾವುಕ
ಮೈಸೂರು ದಸರಾದಲ್ಲಿ ಪಾಲ್ಗೊಂಡು ಲಕ್ಷಾಂತರ ಜನರ ಮೆಚ್ಚುಗೆ ಗಳಿಸಿದ್ದ ಆನೆ ಅಶ್ವತ್ಥಾಮನ ಸಾವು ನೋವುಂಟುಮಾಡಿದೆ. ತನ್ನ ಶಾಂತ ಸ್ವಭಾವ ಮತ್ತು ಗಾಂಭೀರ್ಯದಿಂದಾಗಿ ಬಹುಬೇಗನೇ ವಿಶ್ವವಿಖ್ಯಾತ ದಸರಾದ ಭಾಗವಾಗಿ ತಾಯಿ ಚಾಮುಂಡೇಶ್ವರಿಯ ಸೇವೆಗೈದಿದ್ದ ಎಂದು ಸಿಎಂ ಸಿದ್ದರಾಮಯ್ಯ ಭಾವುಕರಾಗಿದ್ದಾರೆ
ಅಶ್ವತ್ಥಾಮನ ನೆನಪು ನಮ್ಮ ಮನದಲ್ಲಿ ಶಾಶ್ವತವಾಗಿರಲಿದೆ ಎಂದಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…