Categories: ಮೈಸೂರು

ಮೈಸೂರು ದಸರಾದಲ್ಲಿ ಪಾಲ್ಗೊಂಡಿದ್ದ ಅಶ್ವತ್ಥಾಮ ಅಸ್ತಂಗತ

ಮೈಸೂರು ದಸರಾ ಮಹೋತ್ಸವದಲ್ಲಿ ಎರಡು ಬಾರಿ ಪಾಲ್ಗೊಂಡಿದ್ದ ‘ಅಶ್ವತ್ಥಾಮ’ ಆನೆಯು ಸೋಲಾರ್ ಬೇಲಿಯಲ್ಲಿ ವಿದ್ಯುತ್ ಪ್ರವಹಿಸಿ  ಇಂದು ಬೆಳಿಗ್ಗೆ ಇಹಲೋಕ ತ್ಯಜಿಸಿದೆ.

ಹುಣಸೂರು- ಪಿರಿಯಾಪಟ್ಟಣ ತಾಲೂಕಿನ ಗಡಿ ಭಾಗದ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿದ್ದ ಅಶ್ವತ್ಥಾಮ ಆನೆಯು ಮೇವು ಅರಸಿಕೊಂಡು ಕಾಡಿಗೆ ತೆರಳಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಸೋಲಾರ್ ಬೇಲಿ ಮೇಲೆ ವಿದ್ಯುತ್ ತಂತಿಯು ಬಿದ್ದಿದ್ದರಿಂದ ವಿದ್ಯುತ್ ಆಘಾತದಿಂದ 38 ವರ್ಷ ಪ್ರಾಯದ ಅಶ್ವತ್ಥಾಮ ಮೃತಪಟ್ಟಿದೆ ಎಂದು ಹೇಳಲಾಗಿದ್ದರೂ, ಅನಾರೋಗ್ಯದಿಂದ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ಮೂಲಗಳು ಹೇಳಿವೆ.

2017ರಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಅಶ್ವತ್ಥಾಮನನ್ನು ಸೆರೆ ಹಿಡಿಯಲಾಗಿತ್ತು. ಶಾಂತ ಹಾಗೂ ಗಾಂಭೀರ್ಯ ಸ್ವಭಾವಕ್ಕೆ ಹೆಸರಾಗಿದ್ದ ಅದನ್ನು ನಾಲ್ಕು ವರ್ಷದಲ್ಲಿಯೇ 2021ರ ದಸರಾಗೆ ಕರೆತರಲಾಗಿತ್ತು. ಅದಕ್ಕೆ ನಡಿಗೆ ತಾಲೀಮು ಸೇರಿದಂತೆ ವಿವಿಧ ತಾಲೀಮನ್ನು ನೀಡಲಾಗಿತ್ತು.‌

2022ರ ದಸರೆಯಲ್ಲಿ ಪಾಲ್ಗೊಂಡು ಗಮನ ಸೆಳೆದಿದ್ದ ಅಶ್ವತ್ಥಾಮ ಜಂಬೂಸವಾರಿಯಲ್ಲಿ ಭಾಗವಹಿಸಿರಲಿಲ್ಲ.

ಸಿಎಂ ಸಿದ್ದರಾಮಯ್ಯ ಭಾವುಕ

ಮೈಸೂರು ದಸರಾದಲ್ಲಿ ಪಾಲ್ಗೊಂಡು ಲಕ್ಷಾಂತರ ಜನರ ಮೆಚ್ಚುಗೆ ಗಳಿಸಿದ್ದ ಆನೆ ಅಶ್ವತ್ಥಾಮನ ಸಾವು ನೋವುಂಟುಮಾಡಿದೆ. ತನ್ನ ಶಾಂತ ಸ್ವಭಾವ ಮತ್ತು ಗಾಂಭೀರ್ಯದಿಂದಾಗಿ ಬಹುಬೇಗನೇ ವಿಶ್ವವಿಖ್ಯಾತ ದಸರಾದ ಭಾಗವಾಗಿ ತಾಯಿ ಚಾಮುಂಡೇಶ್ವರಿಯ ಸೇವೆಗೈದಿದ್ದ ಎಂದು ಸಿಎಂ ಸಿದ್ದರಾಮಯ್ಯ ಭಾವುಕರಾಗಿದ್ದಾರೆ

ಅಶ್ವತ್ಥಾಮನ ನೆನಪು ನಮ್ಮ ಮನದಲ್ಲಿ ಶಾಶ್ವತವಾಗಿರಲಿದೆ‌ ಎಂದಿದ್ದಾರೆ.

Ramesh Babu

Journalist

Recent Posts

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

4 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

13 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

19 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

21 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

3 days ago