ಮೈಸೂರು ದಸರಾ ಮಹೋತ್ಸವದಲ್ಲಿ ಎರಡು ಬಾರಿ ಪಾಲ್ಗೊಂಡಿದ್ದ ‘ಅಶ್ವತ್ಥಾಮ’ ಆನೆಯು ಸೋಲಾರ್ ಬೇಲಿಯಲ್ಲಿ ವಿದ್ಯುತ್ ಪ್ರವಹಿಸಿ ಇಂದು ಬೆಳಿಗ್ಗೆ ಇಹಲೋಕ ತ್ಯಜಿಸಿದೆ.
ಹುಣಸೂರು- ಪಿರಿಯಾಪಟ್ಟಣ ತಾಲೂಕಿನ ಗಡಿ ಭಾಗದ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿದ್ದ ಅಶ್ವತ್ಥಾಮ ಆನೆಯು ಮೇವು ಅರಸಿಕೊಂಡು ಕಾಡಿಗೆ ತೆರಳಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಸೋಲಾರ್ ಬೇಲಿ ಮೇಲೆ ವಿದ್ಯುತ್ ತಂತಿಯು ಬಿದ್ದಿದ್ದರಿಂದ ವಿದ್ಯುತ್ ಆಘಾತದಿಂದ 38 ವರ್ಷ ಪ್ರಾಯದ ಅಶ್ವತ್ಥಾಮ ಮೃತಪಟ್ಟಿದೆ ಎಂದು ಹೇಳಲಾಗಿದ್ದರೂ, ಅನಾರೋಗ್ಯದಿಂದ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ಮೂಲಗಳು ಹೇಳಿವೆ.
2017ರಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಅಶ್ವತ್ಥಾಮನನ್ನು ಸೆರೆ ಹಿಡಿಯಲಾಗಿತ್ತು. ಶಾಂತ ಹಾಗೂ ಗಾಂಭೀರ್ಯ ಸ್ವಭಾವಕ್ಕೆ ಹೆಸರಾಗಿದ್ದ ಅದನ್ನು ನಾಲ್ಕು ವರ್ಷದಲ್ಲಿಯೇ 2021ರ ದಸರಾಗೆ ಕರೆತರಲಾಗಿತ್ತು. ಅದಕ್ಕೆ ನಡಿಗೆ ತಾಲೀಮು ಸೇರಿದಂತೆ ವಿವಿಧ ತಾಲೀಮನ್ನು ನೀಡಲಾಗಿತ್ತು.
2022ರ ದಸರೆಯಲ್ಲಿ ಪಾಲ್ಗೊಂಡು ಗಮನ ಸೆಳೆದಿದ್ದ ಅಶ್ವತ್ಥಾಮ ಜಂಬೂಸವಾರಿಯಲ್ಲಿ ಭಾಗವಹಿಸಿರಲಿಲ್ಲ.
ಸಿಎಂ ಸಿದ್ದರಾಮಯ್ಯ ಭಾವುಕ
ಮೈಸೂರು ದಸರಾದಲ್ಲಿ ಪಾಲ್ಗೊಂಡು ಲಕ್ಷಾಂತರ ಜನರ ಮೆಚ್ಚುಗೆ ಗಳಿಸಿದ್ದ ಆನೆ ಅಶ್ವತ್ಥಾಮನ ಸಾವು ನೋವುಂಟುಮಾಡಿದೆ. ತನ್ನ ಶಾಂತ ಸ್ವಭಾವ ಮತ್ತು ಗಾಂಭೀರ್ಯದಿಂದಾಗಿ ಬಹುಬೇಗನೇ ವಿಶ್ವವಿಖ್ಯಾತ ದಸರಾದ ಭಾಗವಾಗಿ ತಾಯಿ ಚಾಮುಂಡೇಶ್ವರಿಯ ಸೇವೆಗೈದಿದ್ದ ಎಂದು ಸಿಎಂ ಸಿದ್ದರಾಮಯ್ಯ ಭಾವುಕರಾಗಿದ್ದಾರೆ
ಅಶ್ವತ್ಥಾಮನ ನೆನಪು ನಮ್ಮ ಮನದಲ್ಲಿ ಶಾಶ್ವತವಾಗಿರಲಿದೆ ಎಂದಿದ್ದಾರೆ.
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…