ಮೈಸೂರು ದಸರಾ ಮಹೋತ್ಸವದಲ್ಲಿ ಎರಡು ಬಾರಿ ಪಾಲ್ಗೊಂಡಿದ್ದ ‘ಅಶ್ವತ್ಥಾಮ’ ಆನೆಯು ಸೋಲಾರ್ ಬೇಲಿಯಲ್ಲಿ ವಿದ್ಯುತ್ ಪ್ರವಹಿಸಿ ಇಂದು ಬೆಳಿಗ್ಗೆ ಇಹಲೋಕ ತ್ಯಜಿಸಿದೆ.
ಹುಣಸೂರು- ಪಿರಿಯಾಪಟ್ಟಣ ತಾಲೂಕಿನ ಗಡಿ ಭಾಗದ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿದ್ದ ಅಶ್ವತ್ಥಾಮ ಆನೆಯು ಮೇವು ಅರಸಿಕೊಂಡು ಕಾಡಿಗೆ ತೆರಳಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಸೋಲಾರ್ ಬೇಲಿ ಮೇಲೆ ವಿದ್ಯುತ್ ತಂತಿಯು ಬಿದ್ದಿದ್ದರಿಂದ ವಿದ್ಯುತ್ ಆಘಾತದಿಂದ 38 ವರ್ಷ ಪ್ರಾಯದ ಅಶ್ವತ್ಥಾಮ ಮೃತಪಟ್ಟಿದೆ ಎಂದು ಹೇಳಲಾಗಿದ್ದರೂ, ಅನಾರೋಗ್ಯದಿಂದ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ಮೂಲಗಳು ಹೇಳಿವೆ.
2017ರಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಅಶ್ವತ್ಥಾಮನನ್ನು ಸೆರೆ ಹಿಡಿಯಲಾಗಿತ್ತು. ಶಾಂತ ಹಾಗೂ ಗಾಂಭೀರ್ಯ ಸ್ವಭಾವಕ್ಕೆ ಹೆಸರಾಗಿದ್ದ ಅದನ್ನು ನಾಲ್ಕು ವರ್ಷದಲ್ಲಿಯೇ 2021ರ ದಸರಾಗೆ ಕರೆತರಲಾಗಿತ್ತು. ಅದಕ್ಕೆ ನಡಿಗೆ ತಾಲೀಮು ಸೇರಿದಂತೆ ವಿವಿಧ ತಾಲೀಮನ್ನು ನೀಡಲಾಗಿತ್ತು.
2022ರ ದಸರೆಯಲ್ಲಿ ಪಾಲ್ಗೊಂಡು ಗಮನ ಸೆಳೆದಿದ್ದ ಅಶ್ವತ್ಥಾಮ ಜಂಬೂಸವಾರಿಯಲ್ಲಿ ಭಾಗವಹಿಸಿರಲಿಲ್ಲ.
ಸಿಎಂ ಸಿದ್ದರಾಮಯ್ಯ ಭಾವುಕ
ಮೈಸೂರು ದಸರಾದಲ್ಲಿ ಪಾಲ್ಗೊಂಡು ಲಕ್ಷಾಂತರ ಜನರ ಮೆಚ್ಚುಗೆ ಗಳಿಸಿದ್ದ ಆನೆ ಅಶ್ವತ್ಥಾಮನ ಸಾವು ನೋವುಂಟುಮಾಡಿದೆ. ತನ್ನ ಶಾಂತ ಸ್ವಭಾವ ಮತ್ತು ಗಾಂಭೀರ್ಯದಿಂದಾಗಿ ಬಹುಬೇಗನೇ ವಿಶ್ವವಿಖ್ಯಾತ ದಸರಾದ ಭಾಗವಾಗಿ ತಾಯಿ ಚಾಮುಂಡೇಶ್ವರಿಯ ಸೇವೆಗೈದಿದ್ದ ಎಂದು ಸಿಎಂ ಸಿದ್ದರಾಮಯ್ಯ ಭಾವುಕರಾಗಿದ್ದಾರೆ
ಅಶ್ವತ್ಥಾಮನ ನೆನಪು ನಮ್ಮ ಮನದಲ್ಲಿ ಶಾಶ್ವತವಾಗಿರಲಿದೆ ಎಂದಿದ್ದಾರೆ.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…