ದೊಡ್ಡಬಳ್ಳಾಪುರ : ಮೈಸೂರಿನಲ್ಲಿ ನಡೆದ ದಸರಾ ಕ್ರೀಡಾಕೂಟದಲ್ಲಿ ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಐತಿಹಾಸಿಕ ಸಾಧನೆಯನ್ನ ಮಾಡಿದ್ದಾರೆ.
ಮೈಸೂರಿನ ಚಾಮುಂಡಿ ವಿಹಾರ್ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 22 ರಿಂದ 25ರವರೆಗೂ ನಡೆದ ಕ್ರೀಡಾಕೂಟದಲ್ಲಿ ದೊಡ್ಡಬಳ್ಳಾಪುರದ ಕ್ರೀಡಾಪಟುಗಳಾದ ದಿವ್ಯ.ವಿ, ಪ್ರಣತಿ, ನಿತಿನ್ ಗೌಡ.ಎಂ, ರುಕ್ಸಾರ್ ವಿವಿಧ ಅಥ್ಲೆಟಿಕ್ ವಿಭಾಗದಲ್ಲಿ ಪದಕ ಗೆದ್ದು ಸಾಧನೆಯನ್ನ ಮಾಡಿದ್ದಾರೆ.
ನಿತಿನ್ ಗೌಡ.ಎಂ 400 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನವನ್ನ ಪಡೆದ ಅವರು 47.9 ಸೆಕೆಂಡ್ ನಲ್ಲಿ ಓಡುವ ಮೂಲಕ ತನ್ನ ಹಳೇ ದಾಖಲೆಯನ್ನ (48.7) ಮುರಿದಿದ್ದಾರೆ. 4×400 ಮೀಟರ್ ರಿಲೇ ಸ್ವರ್ಥೆಯಲ್ಲಿ 3.16 ಸೆಕೆಂಡ್ ನಲ್ಲಿ ಓಡುವ ಮೂಲಕ ನೂತನ ಕೂಟ ದಾಖಲೆಯನ್ನ ಮಾಡಿದ್ದಾರೆ.
ದಿವ್ಯ.ವಿ, ಪ್ರಣತಿ, ರುಕ್ಸರ್ 4X400 ಮೀಟರ್ ರಿಲೇ ಸ್ವರ್ಥೆಯಲ್ಲಿ ದ್ವಿತೀಯಾ ಸ್ಥಾನವನ್ನ ಪಡೆದಿದ್ದಾರೆ. ವಿಜೇತ ಕ್ರೀಡಾಪಟುಗಳು ಸ್ವೋರ್ಟ್ಸ್ ಕ್ಲಬ್ ದೊಡ್ಡಬಳ್ಳಾಪುರದ ಆನಂದ ಭೈರವರವರಿಂದ ತರಬೇತಿಯನ್ನ ಪಡೆಯುತ್ತಿದ್ದಾರೆ.
ದಸರಾ ಕ್ರೀಡಾಕೂಟದ ಪದಕ ವಿಜೇತ ಕ್ರೀಡಾಪಟುಗಳಿಗೆ ಪೋಷಕರು, ತರಬೇತಿದಾರರು ಮತ್ತು ಯುವ ಸಬಲೀಕರಣ ಕ್ರೀಡಾ ಇಲಾಖೆಯ ಅಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…