ದೊಡ್ಡಬಳ್ಳಾಪುರ : ಮೈಸೂರಿನಲ್ಲಿ ನಡೆದ ದಸರಾ ಕ್ರೀಡಾಕೂಟದಲ್ಲಿ ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಐತಿಹಾಸಿಕ ಸಾಧನೆಯನ್ನ ಮಾಡಿದ್ದಾರೆ.
ಮೈಸೂರಿನ ಚಾಮುಂಡಿ ವಿಹಾರ್ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 22 ರಿಂದ 25ರವರೆಗೂ ನಡೆದ ಕ್ರೀಡಾಕೂಟದಲ್ಲಿ ದೊಡ್ಡಬಳ್ಳಾಪುರದ ಕ್ರೀಡಾಪಟುಗಳಾದ ದಿವ್ಯ.ವಿ, ಪ್ರಣತಿ, ನಿತಿನ್ ಗೌಡ.ಎಂ, ರುಕ್ಸಾರ್ ವಿವಿಧ ಅಥ್ಲೆಟಿಕ್ ವಿಭಾಗದಲ್ಲಿ ಪದಕ ಗೆದ್ದು ಸಾಧನೆಯನ್ನ ಮಾಡಿದ್ದಾರೆ.
ನಿತಿನ್ ಗೌಡ.ಎಂ 400 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನವನ್ನ ಪಡೆದ ಅವರು 47.9 ಸೆಕೆಂಡ್ ನಲ್ಲಿ ಓಡುವ ಮೂಲಕ ತನ್ನ ಹಳೇ ದಾಖಲೆಯನ್ನ (48.7) ಮುರಿದಿದ್ದಾರೆ. 4×400 ಮೀಟರ್ ರಿಲೇ ಸ್ವರ್ಥೆಯಲ್ಲಿ 3.16 ಸೆಕೆಂಡ್ ನಲ್ಲಿ ಓಡುವ ಮೂಲಕ ನೂತನ ಕೂಟ ದಾಖಲೆಯನ್ನ ಮಾಡಿದ್ದಾರೆ.
ದಿವ್ಯ.ವಿ, ಪ್ರಣತಿ, ರುಕ್ಸರ್ 4X400 ಮೀಟರ್ ರಿಲೇ ಸ್ವರ್ಥೆಯಲ್ಲಿ ದ್ವಿತೀಯಾ ಸ್ಥಾನವನ್ನ ಪಡೆದಿದ್ದಾರೆ. ವಿಜೇತ ಕ್ರೀಡಾಪಟುಗಳು ಸ್ವೋರ್ಟ್ಸ್ ಕ್ಲಬ್ ದೊಡ್ಡಬಳ್ಳಾಪುರದ ಆನಂದ ಭೈರವರವರಿಂದ ತರಬೇತಿಯನ್ನ ಪಡೆಯುತ್ತಿದ್ದಾರೆ.
ದಸರಾ ಕ್ರೀಡಾಕೂಟದ ಪದಕ ವಿಜೇತ ಕ್ರೀಡಾಪಟುಗಳಿಗೆ ಪೋಷಕರು, ತರಬೇತಿದಾರರು ಮತ್ತು ಯುವ ಸಬಲೀಕರಣ ಕ್ರೀಡಾ ಇಲಾಖೆಯ ಅಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…