ಮೈಸೂರು ದಸರಾ ಕ್ರೀಡಾಕೂಟ: ದೊಡ್ಡಬಳ್ಳಾಪುರ ಕ್ರೀಡಾಪಟುಗಳ ಮಹತ್ವದ ಸಾಧನೆ

ದೊಡ್ಡಬಳ್ಳಾಪುರ : ಮೈಸೂರಿನಲ್ಲಿ ನಡೆದ ದಸರಾ ಕ್ರೀಡಾಕೂಟದಲ್ಲಿ ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಐತಿಹಾಸಿಕ ಸಾಧನೆಯನ್ನ ಮಾಡಿದ್ದಾರೆ.

ಮೈಸೂರಿನ ಚಾಮುಂಡಿ ವಿಹಾರ್ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 22 ರಿಂದ 25ರವರೆಗೂ ನಡೆದ ಕ್ರೀಡಾಕೂಟದಲ್ಲಿ ದೊಡ್ಡಬಳ್ಳಾಪುರದ ಕ್ರೀಡಾಪಟುಗಳಾದ ದಿವ್ಯ.ವಿ, ಪ್ರಣತಿ, ನಿತಿನ್ ಗೌಡ.ಎಂ, ರುಕ್ಸಾರ್ ವಿವಿಧ ಅಥ್ಲೆಟಿಕ್ ವಿಭಾಗದಲ್ಲಿ ಪದಕ ಗೆದ್ದು ಸಾಧನೆಯನ್ನ ಮಾಡಿದ್ದಾರೆ.

ನಿತಿನ್ ಗೌಡ.ಎಂ 400 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನವನ್ನ ಪಡೆದ ಅವರು 47.9 ಸೆಕೆಂಡ್ ನಲ್ಲಿ ಓಡುವ ಮೂಲಕ ತನ್ನ ಹಳೇ ದಾಖಲೆಯನ್ನ (48.7) ಮುರಿದಿದ್ದಾರೆ. 4×400 ಮೀಟರ್ ರಿಲೇ ಸ್ವರ್ಥೆಯಲ್ಲಿ 3.16 ಸೆಕೆಂಡ್ ನಲ್ಲಿ ಓಡುವ ಮೂಲಕ ನೂತನ ಕೂಟ ದಾಖಲೆಯನ್ನ ಮಾಡಿದ್ದಾರೆ.

ದಿವ್ಯ.ವಿ, ಪ್ರಣತಿ, ರುಕ್ಸರ್ 4X400 ಮೀಟರ್ ರಿಲೇ ಸ್ವರ್ಥೆಯಲ್ಲಿ ದ್ವಿತೀಯಾ ಸ್ಥಾನವನ್ನ ಪಡೆದಿದ್ದಾರೆ. ವಿಜೇತ ಕ್ರೀಡಾಪಟುಗಳು ಸ್ವೋರ್ಟ್ಸ್ ಕ್ಲಬ್ ದೊಡ್ಡಬಳ್ಳಾಪುರದ ಆನಂದ ಭೈರವರವರಿಂದ ತರಬೇತಿಯನ್ನ ಪಡೆಯುತ್ತಿದ್ದಾರೆ.

ದಸರಾ ಕ್ರೀಡಾಕೂಟದ ಪದಕ ವಿಜೇತ ಕ್ರೀಡಾಪಟುಗಳಿಗೆ ಪೋಷಕರು, ತರಬೇತಿದಾರರು ಮತ್ತು ಯುವ ಸಬಲೀಕರಣ ಕ್ರೀಡಾ ಇಲಾಖೆಯ ಅಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

5 minutes ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

3 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

15 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

16 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

18 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

21 hours ago