ದೊಡ್ಡಬಳ್ಳಾಪುರ : ಮೈಸೂರಿನಲ್ಲಿ ನಡೆದ ದಸರಾ ಕ್ರೀಡಾಕೂಟದಲ್ಲಿ ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಐತಿಹಾಸಿಕ ಸಾಧನೆಯನ್ನ ಮಾಡಿದ್ದಾರೆ.
ಮೈಸೂರಿನ ಚಾಮುಂಡಿ ವಿಹಾರ್ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 22 ರಿಂದ 25ರವರೆಗೂ ನಡೆದ ಕ್ರೀಡಾಕೂಟದಲ್ಲಿ ದೊಡ್ಡಬಳ್ಳಾಪುರದ ಕ್ರೀಡಾಪಟುಗಳಾದ ದಿವ್ಯ.ವಿ, ಪ್ರಣತಿ, ನಿತಿನ್ ಗೌಡ.ಎಂ, ರುಕ್ಸಾರ್ ವಿವಿಧ ಅಥ್ಲೆಟಿಕ್ ವಿಭಾಗದಲ್ಲಿ ಪದಕ ಗೆದ್ದು ಸಾಧನೆಯನ್ನ ಮಾಡಿದ್ದಾರೆ.
ನಿತಿನ್ ಗೌಡ.ಎಂ 400 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನವನ್ನ ಪಡೆದ ಅವರು 47.9 ಸೆಕೆಂಡ್ ನಲ್ಲಿ ಓಡುವ ಮೂಲಕ ತನ್ನ ಹಳೇ ದಾಖಲೆಯನ್ನ (48.7) ಮುರಿದಿದ್ದಾರೆ. 4×400 ಮೀಟರ್ ರಿಲೇ ಸ್ವರ್ಥೆಯಲ್ಲಿ 3.16 ಸೆಕೆಂಡ್ ನಲ್ಲಿ ಓಡುವ ಮೂಲಕ ನೂತನ ಕೂಟ ದಾಖಲೆಯನ್ನ ಮಾಡಿದ್ದಾರೆ.
ದಿವ್ಯ.ವಿ, ಪ್ರಣತಿ, ರುಕ್ಸರ್ 4X400 ಮೀಟರ್ ರಿಲೇ ಸ್ವರ್ಥೆಯಲ್ಲಿ ದ್ವಿತೀಯಾ ಸ್ಥಾನವನ್ನ ಪಡೆದಿದ್ದಾರೆ. ವಿಜೇತ ಕ್ರೀಡಾಪಟುಗಳು ಸ್ವೋರ್ಟ್ಸ್ ಕ್ಲಬ್ ದೊಡ್ಡಬಳ್ಳಾಪುರದ ಆನಂದ ಭೈರವರವರಿಂದ ತರಬೇತಿಯನ್ನ ಪಡೆಯುತ್ತಿದ್ದಾರೆ.
ದಸರಾ ಕ್ರೀಡಾಕೂಟದ ಪದಕ ವಿಜೇತ ಕ್ರೀಡಾಪಟುಗಳಿಗೆ ಪೋಷಕರು, ತರಬೇತಿದಾರರು ಮತ್ತು ಯುವ ಸಬಲೀಕರಣ ಕ್ರೀಡಾ ಇಲಾಖೆಯ ಅಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…
ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…
ಬೆಂಗಳೂರು: ಹಬ್ಬಗಳ ಸೀಸನ್ ಆರಂಭಕ್ಕೂ ಮುನ್ನವೇ ಹೂವಿನ ದರ ಏರಿಕೆಯ ಬಿಸಿ ಗ್ರಾಹಕರಿಗೆ ತಟ್ಟಲಾರಂಭಿಸಿದೆ. ರಾಜ್ಯದಲ್ಲಿ ಅನಿರೀಕ್ಷಿತ ಬರ,…
ದೊಡ್ಡಬಳ್ಳಾಪುರ: ಟೊಮೆಟೊ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ದಾಬಸ್ಪೇಟೆ–ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯ ಕೂಗೇನಹಳ್ಳಿ ಗೇಟ್ ಸಮೀಪ ಗುರುವಾರ ಬೆಳಗ್ಗೆ…
ಸ್ವಾತಂತ್ರ್ಯ........ ಸ್ವಾತಂತ್ರ್ಯ ಎಂಬ ಅರ್ಥದ ಮೂಲ ಭಾವವನ್ನು ಹುಡುಕುತ್ತಾ ಹೊರಟಾಗ...... ಸ್ವಾತಂತ್ರ್ಯ ಎಂಬುದು... ಮಾನಸಿಕ ಸ್ಥಿತಿಯೇ, ದೈಹಿಕ ವ್ಯಾಪ್ತಿಯೇ, ಇವೆರಡರ…
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ವು ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ನಿರ್ಮಿಸಿರುವ 'ಕುವೆಂಪು ಥೀಮ್ ಪಾರ್ಕ್'ಅನ್ನು…