ದೊಡ್ಡಬಳ್ಳಾಪುರ : ಮೈಸೂರಿನಲ್ಲಿ ನಡೆದ ದಸರಾ ಕ್ರೀಡಾಕೂಟದಲ್ಲಿ ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಐತಿಹಾಸಿಕ ಸಾಧನೆಯನ್ನ ಮಾಡಿದ್ದಾರೆ.
ಮೈಸೂರಿನ ಚಾಮುಂಡಿ ವಿಹಾರ್ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 22 ರಿಂದ 25ರವರೆಗೂ ನಡೆದ ಕ್ರೀಡಾಕೂಟದಲ್ಲಿ ದೊಡ್ಡಬಳ್ಳಾಪುರದ ಕ್ರೀಡಾಪಟುಗಳಾದ ದಿವ್ಯ.ವಿ, ಪ್ರಣತಿ, ನಿತಿನ್ ಗೌಡ.ಎಂ, ರುಕ್ಸಾರ್ ವಿವಿಧ ಅಥ್ಲೆಟಿಕ್ ವಿಭಾಗದಲ್ಲಿ ಪದಕ ಗೆದ್ದು ಸಾಧನೆಯನ್ನ ಮಾಡಿದ್ದಾರೆ.
ನಿತಿನ್ ಗೌಡ.ಎಂ 400 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನವನ್ನ ಪಡೆದ ಅವರು 47.9 ಸೆಕೆಂಡ್ ನಲ್ಲಿ ಓಡುವ ಮೂಲಕ ತನ್ನ ಹಳೇ ದಾಖಲೆಯನ್ನ (48.7) ಮುರಿದಿದ್ದಾರೆ. 4×400 ಮೀಟರ್ ರಿಲೇ ಸ್ವರ್ಥೆಯಲ್ಲಿ 3.16 ಸೆಕೆಂಡ್ ನಲ್ಲಿ ಓಡುವ ಮೂಲಕ ನೂತನ ಕೂಟ ದಾಖಲೆಯನ್ನ ಮಾಡಿದ್ದಾರೆ.
ದಿವ್ಯ.ವಿ, ಪ್ರಣತಿ, ರುಕ್ಸರ್ 4X400 ಮೀಟರ್ ರಿಲೇ ಸ್ವರ್ಥೆಯಲ್ಲಿ ದ್ವಿತೀಯಾ ಸ್ಥಾನವನ್ನ ಪಡೆದಿದ್ದಾರೆ. ವಿಜೇತ ಕ್ರೀಡಾಪಟುಗಳು ಸ್ವೋರ್ಟ್ಸ್ ಕ್ಲಬ್ ದೊಡ್ಡಬಳ್ಳಾಪುರದ ಆನಂದ ಭೈರವರವರಿಂದ ತರಬೇತಿಯನ್ನ ಪಡೆಯುತ್ತಿದ್ದಾರೆ.
ದಸರಾ ಕ್ರೀಡಾಕೂಟದ ಪದಕ ವಿಜೇತ ಕ್ರೀಡಾಪಟುಗಳಿಗೆ ಪೋಷಕರು, ತರಬೇತಿದಾರರು ಮತ್ತು ಯುವ ಸಬಲೀಕರಣ ಕ್ರೀಡಾ ಇಲಾಖೆಯ ಅಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಸಂಬಂಧಗಳ ಬಲೆಯೊಳಗೆ.... ಪೂರ್ವ ನಿರ್ಧಾರಿತ ಬಂಧನದಲ್ಲಿ.... ಒಂದು ನಿಗದಿತ ವ್ಯವಸ್ಥೆಯ ಜೈಲಿನಲ್ಲಿ.... ಹಿಂದಿನವರ ಅನುಭವದ ಗೋಡೆಗಳೊಳಗೆ..... ಹುಟ್ಟುತ್ತಾ ವಿಶ್ವಮಾನವರು, ಬೆಳೆಯುತ್ತಾ......…
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…