ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ(MUDA) ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಅವರು ರಾಜ್ಯಪಾಲರಿಗೆ ನೀಡಿರುವ ದೂರಿನ ಆಧಾರ ಮೇಲೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ ಎಂದು ಖಚಿತ ಮಾಹಿತಿ ಲಭಿಸಿದೆ.
ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡುವ ಸಾಧ್ಯತೆ ಎದ್ದು ಕಾಣುತ್ತಿದೆ.ಸಿಎಂ ಸಿದ್ದರಾಮಯ್ಯ ಈ ಕುರಿತು ಯಾವ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬುದು ಕಾದು ನೋಡಬೇಕಾಗಿದೆ.
ಏನಿದು ಪ್ರಕರಣ?: ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರಿಗೆ 50-50 ಅನುಪಾತದಲ್ಲಿ 14 ಮೂಡಾ ಸೈಟ್ಗಳನ್ನ ಹಂಚಿಕೆ ಮಾಡಲಾಗಿದ್ದು, ಅದರಲ್ಲಿ ಆರ್.ಟಿ.ಐ ಕಾರ್ಯಕರ್ತ ಗಂಗರಾಜು ಎಂಬುವವರು ಇದರಲ್ಲಿ ಅಕ್ರಮ ಮಂಜೂರಾತಿ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಸಿಎಂ ಪತ್ನಿಗೆ 14 ನಿವೇಶನ ಮಂಜೂರಾದ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು.
ದೇವನೂರು ಬಡಾವಣೆಯಲ್ಲಿ ಸಾವಿರಾರು ಸೈಟ್ ಇದ್ದರೂ ವಿಜಯನಗರದಲ್ಲಿ ಕೊಟ್ಟಿರುವುದು ಯಾಕೆ? ಇದು ಲಾಭದ ಉದ್ದೇಶ ಅಲ್ಲವೇ. ಈ ಹಿಂದಿನ ಮೂಡಾ ಆಯುಕ್ತ ನಟೇಶ್ ಈ ಆದೇಶ ಮಾಡಿದ್ದು, ಸಿಎಂ ಪತ್ನಿ ಆರ್ಥಿಕ ಲಾಭವನ್ನು ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.
ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನ ದತ್ತ ಅಧಿಕಾರ ಚಲಾಯಿಸಿ ಮುಖ್ಯಮಂತ್ರಿಗಳ ಮುಡಾ ಹಗರಣದ ದೂರಿಗೆ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜೇಂದ್ರ ತಿಳಿಸಿದ್ದಾರೆ.
ಸಾಕಷ್ಟು ದಾಖಲೆ, ಪುರಾವೆಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಗರಣಗಳ ವಿರುದ್ಧ ಹಾಗೂ ಮುಖ್ಯಮಂತ್ರಿಗಳ ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದರ ವಿರುದ್ಧ ಎಷ್ಟೇ ಹೋರಾಟ ನಡೆಸಿದರೂ ತಮ್ಮನ್ನು ಜಗ್ಗಿಸುವವರಿಲ್ಲ ಎಂದು ಭಂಡತನ ಪ್ರದರ್ಶಿಸುತ್ತಿದ್ದ ಸಿದ್ದರಾಮಯ್ಯನವರು ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಲು ಅನುವಾಗುವಂತೆ ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಮುಖ್ಯಮಂತ್ರಿ ಸ್ಥಾನದ ಘನತೆ ಉಳಿಸಲಿ ಎಂದು ಹೇಳಿದ್ದಾರೆ.
" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…
ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…
ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…
ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…
ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…
ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…