ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ(MUDA) ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಅವರು ರಾಜ್ಯಪಾಲರಿಗೆ ನೀಡಿರುವ ದೂರಿನ ಆಧಾರ ಮೇಲೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ ಎಂದು ಖಚಿತ ಮಾಹಿತಿ ಲಭಿಸಿದೆ.
ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡುವ ಸಾಧ್ಯತೆ ಎದ್ದು ಕಾಣುತ್ತಿದೆ.ಸಿಎಂ ಸಿದ್ದರಾಮಯ್ಯ ಈ ಕುರಿತು ಯಾವ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬುದು ಕಾದು ನೋಡಬೇಕಾಗಿದೆ.
ಏನಿದು ಪ್ರಕರಣ?: ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರಿಗೆ 50-50 ಅನುಪಾತದಲ್ಲಿ 14 ಮೂಡಾ ಸೈಟ್ಗಳನ್ನ ಹಂಚಿಕೆ ಮಾಡಲಾಗಿದ್ದು, ಅದರಲ್ಲಿ ಆರ್.ಟಿ.ಐ ಕಾರ್ಯಕರ್ತ ಗಂಗರಾಜು ಎಂಬುವವರು ಇದರಲ್ಲಿ ಅಕ್ರಮ ಮಂಜೂರಾತಿ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಸಿಎಂ ಪತ್ನಿಗೆ 14 ನಿವೇಶನ ಮಂಜೂರಾದ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು.
ದೇವನೂರು ಬಡಾವಣೆಯಲ್ಲಿ ಸಾವಿರಾರು ಸೈಟ್ ಇದ್ದರೂ ವಿಜಯನಗರದಲ್ಲಿ ಕೊಟ್ಟಿರುವುದು ಯಾಕೆ? ಇದು ಲಾಭದ ಉದ್ದೇಶ ಅಲ್ಲವೇ. ಈ ಹಿಂದಿನ ಮೂಡಾ ಆಯುಕ್ತ ನಟೇಶ್ ಈ ಆದೇಶ ಮಾಡಿದ್ದು, ಸಿಎಂ ಪತ್ನಿ ಆರ್ಥಿಕ ಲಾಭವನ್ನು ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.
ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನ ದತ್ತ ಅಧಿಕಾರ ಚಲಾಯಿಸಿ ಮುಖ್ಯಮಂತ್ರಿಗಳ ಮುಡಾ ಹಗರಣದ ದೂರಿಗೆ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜೇಂದ್ರ ತಿಳಿಸಿದ್ದಾರೆ.
ಸಾಕಷ್ಟು ದಾಖಲೆ, ಪುರಾವೆಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಗರಣಗಳ ವಿರುದ್ಧ ಹಾಗೂ ಮುಖ್ಯಮಂತ್ರಿಗಳ ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದರ ವಿರುದ್ಧ ಎಷ್ಟೇ ಹೋರಾಟ ನಡೆಸಿದರೂ ತಮ್ಮನ್ನು ಜಗ್ಗಿಸುವವರಿಲ್ಲ ಎಂದು ಭಂಡತನ ಪ್ರದರ್ಶಿಸುತ್ತಿದ್ದ ಸಿದ್ದರಾಮಯ್ಯನವರು ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಲು ಅನುವಾಗುವಂತೆ ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಮುಖ್ಯಮಂತ್ರಿ ಸ್ಥಾನದ ಘನತೆ ಉಳಿಸಲಿ ಎಂದು ಹೇಳಿದ್ದಾರೆ.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…