ದೊಡ್ಡಬಳ್ಳಾಪುರ: ಇದೇ ಮೊದಲ ಬಾರಿಗೆ ತಾಲೂಕಿನ ಹಾದ್ರೀಪುರ ಗ್ರಾಮದಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಮಾಡಿ ಯಶಸ್ವಿಗೊಳಿಸಲಾಗಿದೆ. ಗ್ರಾಮದ ಯುವಕರೆಲ್ಲಾ ಸೇರಿ ಕ್ರಿಕೆಟ್ ಟೂರ್ನಮೆಂಟ್ ಏರ್ಪಡಿಸಲಾಗಿತ್ತು. ಎರಡು ದಿನದ ಕಾಲ ಟೂರ್ನಮೆಂಟ್ ನಡೆದಿದ್ದು, ಆಟದಲ್ಲಿ ಒಟ್ಟು 50 ಜನ ಆಟಗಾರರು ಭಾಗವಹಿಸಿದ್ದರು. ಭಜರಂಗಿ, ಜೈಭೀಮ್, ರಾಯಲ್ ಸ್ಟ್ರಾಂಗ್, ಎಬಿಡಿ, ಚೇಸಿಂಗ್ ಕಿಂಗ್ಸ್ ಹೀಗೆ ಒಟ್ಟು 5 ತಂಡಗಳು ಭಾಗವಹಿಸಿದ್ದವು.
ಯುವಕರಿಗೆ ಪ್ರೋತ್ಸಾಹ
ಗ್ರಾಮದ ಪ್ರತಿಯೊಬ್ಬ ಯುವಕರನ್ನು ಒಗ್ಗೂಡಿಸಿಕೊಂಡು ಆಟ ಆಡಲಾಯಿತು. ಐಪಿಎಲ್ ಮಾದರಿಯಲ್ಲಿ ಆಟಗಾರರನ್ನು ಸೆಲೆಕ್ಟ್ ಮಾಡಲಾಯಿತು. ಸಣ್ಣ ಸಣ್ಣ ಮಕ್ಕಳನ್ನು ಸೇರಿಸಿಕೊಂಡು, ಯುವಕರಿಗೆ ಚಿಕ್ಕವಯಸ್ಸಿನಲ್ಲಿಯೇ ಕ್ರೀಡೆಯ ಬಗ್ಗೆ ಉತ್ಸಾಹ ಬರುವಂತೆ ಪ್ರೋತ್ಸಾಹ ನೀಡಲಾಯಿತು. ಪ್ರಮುಖವಾಗಿ ಗ್ರಾಮೀಣ ಭಾಗದಲ್ಲಿ ಕ್ರೀಡೆಗೆ ಪ್ರೋತ್ಸಾಹ ಕಡಿಮೆ ಆಗುತ್ತಿರುವ ಹಿನ್ನೆಲೆ ಈ ರೀತಿಯ ಕ್ರೀಡೆಗಳ ಆಯೋಜನೆ ಯುವಕರನ್ನು ಕ್ರೀಡೆಗಳತ್ತ ಸೆಳೆಯಲಾಗುತ್ತಿದೆ.
ಒಟ್ಟು ಐದು ತಂಡಗಳ ನೇರ ಹಣಾಹಣಿಯ ನಡುವೆ ರಾಯಲ್ ಸ್ಟ್ರಾಂಗ್ ಬಾಯ್ಸ್ ವಿಜೇತರಾದರು, ಎಬಿಡಿ ಸ್ಟ್ರೈಕರ್ಸ್ ತಂಡ ದ್ವಿತೀಯ ಸ್ಥಾನ ಪಡೆದು ಟೂರ್ನಿಗೆ ತೆರೆ ಎಳೆದರು.
ಈ ವೇಳೆ ಹರ್ಷ ಎಂ, ಕಾಂತರಾಜ್, ಮಂಜಣ್ಣ, ಶ್ರೀಧರ್ ಹೆಚ್ ಆರ್, ಬೈಲಪ್ಪ ಎಚ್ ಎಂ, ಚನ್ನಮುನಿಯಪ್ಪ ಸಿ, ಶ್ರೀಧರ್ ಎಂ, ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…