ಮೊಟ್ಟ ಮೊದಲ ಬಾರಿಗೆ ಹಾದ್ರೀಪುರ ಪ್ರೀಮಿರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಆಯೋಜನೆ

ದೊಡ್ಡಬಳ್ಳಾಪುರ: ಇದೇ ಮೊದಲ ಬಾರಿಗೆ ತಾಲೂಕಿನ ಹಾದ್ರೀಪುರ ಗ್ರಾಮದಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜನೆ‌ ಮಾಡಿ ಯಶಸ್ವಿಗೊಳಿಸಲಾಗಿದೆ. ಗ್ರಾಮದ ಯುವಕರೆಲ್ಲಾ ಸೇರಿ ಕ್ರಿಕೆಟ್ ಟೂರ್ನಮೆಂಟ್ ಏರ್ಪಡಿಸಲಾಗಿತ್ತು. ಎರಡು ದಿನದ ಕಾಲ ಟೂರ್ನಮೆಂಟ್ ನಡೆದಿದ್ದು, ಆಟದಲ್ಲಿ ಒಟ್ಟು 50 ಜನ ಆಟಗಾರರು ಭಾಗವಹಿಸಿದ್ದರು. ಭಜರಂಗಿ, ಜೈಭೀಮ್, ರಾಯಲ್ ಸ್ಟ್ರಾಂಗ್, ಎಬಿಡಿ, ಚೇಸಿಂಗ್ ಕಿಂಗ್ಸ್ ಹೀಗೆ ಒಟ್ಟು 5 ತಂಡಗಳು ಭಾಗವಹಿಸಿದ್ದವು.

ಯುವಕರಿಗೆ ಪ್ರೋತ್ಸಾಹ

ಗ್ರಾಮದ ಪ್ರತಿಯೊಬ್ಬ ಯುವಕರನ್ನು ಒಗ್ಗೂಡಿಸಿಕೊಂಡು ಆಟ ಆಡಲಾಯಿತು. ಐಪಿಎಲ್ ಮಾದರಿಯಲ್ಲಿ ಆಟಗಾರರನ್ನು ಸೆಲೆಕ್ಟ್ ಮಾಡಲಾಯಿತು. ಸಣ್ಣ ಸಣ್ಣ ಮಕ್ಕಳನ್ನು ಸೇರಿಸಿಕೊಂಡು, ಯುವಕರಿಗೆ ಚಿಕ್ಕವಯಸ್ಸಿನಲ್ಲಿಯೇ ಕ್ರೀಡೆಯ ಬಗ್ಗೆ ಉತ್ಸಾಹ ಬರುವಂತೆ ಪ್ರೋತ್ಸಾಹ ನೀಡಲಾಯಿತು. ಪ್ರಮುಖವಾಗಿ ಗ್ರಾಮೀಣ ಭಾಗದಲ್ಲಿ ಕ್ರೀಡೆಗೆ ಪ್ರೋತ್ಸಾಹ ಕಡಿಮೆ ಆಗುತ್ತಿರುವ ಹಿನ್ನೆಲೆ ಈ ರೀತಿಯ ಕ್ರೀಡೆಗಳ ಆಯೋಜನೆ ಯುವಕರನ್ನು ಕ್ರೀಡೆಗಳತ್ತ ಸೆಳೆಯಲಾಗುತ್ತಿದೆ.

ಒಟ್ಟು ಐದು ತಂಡಗಳ ನೇರ ಹಣಾಹಣಿಯ ನಡುವೆ ರಾಯಲ್ ಸ್ಟ್ರಾಂಗ್ ಬಾಯ್ಸ್ ವಿಜೇತರಾದರು, ಎಬಿಡಿ ಸ್ಟ್ರೈಕರ್ಸ್ ತಂಡ ದ್ವಿತೀಯ ಸ್ಥಾನ ಪಡೆದು ಟೂರ್ನಿಗೆ ತೆರೆ ಎಳೆದರು.

ಈ ವೇಳೆ ಹರ್ಷ ಎಂ, ಕಾಂತರಾಜ್, ಮಂಜಣ್ಣ, ಶ್ರೀಧರ್ ಹೆಚ್ ಆರ್, ಬೈಲಪ್ಪ ಎಚ್ ಎಂ, ಚನ್ನಮುನಿಯಪ್ಪ ಸಿ, ಶ್ರೀಧರ್ ಎಂ, ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

5 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

10 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

10 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

15 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago