ದೊಡ್ಡಬಳ್ಳಾಪುರ: ಇದೇ ಮೊದಲ ಬಾರಿಗೆ ತಾಲೂಕಿನ ಹಾದ್ರೀಪುರ ಗ್ರಾಮದಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಮಾಡಿ ಯಶಸ್ವಿಗೊಳಿಸಲಾಗಿದೆ. ಗ್ರಾಮದ ಯುವಕರೆಲ್ಲಾ ಸೇರಿ ಕ್ರಿಕೆಟ್ ಟೂರ್ನಮೆಂಟ್ ಏರ್ಪಡಿಸಲಾಗಿತ್ತು. ಎರಡು ದಿನದ ಕಾಲ ಟೂರ್ನಮೆಂಟ್ ನಡೆದಿದ್ದು, ಆಟದಲ್ಲಿ ಒಟ್ಟು 50 ಜನ ಆಟಗಾರರು ಭಾಗವಹಿಸಿದ್ದರು. ಭಜರಂಗಿ, ಜೈಭೀಮ್, ರಾಯಲ್ ಸ್ಟ್ರಾಂಗ್, ಎಬಿಡಿ, ಚೇಸಿಂಗ್ ಕಿಂಗ್ಸ್ ಹೀಗೆ ಒಟ್ಟು 5 ತಂಡಗಳು ಭಾಗವಹಿಸಿದ್ದವು.
ಯುವಕರಿಗೆ ಪ್ರೋತ್ಸಾಹ
ಗ್ರಾಮದ ಪ್ರತಿಯೊಬ್ಬ ಯುವಕರನ್ನು ಒಗ್ಗೂಡಿಸಿಕೊಂಡು ಆಟ ಆಡಲಾಯಿತು. ಐಪಿಎಲ್ ಮಾದರಿಯಲ್ಲಿ ಆಟಗಾರರನ್ನು ಸೆಲೆಕ್ಟ್ ಮಾಡಲಾಯಿತು. ಸಣ್ಣ ಸಣ್ಣ ಮಕ್ಕಳನ್ನು ಸೇರಿಸಿಕೊಂಡು, ಯುವಕರಿಗೆ ಚಿಕ್ಕವಯಸ್ಸಿನಲ್ಲಿಯೇ ಕ್ರೀಡೆಯ ಬಗ್ಗೆ ಉತ್ಸಾಹ ಬರುವಂತೆ ಪ್ರೋತ್ಸಾಹ ನೀಡಲಾಯಿತು. ಪ್ರಮುಖವಾಗಿ ಗ್ರಾಮೀಣ ಭಾಗದಲ್ಲಿ ಕ್ರೀಡೆಗೆ ಪ್ರೋತ್ಸಾಹ ಕಡಿಮೆ ಆಗುತ್ತಿರುವ ಹಿನ್ನೆಲೆ ಈ ರೀತಿಯ ಕ್ರೀಡೆಗಳ ಆಯೋಜನೆ ಯುವಕರನ್ನು ಕ್ರೀಡೆಗಳತ್ತ ಸೆಳೆಯಲಾಗುತ್ತಿದೆ.
ಒಟ್ಟು ಐದು ತಂಡಗಳ ನೇರ ಹಣಾಹಣಿಯ ನಡುವೆ ರಾಯಲ್ ಸ್ಟ್ರಾಂಗ್ ಬಾಯ್ಸ್ ವಿಜೇತರಾದರು, ಎಬಿಡಿ ಸ್ಟ್ರೈಕರ್ಸ್ ತಂಡ ದ್ವಿತೀಯ ಸ್ಥಾನ ಪಡೆದು ಟೂರ್ನಿಗೆ ತೆರೆ ಎಳೆದರು.
ಈ ವೇಳೆ ಹರ್ಷ ಎಂ, ಕಾಂತರಾಜ್, ಮಂಜಣ್ಣ, ಶ್ರೀಧರ್ ಹೆಚ್ ಆರ್, ಬೈಲಪ್ಪ ಎಚ್ ಎಂ, ಚನ್ನಮುನಿಯಪ್ಪ ಸಿ, ಶ್ರೀಧರ್ ಎಂ, ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…