ಮೊಟ್ಟ ಮೊದಲ ಬಾರಿಗೆ ಹಾದ್ರೀಪುರ ಪ್ರೀಮಿರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಆಯೋಜನೆ

ದೊಡ್ಡಬಳ್ಳಾಪುರ: ಇದೇ ಮೊದಲ ಬಾರಿಗೆ ತಾಲೂಕಿನ ಹಾದ್ರೀಪುರ ಗ್ರಾಮದಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜನೆ‌ ಮಾಡಿ ಯಶಸ್ವಿಗೊಳಿಸಲಾಗಿದೆ. ಗ್ರಾಮದ ಯುವಕರೆಲ್ಲಾ ಸೇರಿ ಕ್ರಿಕೆಟ್ ಟೂರ್ನಮೆಂಟ್ ಏರ್ಪಡಿಸಲಾಗಿತ್ತು. ಎರಡು ದಿನದ ಕಾಲ ಟೂರ್ನಮೆಂಟ್ ನಡೆದಿದ್ದು, ಆಟದಲ್ಲಿ ಒಟ್ಟು 50 ಜನ ಆಟಗಾರರು ಭಾಗವಹಿಸಿದ್ದರು. ಭಜರಂಗಿ, ಜೈಭೀಮ್, ರಾಯಲ್ ಸ್ಟ್ರಾಂಗ್, ಎಬಿಡಿ, ಚೇಸಿಂಗ್ ಕಿಂಗ್ಸ್ ಹೀಗೆ ಒಟ್ಟು 5 ತಂಡಗಳು ಭಾಗವಹಿಸಿದ್ದವು.

ಯುವಕರಿಗೆ ಪ್ರೋತ್ಸಾಹ

ಗ್ರಾಮದ ಪ್ರತಿಯೊಬ್ಬ ಯುವಕರನ್ನು ಒಗ್ಗೂಡಿಸಿಕೊಂಡು ಆಟ ಆಡಲಾಯಿತು. ಐಪಿಎಲ್ ಮಾದರಿಯಲ್ಲಿ ಆಟಗಾರರನ್ನು ಸೆಲೆಕ್ಟ್ ಮಾಡಲಾಯಿತು. ಸಣ್ಣ ಸಣ್ಣ ಮಕ್ಕಳನ್ನು ಸೇರಿಸಿಕೊಂಡು, ಯುವಕರಿಗೆ ಚಿಕ್ಕವಯಸ್ಸಿನಲ್ಲಿಯೇ ಕ್ರೀಡೆಯ ಬಗ್ಗೆ ಉತ್ಸಾಹ ಬರುವಂತೆ ಪ್ರೋತ್ಸಾಹ ನೀಡಲಾಯಿತು. ಪ್ರಮುಖವಾಗಿ ಗ್ರಾಮೀಣ ಭಾಗದಲ್ಲಿ ಕ್ರೀಡೆಗೆ ಪ್ರೋತ್ಸಾಹ ಕಡಿಮೆ ಆಗುತ್ತಿರುವ ಹಿನ್ನೆಲೆ ಈ ರೀತಿಯ ಕ್ರೀಡೆಗಳ ಆಯೋಜನೆ ಯುವಕರನ್ನು ಕ್ರೀಡೆಗಳತ್ತ ಸೆಳೆಯಲಾಗುತ್ತಿದೆ.

ಒಟ್ಟು ಐದು ತಂಡಗಳ ನೇರ ಹಣಾಹಣಿಯ ನಡುವೆ ರಾಯಲ್ ಸ್ಟ್ರಾಂಗ್ ಬಾಯ್ಸ್ ವಿಜೇತರಾದರು, ಎಬಿಡಿ ಸ್ಟ್ರೈಕರ್ಸ್ ತಂಡ ದ್ವಿತೀಯ ಸ್ಥಾನ ಪಡೆದು ಟೂರ್ನಿಗೆ ತೆರೆ ಎಳೆದರು.

ಈ ವೇಳೆ ಹರ್ಷ ಎಂ, ಕಾಂತರಾಜ್, ಮಂಜಣ್ಣ, ಶ್ರೀಧರ್ ಹೆಚ್ ಆರ್, ಬೈಲಪ್ಪ ಎಚ್ ಎಂ, ಚನ್ನಮುನಿಯಪ್ಪ ಸಿ, ಶ್ರೀಧರ್ ಎಂ, ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

Ramesh Babu

Journalist

Recent Posts

ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ತಪಾಸಣೆ ಬಳಿಕ ಹುಸಿ ಕರೆ ಎಂದು ಸ್ಪಷ್ಟ

ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…

13 hours ago

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

2 days ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

2 days ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

2 days ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

2 days ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

3 days ago