ಮೊಟ್ಟ ಮೊದಲ ಬಾರಿಗೆ ಹಾದ್ರೀಪುರ ಪ್ರೀಮಿರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಆಯೋಜನೆ

ದೊಡ್ಡಬಳ್ಳಾಪುರ: ಇದೇ ಮೊದಲ ಬಾರಿಗೆ ತಾಲೂಕಿನ ಹಾದ್ರೀಪುರ ಗ್ರಾಮದಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜನೆ‌ ಮಾಡಿ ಯಶಸ್ವಿಗೊಳಿಸಲಾಗಿದೆ. ಗ್ರಾಮದ ಯುವಕರೆಲ್ಲಾ ಸೇರಿ ಕ್ರಿಕೆಟ್ ಟೂರ್ನಮೆಂಟ್ ಏರ್ಪಡಿಸಲಾಗಿತ್ತು. ಎರಡು ದಿನದ ಕಾಲ ಟೂರ್ನಮೆಂಟ್ ನಡೆದಿದ್ದು, ಆಟದಲ್ಲಿ ಒಟ್ಟು 50 ಜನ ಆಟಗಾರರು ಭಾಗವಹಿಸಿದ್ದರು. ಭಜರಂಗಿ, ಜೈಭೀಮ್, ರಾಯಲ್ ಸ್ಟ್ರಾಂಗ್, ಎಬಿಡಿ, ಚೇಸಿಂಗ್ ಕಿಂಗ್ಸ್ ಹೀಗೆ ಒಟ್ಟು 5 ತಂಡಗಳು ಭಾಗವಹಿಸಿದ್ದವು.

ಯುವಕರಿಗೆ ಪ್ರೋತ್ಸಾಹ

ಗ್ರಾಮದ ಪ್ರತಿಯೊಬ್ಬ ಯುವಕರನ್ನು ಒಗ್ಗೂಡಿಸಿಕೊಂಡು ಆಟ ಆಡಲಾಯಿತು. ಐಪಿಎಲ್ ಮಾದರಿಯಲ್ಲಿ ಆಟಗಾರರನ್ನು ಸೆಲೆಕ್ಟ್ ಮಾಡಲಾಯಿತು. ಸಣ್ಣ ಸಣ್ಣ ಮಕ್ಕಳನ್ನು ಸೇರಿಸಿಕೊಂಡು, ಯುವಕರಿಗೆ ಚಿಕ್ಕವಯಸ್ಸಿನಲ್ಲಿಯೇ ಕ್ರೀಡೆಯ ಬಗ್ಗೆ ಉತ್ಸಾಹ ಬರುವಂತೆ ಪ್ರೋತ್ಸಾಹ ನೀಡಲಾಯಿತು. ಪ್ರಮುಖವಾಗಿ ಗ್ರಾಮೀಣ ಭಾಗದಲ್ಲಿ ಕ್ರೀಡೆಗೆ ಪ್ರೋತ್ಸಾಹ ಕಡಿಮೆ ಆಗುತ್ತಿರುವ ಹಿನ್ನೆಲೆ ಈ ರೀತಿಯ ಕ್ರೀಡೆಗಳ ಆಯೋಜನೆ ಯುವಕರನ್ನು ಕ್ರೀಡೆಗಳತ್ತ ಸೆಳೆಯಲಾಗುತ್ತಿದೆ.

ಒಟ್ಟು ಐದು ತಂಡಗಳ ನೇರ ಹಣಾಹಣಿಯ ನಡುವೆ ರಾಯಲ್ ಸ್ಟ್ರಾಂಗ್ ಬಾಯ್ಸ್ ವಿಜೇತರಾದರು, ಎಬಿಡಿ ಸ್ಟ್ರೈಕರ್ಸ್ ತಂಡ ದ್ವಿತೀಯ ಸ್ಥಾನ ಪಡೆದು ಟೂರ್ನಿಗೆ ತೆರೆ ಎಳೆದರು.

ಈ ವೇಳೆ ಹರ್ಷ ಎಂ, ಕಾಂತರಾಜ್, ಮಂಜಣ್ಣ, ಶ್ರೀಧರ್ ಹೆಚ್ ಆರ್, ಬೈಲಪ್ಪ ಎಚ್ ಎಂ, ಚನ್ನಮುನಿಯಪ್ಪ ಸಿ, ಶ್ರೀಧರ್ ಎಂ, ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

Ramesh Babu

Journalist

Recent Posts

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

2 hours ago

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

5 hours ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

6 hours ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

18 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

22 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

24 hours ago