ದೊಡ್ಡಬಳ್ಳಾಪುರ: ಇದೇ ಮೊದಲ ಬಾರಿಗೆ ತಾಲೂಕಿನ ಹಾದ್ರೀಪುರ ಗ್ರಾಮದಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಮಾಡಿ ಯಶಸ್ವಿಗೊಳಿಸಲಾಗಿದೆ. ಗ್ರಾಮದ ಯುವಕರೆಲ್ಲಾ ಸೇರಿ ಕ್ರಿಕೆಟ್ ಟೂರ್ನಮೆಂಟ್ ಏರ್ಪಡಿಸಲಾಗಿತ್ತು. ಎರಡು ದಿನದ ಕಾಲ ಟೂರ್ನಮೆಂಟ್ ನಡೆದಿದ್ದು, ಆಟದಲ್ಲಿ ಒಟ್ಟು 50 ಜನ ಆಟಗಾರರು ಭಾಗವಹಿಸಿದ್ದರು. ಭಜರಂಗಿ, ಜೈಭೀಮ್, ರಾಯಲ್ ಸ್ಟ್ರಾಂಗ್, ಎಬಿಡಿ, ಚೇಸಿಂಗ್ ಕಿಂಗ್ಸ್ ಹೀಗೆ ಒಟ್ಟು 5 ತಂಡಗಳು ಭಾಗವಹಿಸಿದ್ದವು.
ಯುವಕರಿಗೆ ಪ್ರೋತ್ಸಾಹ
ಗ್ರಾಮದ ಪ್ರತಿಯೊಬ್ಬ ಯುವಕರನ್ನು ಒಗ್ಗೂಡಿಸಿಕೊಂಡು ಆಟ ಆಡಲಾಯಿತು. ಐಪಿಎಲ್ ಮಾದರಿಯಲ್ಲಿ ಆಟಗಾರರನ್ನು ಸೆಲೆಕ್ಟ್ ಮಾಡಲಾಯಿತು. ಸಣ್ಣ ಸಣ್ಣ ಮಕ್ಕಳನ್ನು ಸೇರಿಸಿಕೊಂಡು, ಯುವಕರಿಗೆ ಚಿಕ್ಕವಯಸ್ಸಿನಲ್ಲಿಯೇ ಕ್ರೀಡೆಯ ಬಗ್ಗೆ ಉತ್ಸಾಹ ಬರುವಂತೆ ಪ್ರೋತ್ಸಾಹ ನೀಡಲಾಯಿತು. ಪ್ರಮುಖವಾಗಿ ಗ್ರಾಮೀಣ ಭಾಗದಲ್ಲಿ ಕ್ರೀಡೆಗೆ ಪ್ರೋತ್ಸಾಹ ಕಡಿಮೆ ಆಗುತ್ತಿರುವ ಹಿನ್ನೆಲೆ ಈ ರೀತಿಯ ಕ್ರೀಡೆಗಳ ಆಯೋಜನೆ ಯುವಕರನ್ನು ಕ್ರೀಡೆಗಳತ್ತ ಸೆಳೆಯಲಾಗುತ್ತಿದೆ.
ಒಟ್ಟು ಐದು ತಂಡಗಳ ನೇರ ಹಣಾಹಣಿಯ ನಡುವೆ ರಾಯಲ್ ಸ್ಟ್ರಾಂಗ್ ಬಾಯ್ಸ್ ವಿಜೇತರಾದರು, ಎಬಿಡಿ ಸ್ಟ್ರೈಕರ್ಸ್ ತಂಡ ದ್ವಿತೀಯ ಸ್ಥಾನ ಪಡೆದು ಟೂರ್ನಿಗೆ ತೆರೆ ಎಳೆದರು.
ಈ ವೇಳೆ ಹರ್ಷ ಎಂ, ಕಾಂತರಾಜ್, ಮಂಜಣ್ಣ, ಶ್ರೀಧರ್ ಹೆಚ್ ಆರ್, ಬೈಲಪ್ಪ ಎಚ್ ಎಂ, ಚನ್ನಮುನಿಯಪ್ಪ ಸಿ, ಶ್ರೀಧರ್ ಎಂ, ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…
ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…
ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…