ಮೊದಲನೇ ಹೆಂಡತಿಗೆ ಗೊತ್ತಿಲ್ಲದೇ ಎರಡನೇ ಮದುವೆಗೆ ಪತಿರಾಯ ಸಜ್ಜು: ಮದುವೆ ಮನೆಗೆ ಮೊದಲನೇ ಹೆಂಡತಿ ದಿಢೀರ್ ಎಂಟ್ರಿ: ಹೆಂಡತಿಯನ್ನ ನೋಡಿ ಗಂಡ ಕಕ್ಕಾಬಿಕ್ಕಿ: ಪೊಲೀಸ್ ಪ್ರೊಟೆಕ್ಷನ್ ನಲ್ಲಿ‌ 2ನೇ ಮದುವೆ ನಿಲ್ಲಿಸಿದ ಹೆಂಡತಿ

ಆಕೆ‌ ನೂರಾರು ಕನಸುಗಳನ್ನ ಹೊತ್ತು ಪೋಷಕರ ವಿರೋಧದ ನಡುವೆಯೂ ಪ್ರೀತಿಸಿ ಮದುವೆ ಆಗಿದ್ದಳು. ಇವರಿಬ್ಬರ ಪ್ರೀತಿಗೆ ಎರಡು ಗಂಡು ಮಕ್ಕಳು ಕೂಡ ಇವೆ.  ಮದುವೆ ಆಗಿ 18 ವರ್ಷ ಆದ ನಂತರ ಗಂಡ‌ ಈಗ ಎರಡನೇ ಮದುವೆ ಆಗೋದಕ್ಕೆ ಮುಂದಾಗಿದ್ದಾನೆ. ಆದರೆ, ಸಡನ್ ಆಗಿ ಎಂಟ್ರಿ ಕೊಟ್ಟ ಮೊದಲ ಹೆಂಡತಿ ಮದುವೆಗೆ ಸಿದ್ಧನಿದ್ದ ಗಂಡನನ್ನ ಪೊಲೀಸ್ ಠಾಣೆ ಮೆಟ್ಟಿಲು ಏರಿಸುವಂತೆ ಮಾಡಿದ್ದಾಳೆ. ಅಷ್ಟಕ್ಕೂ ಆ ಘಟನೆ ನಡೆದಿದ್ದು ಎಲ್ಲಿ ಅಂತಿರಾ ಈ ಸ್ಟೋರಿ ಓದಿ………

ಹೌದು… ಹೀಗೆ ಮದುವೆ ಮನೆಯ ಬಳಿ ಪೊಲೀಸರೊಂದಿಗೆ ಮಾತನಾಡುತ್ತಿರುವ ಮಹಿಳೆ, ಮದುವೆಗೆ ಸಿದ್ಧನಾಗಿದ್ದ ಮಧುಮಗ ಪೊಲೀಸ್ ಜೀಪ್‌ ಹತ್ತುತ್ತಿರುವ ಅಕ್ಕ ಪಡೆಯ ಸಿಬ್ಬಂದಿ, ಈ ಎಲ್ಲಾ ದೃಶ್ಯಗಳು ಕಂಡು ಬಂದಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ  ದೇವನಹಳ್ಳಿಯ ಕೋಡಗುರ್ಕಿ ಗ್ರಾಮದ ಹೊರವಲಯದ ಮುನೇಶ್ವರ ದೇವಾಲಯದ ಬಳಿ.

ಸುರೇಶನನ್ನು ನೊಂದ ಮಹಿಳೆ ಕಳೆದ 18 ವರ್ಷದ ಹಿಂದೆ ಪ್ರೀತಿಸಿ ಮದುವೆ ಆಗಿದ್ದಳು. ಪೋಷಕರ ವಿರೋಧದ ನಡುವೆಯೂ ಸುರೇಶನೇ ಬೇಕೆಂದು ಸಾಕಷ್ಟು ನಂಬಿಕೆಯಿಟ್ಟು ಮದುವೆ ಆಗಿದ್ದಳು. ಮೊದ ಮೊದಲು ಚೆನ್ನಾಗಿ ಇದ್ದ ಸಂಸಾರ, ಸುರೇಶನ ಕುಡಿತದ ಚಟಕ್ಕೆ ಬಿರುಕು ಪ್ರಾರಂಭವಾಯಿತು. ‌ನಂತರ ಇವರಿಬ್ಬರ ಮಧ್ಯೆ ಸಾಕಷ್ಟು ಗಲಾಟೆಗಳಾಗಿ ರಾಜಿ ಪಂಚಾಯತಿ ಕೂಡ ನಡೆದಿವೆ. ಎದೆ ಎತ್ತರಕ್ಕೆ ಎರಡು ಗಂಡು ಮಕ್ಕಳಿದ್ದರೂ ಈಗ ಸುರೇಶ ಮತ್ತೊಂದು ಮದುವೆಗೆ ಮುಂದಾಗಿದ್ದಾನೆ.

ಇನ್ನೂ ನೊಂದ ಮಹಿಳೆ ಮತ್ತು ಸುರೇಶನ ನಡುವೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದಿತ್ತು. ಆಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಗ ಇಬ್ಬರೂ ಕೂಡ ಕಳೆದ ಒಂದೂವರೆ ವರ್ಷದ ಹಿಂದೆ ದೂರವಾಗಿದ್ದರು. ಈ ವೇಳೆ ಮಕ್ಕಳ ಪೋಷಣೆಗೆ ಜೀವನಾಂಶ ಕೊಡುತ್ತೇನೆ ಎಂದು ಒಪ್ಪಿಕೊಂಡಿದ್ದ ಸುರೇಶ್, ಇದೀಗ ನಾಟಕವಾಡಲು ಪ್ರಾರಂಭ ಮಾಡಿದ್ದಾನೆ. ನಂತರ ಮೊದಲ ಹೆಂಡತಿಗೆ ತಿಳಿಯದೇ ಎರಡನೇ ಮದುವೆಗೆ ಮುಂದಾಗಿದ್ದಾನೆ.‌ಈ ವಿಷಯ ತಿಳಿದ ಮೊದಲ ಹೆಂಡತಿ ದೊಡ್ಡಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿ, ನಂತರ ಅಕ್ಕಪಡೆಯ ಸಹಾಯದಿಂದ ಎರಡನೇ ಮದುವೆ ನಡೆಯುತ್ತಿದ್ದ ದೇವಾಲಯದ ಬಳಿಗೆ ಹೋಗಿ ಮದುವೆ ನಿಲ್ಲಿಸಿದ್ದಾಳೆ. ಪೊಲೀಸರು ಅರೋಪಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆದುತ್ತಿದ್ದಾರೆ.

ಒಟ್ಟಾರೆ, ಪ್ರೀತಿಸಿ ಮದುವೆ ಆದ ಸುರೇಶ, ಮೊದಲ ಹೆಂಡತಿಯನ್ನೂ ಸರಿಯಾಗಿ ನೋಡಿಕೊಳ್ಳದೆ ಈಗ ಎರಡನೇ ಮದುವೆ ಆಗಲು ಹೋಗಿ ಇನ್ನೊಂದು ಮಹಿಳೆಯ ಬಾಳಲ್ಲಿ ಕುಡ ವಿಲನ್ ಆಗಿದ್ದಾನೆ. ಮದುವೆಗೆ ಲಕ್ಷಾಂತರ ರುಪಾಯಿ ಹಣ ಖರ್ಚು ಮಾಡಿದ್ದ ಪೋಷಕರು ಈಗ ದಿಕ್ಕೇ ತೋಚದ ಸ್ಥಿತಿಗೆ ತಲುಪಿದ್ದಾರೆ‌.

Ramesh Babu

Journalist

Recent Posts

ಅಕಾಲಿಕ ಮತ್ತು ಆಲಿಕಲ್ಲು ಮಳೆ: 3,196 ಹೆಕ್ಟೇರ್ ಕೃಷಿ ಬೆಳೆ, 3697.96 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ- ಶೀಘ್ರವೇ ಬೆಳೆ ಹಾನಿ ಸಮೀಕ್ಷೆ ನಡೆಸಿ, ಪರಿಹಾರ ನೀಡಲಾಗುವುದು- ಸಚಿವ ಪ್ರಿಯಾಂಕ್ ಖರ್ಗೆ

ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ…

4 hours ago

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನ: 112 ಪೊಲೀಸರ ಸಮಯಪ್ರಜ್ಞೆಯಿಂದ ಉಳಿಯಿತು ವ್ಯಕ್ತಿ ಪ್ರಾಣ: ಪೊಲೀಸರ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತ

ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಗಸ್ತಿನಲ್ಲಿದ್ದ ಇಬ್ಬರು 112 ಪೊಲೀಸರು ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ದೌಡಾಯಿಸಿ ರಕ್ಷಣೆ ಮಾಡಿರುವಂತಹ…

19 hours ago

ಮನೆ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ – 79 ಲಕ್ಷದ ಅರ್ಧ ಕೆಜಿ ಚಿನ್ನ ವಶ

ರಾಮಮೂರ್ತಿ ನಗರ ಪೊಲೀಸರು ಮನೆಗಳ್ಳತನ ಮಾಡುತ್ತಿದ್ದ ಆರೋಪಿ ಡಿ.ರಾಜ(46) ಬಂಧಿಸಿ, ಆತನಿಂದ 79 ಲಕ್ಷ ಮೌಲ್ಯದ 527 ಗ್ರಾಂ ಚಿನ್ನಾಭರಣ…

22 hours ago

ಕೊಲೆ ಮತ್ತು ಡಕಾಯಿತಿ ಪ್ರಕರಣ: ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಕೋರ್ಟ್

ಕೊಲೆ ಮತ್ತು ಡಕಾಯಿತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ವಶಕ್ಕೆ ಪಡೆಯಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿದಲ್ಲದೇ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ…

22 hours ago

ತಾಲ್ಲೂಕಿನ 20 ಗ್ರಾಮಗಳಲ್ಲಿ ಹಾದುಹೋಗಿರುವ 220 ಕೆವಿ ವಿದ್ಯುತ್ ಕೇಬಲ್: ಭೂ ಪರಿಹಾರ ಹಣ ಹೆಚ್ಚಿಸಲು ರೈತ ಸಂಘ ಒತ್ತಾಯ

ದೊಡ್ಡಬಳ್ಳಾಪುರ ತಾಲ್ಲೂಕಿನ ಕೇಂದ್ರದಿಂದ ಗೌರಿಬಿದನೂರು ಕೇಂದ್ರದ ವರೆಗೆ ಹಾದುಹೋಗಿರುವ 220 ಕೆವಿ ವಿದ್ಯುತ್ ಲೈನ್ ಏಕ ಮಾರ್ಗವನ್ನು ಬದಲಾವಣೆ ಮಾಡಿ…

1 day ago

ನ್ಯಾ. ನಾಗಮೋಹನ್ ದಾಸ್ ವರದಿ ಅವೈಜ್ಞಾನಿಕ: ಒಳಮೀಸಲಾತಿ ತಾರತಮ್ಯ ಸರಿಪಡಿಸುವಂತೆ ಅಗ್ರಹಿಸಿ ಮಾ. 25ರಂದು ಪ್ರತಿಭಟನೆ – ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ನರೇಶ

ಒಳಮೀಸಲಾತಿ ವಿಷಯದಲ್ಲಿ ನಾಗಮೋಹನ್ ದಾಸ್ ಆಯೋಗ ನೀಡಿರುವ ಅವೈಜ್ಞಾನಿಕ ವರದಿಯನ್ನು ತಿರಸ್ಕರಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ…

2 days ago