ಆಕೆ ನೂರಾರು ಕನಸುಗಳನ್ನ ಹೊತ್ತು ಪೋಷಕರ ವಿರೋಧದ ನಡುವೆಯೂ ಪ್ರೀತಿಸಿ ಮದುವೆ ಆಗಿದ್ದಳು. ಇವರಿಬ್ಬರ ಪ್ರೀತಿಗೆ ಎರಡು ಗಂಡು ಮಕ್ಕಳು ಕೂಡ ಇವೆ. ಮದುವೆ ಆಗಿ 18 ವರ್ಷ ಆದ ನಂತರ ಗಂಡ ಈಗ ಎರಡನೇ ಮದುವೆ ಆಗೋದಕ್ಕೆ ಮುಂದಾಗಿದ್ದಾನೆ. ಆದರೆ, ಸಡನ್ ಆಗಿ ಎಂಟ್ರಿ ಕೊಟ್ಟ ಮೊದಲ ಹೆಂಡತಿ ಮದುವೆಗೆ ಸಿದ್ಧನಿದ್ದ ಗಂಡನನ್ನ ಪೊಲೀಸ್ ಠಾಣೆ ಮೆಟ್ಟಿಲು ಏರಿಸುವಂತೆ ಮಾಡಿದ್ದಾಳೆ. ಅಷ್ಟಕ್ಕೂ ಆ ಘಟನೆ ನಡೆದಿದ್ದು ಎಲ್ಲಿ ಅಂತಿರಾ ಈ ಸ್ಟೋರಿ ಓದಿ………
ಹೌದು… ಹೀಗೆ ಮದುವೆ ಮನೆಯ ಬಳಿ ಪೊಲೀಸರೊಂದಿಗೆ ಮಾತನಾಡುತ್ತಿರುವ ಮಹಿಳೆ, ಮದುವೆಗೆ ಸಿದ್ಧನಾಗಿದ್ದ ಮಧುಮಗ ಪೊಲೀಸ್ ಜೀಪ್ ಹತ್ತುತ್ತಿರುವ ಅಕ್ಕ ಪಡೆಯ ಸಿಬ್ಬಂದಿ, ಈ ಎಲ್ಲಾ ದೃಶ್ಯಗಳು ಕಂಡು ಬಂದಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಕೋಡಗುರ್ಕಿ ಗ್ರಾಮದ ಹೊರವಲಯದ ಮುನೇಶ್ವರ ದೇವಾಲಯದ ಬಳಿ.
ಸುರೇಶನನ್ನು ನೊಂದ ಮಹಿಳೆ ಕಳೆದ 18 ವರ್ಷದ ಹಿಂದೆ ಪ್ರೀತಿಸಿ ಮದುವೆ ಆಗಿದ್ದಳು. ಪೋಷಕರ ವಿರೋಧದ ನಡುವೆಯೂ ಸುರೇಶನೇ ಬೇಕೆಂದು ಸಾಕಷ್ಟು ನಂಬಿಕೆಯಿಟ್ಟು ಮದುವೆ ಆಗಿದ್ದಳು. ಮೊದ ಮೊದಲು ಚೆನ್ನಾಗಿ ಇದ್ದ ಸಂಸಾರ, ಸುರೇಶನ ಕುಡಿತದ ಚಟಕ್ಕೆ ಬಿರುಕು ಪ್ರಾರಂಭವಾಯಿತು. ನಂತರ ಇವರಿಬ್ಬರ ಮಧ್ಯೆ ಸಾಕಷ್ಟು ಗಲಾಟೆಗಳಾಗಿ ರಾಜಿ ಪಂಚಾಯತಿ ಕೂಡ ನಡೆದಿವೆ. ಎದೆ ಎತ್ತರಕ್ಕೆ ಎರಡು ಗಂಡು ಮಕ್ಕಳಿದ್ದರೂ ಈಗ ಸುರೇಶ ಮತ್ತೊಂದು ಮದುವೆಗೆ ಮುಂದಾಗಿದ್ದಾನೆ.
ಇನ್ನೂ ನೊಂದ ಮಹಿಳೆ ಮತ್ತು ಸುರೇಶನ ನಡುವೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದಿತ್ತು. ಆಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಗ ಇಬ್ಬರೂ ಕೂಡ ಕಳೆದ ಒಂದೂವರೆ ವರ್ಷದ ಹಿಂದೆ ದೂರವಾಗಿದ್ದರು. ಈ ವೇಳೆ ಮಕ್ಕಳ ಪೋಷಣೆಗೆ ಜೀವನಾಂಶ ಕೊಡುತ್ತೇನೆ ಎಂದು ಒಪ್ಪಿಕೊಂಡಿದ್ದ ಸುರೇಶ್, ಇದೀಗ ನಾಟಕವಾಡಲು ಪ್ರಾರಂಭ ಮಾಡಿದ್ದಾನೆ. ನಂತರ ಮೊದಲ ಹೆಂಡತಿಗೆ ತಿಳಿಯದೇ ಎರಡನೇ ಮದುವೆಗೆ ಮುಂದಾಗಿದ್ದಾನೆ.ಈ ವಿಷಯ ತಿಳಿದ ಮೊದಲ ಹೆಂಡತಿ ದೊಡ್ಡಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿ, ನಂತರ ಅಕ್ಕಪಡೆಯ ಸಹಾಯದಿಂದ ಎರಡನೇ ಮದುವೆ ನಡೆಯುತ್ತಿದ್ದ ದೇವಾಲಯದ ಬಳಿಗೆ ಹೋಗಿ ಮದುವೆ ನಿಲ್ಲಿಸಿದ್ದಾಳೆ. ಪೊಲೀಸರು ಅರೋಪಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆದುತ್ತಿದ್ದಾರೆ.
ಒಟ್ಟಾರೆ, ಪ್ರೀತಿಸಿ ಮದುವೆ ಆದ ಸುರೇಶ, ಮೊದಲ ಹೆಂಡತಿಯನ್ನೂ ಸರಿಯಾಗಿ ನೋಡಿಕೊಳ್ಳದೆ ಈಗ ಎರಡನೇ ಮದುವೆ ಆಗಲು ಹೋಗಿ ಇನ್ನೊಂದು ಮಹಿಳೆಯ ಬಾಳಲ್ಲಿ ಕುಡ ವಿಲನ್ ಆಗಿದ್ದಾನೆ. ಮದುವೆಗೆ ಲಕ್ಷಾಂತರ ರುಪಾಯಿ ಹಣ ಖರ್ಚು ಮಾಡಿದ್ದ ಪೋಷಕರು ಈಗ ದಿಕ್ಕೇ ತೋಚದ ಸ್ಥಿತಿಗೆ ತಲುಪಿದ್ದಾರೆ.
ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…
ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ಪೂರಕವಾಗಿದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ನ…
ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…