ಮೊದಲನೇ ಹೆಂಡತಿಗೆ ಮಗು ಕೊಟ್ಟು, ಡೈವರ್ಸ್ ನೀಡದೇ ಮತ್ತೊಬ್ಬಳಿಗೆ ಬಾಳು ಕೊಟ್ಟ ಭೂಪ..?: ಪೊಲೀಸ್ ಠಾಣೆ ಮೆಟ್ಟಿಲೇರಿದ ಫಸ್ಟ್ ವೈಫ್

ಅಣ್ಣ ಮದುವೆಯಾಗಿದ್ದ ಮನೆಗೆ ಬಂದು ಹೋಗುತ್ತಿದ್ದ ಆತ, ಬಂದು ಹೋಗುವ ಗ್ಯಾಪ್ ನಲ್ಲಿ ಅತ್ತಿಗೆ ತಂಗಿಯನ್ನ ಲವ್ ಮಾಡಿ ಮದುವೆಯಾದ, ಅವಳಿಗೆ ಇಬ್ಬರು ಮಕ್ಕಳನ್ನ ಕೊಟ್ಟವನು ಈಗ ಮತ್ತೊಬ್ಬಳನ್ನು ಮದುವೆಯಾಗುವ ಮೂಲಕ ಇಬ್ಬರ ಬಾಳಿನಲ್ಲಿ ಬಿರುಗಾಳಿ ಎಬ್ಬಿಸಿದ್ದಾನೆ.

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ನಗರಗೆರೆ ಗ್ರಾಮದ  ರಘು ಎಂಬಾತನ್ನು 10 ವರ್ಷಗಳ ಹಿಂದೆ ಮೊದಲನೇ ಹೆಂಡತಿ ಶಿಲ್ಪಾ ಪ್ರೀತಿಸಿ ಮದುವೆಯಾಗಿದ್ದರು. ಅಂದಹಾಗೇ ಈ ರಘು ಶಿಲ್ಪಾಳ ಅಕ್ಕ ಪ್ರೇಮ ಮದುವೆಯಾಗಿದ್ದ, ಗಂಡನ ತಮ್ಮ, ಮದುವೆಯಾದ ಪ್ರಾರಂಭದಲ್ಲಿ ರಘು ಮತ್ತು ಶಿಲ್ಪಾ ದಾಪಂತ್ಯ ಚೆನ್ನಾಗಿಯೇ ಇತ್ತು. ಇಬ್ಬರು ಮುದ್ದಿನ ಗಂಡು ಮಕ್ಕಳಿದ್ದರು. ಎರಡನೇ ಮಗ ಅನಾರೋಗ್ಯದಿಂದ ಸಾವನ್ನಪ್ಪಿದ ನಂತರ ರಘುವಿನ ವರ್ತನೆಯೇ ಬದಲಾಯ್ತು ಅಂತಾರೆ ಶಿಲ್ಪಾ.

ಹೆಂಡತಿ ಹೆಸರಿನಲ್ಲಿ ಸಾಲ ಮಾಡುತ್ತಿದ್ದ ರಘು, ಏಕೆ ಸಾಲ ಮಾಡ್ತಿರಾ ಅಂತಾ ಹೆಂಡತಿ ಕೇಳಿದ್ರೆ, ನನಗೆ ಹಣ ಬೇಕು, ನಿನ್ನ ಸಹೋದರರಿಂದ ವರದಕ್ಷಿಣೆಯ ಹಣ ತಂದುಕೊಡುವಂತೆ ಕೇಳುತ್ತಿದ್ದನಂತೆ, ಹಣ ತಂದು ಕೊಡದಿದ್ದಾರೆ ಮತ್ತೊಂದು ಮದುವೆಯಾಗುವೆ ಎಂದು ಕಿರುಕುಳ ಕೊಡುತ್ತಿದ್ದಾನಂತೆ, ಶಿಲ್ಪಾ ವರದಕ್ಷಿಣೆ ಕಿರುಕುಳ ಪ್ರಕರಣವನ್ನ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲು ಮಾಡಿದ್ದಾರೆ.

ರಘು ದೊಡ್ಡಬಳ್ಳಾಪುರದ ಹುಡುಗಿಯೊಬ್ಬಳನ್ನು ಎರಡನೇ ಮದುವೆಯಾಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆತನ ತಂದೆಯೇ ಎರಡನೇ ಮದುವೆಯಾಗಿರುವ ಬಗ್ಗೆ ಸುದ್ದಿ ತಿಳಿಸಿದ್ದಾರೆ ಎಂದು ಶಿಲ್ಪಾ ಆರೋಪ ಮಾಡಿದ್ದಾರೆ, ರಘು ಎರಡನೇ ಮದುವೆಯಾಗಿರುವ ಹುಡುಗಿಗೂ ಸಹ ಇದು ಎರಡನೇ ಮದುವೆ, ಮೊದಲನೇ ಗಂಡ ಸಾವನ್ನಪ್ಪಿದ್ದಾನೆ, ಆಕೆಯ ಗಂಡನಿಂದ ಹಣ ಬರುವ ಸುಳಿವು ಸಿಕ್ಕ ರಘು ಮತ್ತು ಆತನ ಕುಟುಂಬದವರು ಆಕೆಯ ಜೊತೆ ಎರಡನೇ ಮದುವೆ ಮಾಡಿಸಿದ್ದಾರೆಂದು ಶಿಲ್ಪಾ ಮತ್ತು ಆಕೆಯ ಕುಟುಂಬ ಆರೋಪ ಮಾಡಿದೆ.

ನನಗೆ ನನ್ನ ಗಂಡ ಬೇಕು, ಯಾವುದೇ ಕೆಲಸಕ್ಕೆ ಹೋಗದ ನಾನು ಮಗನನ್ನು ಸಾಕುವುದು ಹೇಗೆ ನನಗೆ ನ್ಯಾಯ ಬೇಕೆಂದು ಕೇಳಿಕೊಂಡಿದ್ದಾರೆ, ಇತ್ತಾ ರಘು ಕುಟುಂಬದವರಿಂದ ಜೀವ ಬೆದರಿಕೆ ಇದ್ದು ನಮ್ಮ ರಕ್ಷಣೆ ಕೊಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

16 hours ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

17 hours ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

22 hours ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

23 hours ago

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

2 days ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

2 days ago