ಅಣ್ಣ ಮದುವೆಯಾಗಿದ್ದ ಮನೆಗೆ ಬಂದು ಹೋಗುತ್ತಿದ್ದ ಆತ, ಬಂದು ಹೋಗುವ ಗ್ಯಾಪ್ ನಲ್ಲಿ ಅತ್ತಿಗೆ ತಂಗಿಯನ್ನ ಲವ್ ಮಾಡಿ ಮದುವೆಯಾದ, ಅವಳಿಗೆ ಇಬ್ಬರು ಮಕ್ಕಳನ್ನ ಕೊಟ್ಟವನು ಈಗ ಮತ್ತೊಬ್ಬಳನ್ನು ಮದುವೆಯಾಗುವ ಮೂಲಕ ಇಬ್ಬರ ಬಾಳಿನಲ್ಲಿ ಬಿರುಗಾಳಿ ಎಬ್ಬಿಸಿದ್ದಾನೆ.
ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ನಗರಗೆರೆ ಗ್ರಾಮದ ರಘು ಎಂಬಾತನ್ನು 10 ವರ್ಷಗಳ ಹಿಂದೆ ಮೊದಲನೇ ಹೆಂಡತಿ ಶಿಲ್ಪಾ ಪ್ರೀತಿಸಿ ಮದುವೆಯಾಗಿದ್ದರು. ಅಂದಹಾಗೇ ಈ ರಘು ಶಿಲ್ಪಾಳ ಅಕ್ಕ ಪ್ರೇಮ ಮದುವೆಯಾಗಿದ್ದ, ಗಂಡನ ತಮ್ಮ, ಮದುವೆಯಾದ ಪ್ರಾರಂಭದಲ್ಲಿ ರಘು ಮತ್ತು ಶಿಲ್ಪಾ ದಾಪಂತ್ಯ ಚೆನ್ನಾಗಿಯೇ ಇತ್ತು. ಇಬ್ಬರು ಮುದ್ದಿನ ಗಂಡು ಮಕ್ಕಳಿದ್ದರು. ಎರಡನೇ ಮಗ ಅನಾರೋಗ್ಯದಿಂದ ಸಾವನ್ನಪ್ಪಿದ ನಂತರ ರಘುವಿನ ವರ್ತನೆಯೇ ಬದಲಾಯ್ತು ಅಂತಾರೆ ಶಿಲ್ಪಾ.
ಹೆಂಡತಿ ಹೆಸರಿನಲ್ಲಿ ಸಾಲ ಮಾಡುತ್ತಿದ್ದ ರಘು, ಏಕೆ ಸಾಲ ಮಾಡ್ತಿರಾ ಅಂತಾ ಹೆಂಡತಿ ಕೇಳಿದ್ರೆ, ನನಗೆ ಹಣ ಬೇಕು, ನಿನ್ನ ಸಹೋದರರಿಂದ ವರದಕ್ಷಿಣೆಯ ಹಣ ತಂದುಕೊಡುವಂತೆ ಕೇಳುತ್ತಿದ್ದನಂತೆ, ಹಣ ತಂದು ಕೊಡದಿದ್ದಾರೆ ಮತ್ತೊಂದು ಮದುವೆಯಾಗುವೆ ಎಂದು ಕಿರುಕುಳ ಕೊಡುತ್ತಿದ್ದಾನಂತೆ, ಶಿಲ್ಪಾ ವರದಕ್ಷಿಣೆ ಕಿರುಕುಳ ಪ್ರಕರಣವನ್ನ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲು ಮಾಡಿದ್ದಾರೆ.
ರಘು ದೊಡ್ಡಬಳ್ಳಾಪುರದ ಹುಡುಗಿಯೊಬ್ಬಳನ್ನು ಎರಡನೇ ಮದುವೆಯಾಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆತನ ತಂದೆಯೇ ಎರಡನೇ ಮದುವೆಯಾಗಿರುವ ಬಗ್ಗೆ ಸುದ್ದಿ ತಿಳಿಸಿದ್ದಾರೆ ಎಂದು ಶಿಲ್ಪಾ ಆರೋಪ ಮಾಡಿದ್ದಾರೆ, ರಘು ಎರಡನೇ ಮದುವೆಯಾಗಿರುವ ಹುಡುಗಿಗೂ ಸಹ ಇದು ಎರಡನೇ ಮದುವೆ, ಮೊದಲನೇ ಗಂಡ ಸಾವನ್ನಪ್ಪಿದ್ದಾನೆ, ಆಕೆಯ ಗಂಡನಿಂದ ಹಣ ಬರುವ ಸುಳಿವು ಸಿಕ್ಕ ರಘು ಮತ್ತು ಆತನ ಕುಟುಂಬದವರು ಆಕೆಯ ಜೊತೆ ಎರಡನೇ ಮದುವೆ ಮಾಡಿಸಿದ್ದಾರೆಂದು ಶಿಲ್ಪಾ ಮತ್ತು ಆಕೆಯ ಕುಟುಂಬ ಆರೋಪ ಮಾಡಿದೆ.
ನನಗೆ ನನ್ನ ಗಂಡ ಬೇಕು, ಯಾವುದೇ ಕೆಲಸಕ್ಕೆ ಹೋಗದ ನಾನು ಮಗನನ್ನು ಸಾಕುವುದು ಹೇಗೆ ನನಗೆ ನ್ಯಾಯ ಬೇಕೆಂದು ಕೇಳಿಕೊಂಡಿದ್ದಾರೆ, ಇತ್ತಾ ರಘು ಕುಟುಂಬದವರಿಂದ ಜೀವ ಬೆದರಿಕೆ ಇದ್ದು ನಮ್ಮ ರಕ್ಷಣೆ ಕೊಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.
ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…
‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…
ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…
ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…
ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…
ದೇವರಹಿಪ್ಪರಗಿ: ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…