ಮೊದಲನೇ ಹೆಂಡತಿಗೆ ಮಗು ಕೊಟ್ಟು, ಡೈವರ್ಸ್ ನೀಡದೇ ಮತ್ತೊಬ್ಬಳಿಗೆ ಬಾಳು ಕೊಟ್ಟ ಭೂಪ..?: ಪೊಲೀಸ್ ಠಾಣೆ ಮೆಟ್ಟಿಲೇರಿದ ಫಸ್ಟ್ ವೈಫ್

ಅಣ್ಣ ಮದುವೆಯಾಗಿದ್ದ ಮನೆಗೆ ಬಂದು ಹೋಗುತ್ತಿದ್ದ ಆತ, ಬಂದು ಹೋಗುವ ಗ್ಯಾಪ್ ನಲ್ಲಿ ಅತ್ತಿಗೆ ತಂಗಿಯನ್ನ ಲವ್ ಮಾಡಿ ಮದುವೆಯಾದ, ಅವಳಿಗೆ ಇಬ್ಬರು ಮಕ್ಕಳನ್ನ ಕೊಟ್ಟವನು ಈಗ ಮತ್ತೊಬ್ಬಳನ್ನು ಮದುವೆಯಾಗುವ ಮೂಲಕ ಇಬ್ಬರ ಬಾಳಿನಲ್ಲಿ ಬಿರುಗಾಳಿ ಎಬ್ಬಿಸಿದ್ದಾನೆ.

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ನಗರಗೆರೆ ಗ್ರಾಮದ  ರಘು ಎಂಬಾತನ್ನು 10 ವರ್ಷಗಳ ಹಿಂದೆ ಮೊದಲನೇ ಹೆಂಡತಿ ಶಿಲ್ಪಾ ಪ್ರೀತಿಸಿ ಮದುವೆಯಾಗಿದ್ದರು. ಅಂದಹಾಗೇ ಈ ರಘು ಶಿಲ್ಪಾಳ ಅಕ್ಕ ಪ್ರೇಮ ಮದುವೆಯಾಗಿದ್ದ, ಗಂಡನ ತಮ್ಮ, ಮದುವೆಯಾದ ಪ್ರಾರಂಭದಲ್ಲಿ ರಘು ಮತ್ತು ಶಿಲ್ಪಾ ದಾಪಂತ್ಯ ಚೆನ್ನಾಗಿಯೇ ಇತ್ತು. ಇಬ್ಬರು ಮುದ್ದಿನ ಗಂಡು ಮಕ್ಕಳಿದ್ದರು. ಎರಡನೇ ಮಗ ಅನಾರೋಗ್ಯದಿಂದ ಸಾವನ್ನಪ್ಪಿದ ನಂತರ ರಘುವಿನ ವರ್ತನೆಯೇ ಬದಲಾಯ್ತು ಅಂತಾರೆ ಶಿಲ್ಪಾ.

ಹೆಂಡತಿ ಹೆಸರಿನಲ್ಲಿ ಸಾಲ ಮಾಡುತ್ತಿದ್ದ ರಘು, ಏಕೆ ಸಾಲ ಮಾಡ್ತಿರಾ ಅಂತಾ ಹೆಂಡತಿ ಕೇಳಿದ್ರೆ, ನನಗೆ ಹಣ ಬೇಕು, ನಿನ್ನ ಸಹೋದರರಿಂದ ವರದಕ್ಷಿಣೆಯ ಹಣ ತಂದುಕೊಡುವಂತೆ ಕೇಳುತ್ತಿದ್ದನಂತೆ, ಹಣ ತಂದು ಕೊಡದಿದ್ದಾರೆ ಮತ್ತೊಂದು ಮದುವೆಯಾಗುವೆ ಎಂದು ಕಿರುಕುಳ ಕೊಡುತ್ತಿದ್ದಾನಂತೆ, ಶಿಲ್ಪಾ ವರದಕ್ಷಿಣೆ ಕಿರುಕುಳ ಪ್ರಕರಣವನ್ನ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲು ಮಾಡಿದ್ದಾರೆ.

ರಘು ದೊಡ್ಡಬಳ್ಳಾಪುರದ ಹುಡುಗಿಯೊಬ್ಬಳನ್ನು ಎರಡನೇ ಮದುವೆಯಾಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆತನ ತಂದೆಯೇ ಎರಡನೇ ಮದುವೆಯಾಗಿರುವ ಬಗ್ಗೆ ಸುದ್ದಿ ತಿಳಿಸಿದ್ದಾರೆ ಎಂದು ಶಿಲ್ಪಾ ಆರೋಪ ಮಾಡಿದ್ದಾರೆ, ರಘು ಎರಡನೇ ಮದುವೆಯಾಗಿರುವ ಹುಡುಗಿಗೂ ಸಹ ಇದು ಎರಡನೇ ಮದುವೆ, ಮೊದಲನೇ ಗಂಡ ಸಾವನ್ನಪ್ಪಿದ್ದಾನೆ, ಆಕೆಯ ಗಂಡನಿಂದ ಹಣ ಬರುವ ಸುಳಿವು ಸಿಕ್ಕ ರಘು ಮತ್ತು ಆತನ ಕುಟುಂಬದವರು ಆಕೆಯ ಜೊತೆ ಎರಡನೇ ಮದುವೆ ಮಾಡಿಸಿದ್ದಾರೆಂದು ಶಿಲ್ಪಾ ಮತ್ತು ಆಕೆಯ ಕುಟುಂಬ ಆರೋಪ ಮಾಡಿದೆ.

ನನಗೆ ನನ್ನ ಗಂಡ ಬೇಕು, ಯಾವುದೇ ಕೆಲಸಕ್ಕೆ ಹೋಗದ ನಾನು ಮಗನನ್ನು ಸಾಕುವುದು ಹೇಗೆ ನನಗೆ ನ್ಯಾಯ ಬೇಕೆಂದು ಕೇಳಿಕೊಂಡಿದ್ದಾರೆ, ಇತ್ತಾ ರಘು ಕುಟುಂಬದವರಿಂದ ಜೀವ ಬೆದರಿಕೆ ಇದ್ದು ನಮ್ಮ ರಕ್ಷಣೆ ಕೊಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

Ramesh Babu

Journalist

Recent Posts

How To Choose The Best Real Money Casino Sites And Utilize Them

There are many benefits to playing at real money casino sites. Whether you are looking…

3 hours ago

ವಿಧಾನಸೌಧದಲ್ಲಿ ಐತಿಹಾಸಿಕ ತೀರ್ಮಾನ: ಒಳಮೀಸಲಾತಿ ಜಾರಿಗೆ ಸಚಿವ ಸಂಪುಟ ಒಪ್ಪಿಗೆ- ಸಚಿವ ಕೆ.ಎಚ್ ಮುನಿಯಪ್ಪ

ವಿಧಾನಸೌಧದಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ…

6 hours ago

ನಟಸಾರ್ವಭೌಮ ಡಾ.ರಾಜ್ ಉದ್ಯಾನ ಜನಾರ್ಪಣೆಗೊಳಿಸಿದ ಸಚಿವ ಕೆ.ಜೆ ಜಾರ್ಜ್

ಕನ್ನಡದ ಕಣ್ಮಣಿ ಡಾ.ರಾಜ್‌ಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಹಸಿರಾಗಿ, ಜನರ ಉಸಿರಾಗಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.…

6 hours ago

ಪೌರ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಡಾ. ಪಿ.ಪಾಂಡುಸಿಂಧೆ ಆಯ್ಕೆ

ಕರ್ನಾಟಕ ರಾಜ್ಯ ಪೌರನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾಗಿ ನಗರಸಭೆಯ ಲೆಕ್ಕಾಧಿಕಾರಿ ಡಾ. ಪಿ.ಪಾಂಡುಸಿಂಧೆ ಎರಡನೇ ಬಾರಿಗೆ ಅವಿರೋಧವಾಗಿ…

6 hours ago

ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಆಚರಣೆ: ಅತಿ ಹೆಚ್ಚು ತೆರಿಗೆ ವಸೂಲಾತಿ ಮಾಡಿದ ಕಾಡನೂರು ಗ್ರಾ.ಪಂ ಗೆ ಬಹುಮಾನ ವಿತರಣೆ

ಗ್ರಾಮೀಣ ಪ್ರದೇಶದ ಜನರ ಆಶೋತ್ತರಗಳಿಗೆ ಧ್ವನಿಯಾಗಿ ಪಂಚಾಯತ್ ರಾಜ್ ಇಲಾಖೆಯು ಕೆಲಸ ನಿರ್ವಹಿಸುತ್ತಿದೆ. ಪಾರದರ್ಶಕವಾಗಿ ಸ್ಥಳೀಯ ಆಡಳಿತ ವ್ಯವಸ್ಥೆ ನಡೆಯುತ್ತಾ,…

7 hours ago

ಜೆಡಿಎಸ್ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್…

9 hours ago