ಅಣ್ಣ ಮದುವೆಯಾಗಿದ್ದ ಮನೆಗೆ ಬಂದು ಹೋಗುತ್ತಿದ್ದ ಆತ, ಬಂದು ಹೋಗುವ ಗ್ಯಾಪ್ ನಲ್ಲಿ ಅತ್ತಿಗೆ ತಂಗಿಯನ್ನ ಲವ್ ಮಾಡಿ ಮದುವೆಯಾದ, ಅವಳಿಗೆ ಇಬ್ಬರು ಮಕ್ಕಳನ್ನ ಕೊಟ್ಟವನು ಈಗ ಮತ್ತೊಬ್ಬಳನ್ನು ಮದುವೆಯಾಗುವ ಮೂಲಕ ಇಬ್ಬರ ಬಾಳಿನಲ್ಲಿ ಬಿರುಗಾಳಿ ಎಬ್ಬಿಸಿದ್ದಾನೆ.
ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ನಗರಗೆರೆ ಗ್ರಾಮದ ರಘು ಎಂಬಾತನ್ನು 10 ವರ್ಷಗಳ ಹಿಂದೆ ಮೊದಲನೇ ಹೆಂಡತಿ ಶಿಲ್ಪಾ ಪ್ರೀತಿಸಿ ಮದುವೆಯಾಗಿದ್ದರು. ಅಂದಹಾಗೇ ಈ ರಘು ಶಿಲ್ಪಾಳ ಅಕ್ಕ ಪ್ರೇಮ ಮದುವೆಯಾಗಿದ್ದ, ಗಂಡನ ತಮ್ಮ, ಮದುವೆಯಾದ ಪ್ರಾರಂಭದಲ್ಲಿ ರಘು ಮತ್ತು ಶಿಲ್ಪಾ ದಾಪಂತ್ಯ ಚೆನ್ನಾಗಿಯೇ ಇತ್ತು. ಇಬ್ಬರು ಮುದ್ದಿನ ಗಂಡು ಮಕ್ಕಳಿದ್ದರು. ಎರಡನೇ ಮಗ ಅನಾರೋಗ್ಯದಿಂದ ಸಾವನ್ನಪ್ಪಿದ ನಂತರ ರಘುವಿನ ವರ್ತನೆಯೇ ಬದಲಾಯ್ತು ಅಂತಾರೆ ಶಿಲ್ಪಾ.
ಹೆಂಡತಿ ಹೆಸರಿನಲ್ಲಿ ಸಾಲ ಮಾಡುತ್ತಿದ್ದ ರಘು, ಏಕೆ ಸಾಲ ಮಾಡ್ತಿರಾ ಅಂತಾ ಹೆಂಡತಿ ಕೇಳಿದ್ರೆ, ನನಗೆ ಹಣ ಬೇಕು, ನಿನ್ನ ಸಹೋದರರಿಂದ ವರದಕ್ಷಿಣೆಯ ಹಣ ತಂದುಕೊಡುವಂತೆ ಕೇಳುತ್ತಿದ್ದನಂತೆ, ಹಣ ತಂದು ಕೊಡದಿದ್ದಾರೆ ಮತ್ತೊಂದು ಮದುವೆಯಾಗುವೆ ಎಂದು ಕಿರುಕುಳ ಕೊಡುತ್ತಿದ್ದಾನಂತೆ, ಶಿಲ್ಪಾ ವರದಕ್ಷಿಣೆ ಕಿರುಕುಳ ಪ್ರಕರಣವನ್ನ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲು ಮಾಡಿದ್ದಾರೆ.
ರಘು ದೊಡ್ಡಬಳ್ಳಾಪುರದ ಹುಡುಗಿಯೊಬ್ಬಳನ್ನು ಎರಡನೇ ಮದುವೆಯಾಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆತನ ತಂದೆಯೇ ಎರಡನೇ ಮದುವೆಯಾಗಿರುವ ಬಗ್ಗೆ ಸುದ್ದಿ ತಿಳಿಸಿದ್ದಾರೆ ಎಂದು ಶಿಲ್ಪಾ ಆರೋಪ ಮಾಡಿದ್ದಾರೆ, ರಘು ಎರಡನೇ ಮದುವೆಯಾಗಿರುವ ಹುಡುಗಿಗೂ ಸಹ ಇದು ಎರಡನೇ ಮದುವೆ, ಮೊದಲನೇ ಗಂಡ ಸಾವನ್ನಪ್ಪಿದ್ದಾನೆ, ಆಕೆಯ ಗಂಡನಿಂದ ಹಣ ಬರುವ ಸುಳಿವು ಸಿಕ್ಕ ರಘು ಮತ್ತು ಆತನ ಕುಟುಂಬದವರು ಆಕೆಯ ಜೊತೆ ಎರಡನೇ ಮದುವೆ ಮಾಡಿಸಿದ್ದಾರೆಂದು ಶಿಲ್ಪಾ ಮತ್ತು ಆಕೆಯ ಕುಟುಂಬ ಆರೋಪ ಮಾಡಿದೆ.
ನನಗೆ ನನ್ನ ಗಂಡ ಬೇಕು, ಯಾವುದೇ ಕೆಲಸಕ್ಕೆ ಹೋಗದ ನಾನು ಮಗನನ್ನು ಸಾಕುವುದು ಹೇಗೆ ನನಗೆ ನ್ಯಾಯ ಬೇಕೆಂದು ಕೇಳಿಕೊಂಡಿದ್ದಾರೆ, ಇತ್ತಾ ರಘು ಕುಟುಂಬದವರಿಂದ ಜೀವ ಬೆದರಿಕೆ ಇದ್ದು ನಮ್ಮ ರಕ್ಷಣೆ ಕೊಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…
ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…