ಅಣ್ಣ ಮದುವೆಯಾಗಿದ್ದ ಮನೆಗೆ ಬಂದು ಹೋಗುತ್ತಿದ್ದ ಆತ, ಬಂದು ಹೋಗುವ ಗ್ಯಾಪ್ ನಲ್ಲಿ ಅತ್ತಿಗೆ ತಂಗಿಯನ್ನ ಲವ್ ಮಾಡಿ ಮದುವೆಯಾದ, ಅವಳಿಗೆ ಇಬ್ಬರು ಮಕ್ಕಳನ್ನ ಕೊಟ್ಟವನು ಈಗ ಮತ್ತೊಬ್ಬಳನ್ನು ಮದುವೆಯಾಗುವ ಮೂಲಕ ಇಬ್ಬರ ಬಾಳಿನಲ್ಲಿ ಬಿರುಗಾಳಿ ಎಬ್ಬಿಸಿದ್ದಾನೆ.
ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ನಗರಗೆರೆ ಗ್ರಾಮದ ರಘು ಎಂಬಾತನ್ನು 10 ವರ್ಷಗಳ ಹಿಂದೆ ಮೊದಲನೇ ಹೆಂಡತಿ ಶಿಲ್ಪಾ ಪ್ರೀತಿಸಿ ಮದುವೆಯಾಗಿದ್ದರು. ಅಂದಹಾಗೇ ಈ ರಘು ಶಿಲ್ಪಾಳ ಅಕ್ಕ ಪ್ರೇಮ ಮದುವೆಯಾಗಿದ್ದ, ಗಂಡನ ತಮ್ಮ, ಮದುವೆಯಾದ ಪ್ರಾರಂಭದಲ್ಲಿ ರಘು ಮತ್ತು ಶಿಲ್ಪಾ ದಾಪಂತ್ಯ ಚೆನ್ನಾಗಿಯೇ ಇತ್ತು. ಇಬ್ಬರು ಮುದ್ದಿನ ಗಂಡು ಮಕ್ಕಳಿದ್ದರು. ಎರಡನೇ ಮಗ ಅನಾರೋಗ್ಯದಿಂದ ಸಾವನ್ನಪ್ಪಿದ ನಂತರ ರಘುವಿನ ವರ್ತನೆಯೇ ಬದಲಾಯ್ತು ಅಂತಾರೆ ಶಿಲ್ಪಾ.
ಹೆಂಡತಿ ಹೆಸರಿನಲ್ಲಿ ಸಾಲ ಮಾಡುತ್ತಿದ್ದ ರಘು, ಏಕೆ ಸಾಲ ಮಾಡ್ತಿರಾ ಅಂತಾ ಹೆಂಡತಿ ಕೇಳಿದ್ರೆ, ನನಗೆ ಹಣ ಬೇಕು, ನಿನ್ನ ಸಹೋದರರಿಂದ ವರದಕ್ಷಿಣೆಯ ಹಣ ತಂದುಕೊಡುವಂತೆ ಕೇಳುತ್ತಿದ್ದನಂತೆ, ಹಣ ತಂದು ಕೊಡದಿದ್ದಾರೆ ಮತ್ತೊಂದು ಮದುವೆಯಾಗುವೆ ಎಂದು ಕಿರುಕುಳ ಕೊಡುತ್ತಿದ್ದಾನಂತೆ, ಶಿಲ್ಪಾ ವರದಕ್ಷಿಣೆ ಕಿರುಕುಳ ಪ್ರಕರಣವನ್ನ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲು ಮಾಡಿದ್ದಾರೆ.
ರಘು ದೊಡ್ಡಬಳ್ಳಾಪುರದ ಹುಡುಗಿಯೊಬ್ಬಳನ್ನು ಎರಡನೇ ಮದುವೆಯಾಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆತನ ತಂದೆಯೇ ಎರಡನೇ ಮದುವೆಯಾಗಿರುವ ಬಗ್ಗೆ ಸುದ್ದಿ ತಿಳಿಸಿದ್ದಾರೆ ಎಂದು ಶಿಲ್ಪಾ ಆರೋಪ ಮಾಡಿದ್ದಾರೆ, ರಘು ಎರಡನೇ ಮದುವೆಯಾಗಿರುವ ಹುಡುಗಿಗೂ ಸಹ ಇದು ಎರಡನೇ ಮದುವೆ, ಮೊದಲನೇ ಗಂಡ ಸಾವನ್ನಪ್ಪಿದ್ದಾನೆ, ಆಕೆಯ ಗಂಡನಿಂದ ಹಣ ಬರುವ ಸುಳಿವು ಸಿಕ್ಕ ರಘು ಮತ್ತು ಆತನ ಕುಟುಂಬದವರು ಆಕೆಯ ಜೊತೆ ಎರಡನೇ ಮದುವೆ ಮಾಡಿಸಿದ್ದಾರೆಂದು ಶಿಲ್ಪಾ ಮತ್ತು ಆಕೆಯ ಕುಟುಂಬ ಆರೋಪ ಮಾಡಿದೆ.
ನನಗೆ ನನ್ನ ಗಂಡ ಬೇಕು, ಯಾವುದೇ ಕೆಲಸಕ್ಕೆ ಹೋಗದ ನಾನು ಮಗನನ್ನು ಸಾಕುವುದು ಹೇಗೆ ನನಗೆ ನ್ಯಾಯ ಬೇಕೆಂದು ಕೇಳಿಕೊಂಡಿದ್ದಾರೆ, ಇತ್ತಾ ರಘು ಕುಟುಂಬದವರಿಂದ ಜೀವ ಬೆದರಿಕೆ ಇದ್ದು ನಮ್ಮ ರಕ್ಷಣೆ ಕೊಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…