ಅಣ್ಣ ಮದುವೆಯಾಗಿದ್ದ ಮನೆಗೆ ಬಂದು ಹೋಗುತ್ತಿದ್ದ ಆತ, ಬಂದು ಹೋಗುವ ಗ್ಯಾಪ್ ನಲ್ಲಿ ಅತ್ತಿಗೆ ತಂಗಿಯನ್ನ ಲವ್ ಮಾಡಿ ಮದುವೆಯಾದ, ಅವಳಿಗೆ ಇಬ್ಬರು ಮಕ್ಕಳನ್ನ ಕೊಟ್ಟವನು ಈಗ ಮತ್ತೊಬ್ಬಳನ್ನು ಮದುವೆಯಾಗುವ ಮೂಲಕ ಇಬ್ಬರ ಬಾಳಿನಲ್ಲಿ ಬಿರುಗಾಳಿ ಎಬ್ಬಿಸಿದ್ದಾನೆ.
ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ನಗರಗೆರೆ ಗ್ರಾಮದ ರಘು ಎಂಬಾತನ್ನು 10 ವರ್ಷಗಳ ಹಿಂದೆ ಮೊದಲನೇ ಹೆಂಡತಿ ಶಿಲ್ಪಾ ಪ್ರೀತಿಸಿ ಮದುವೆಯಾಗಿದ್ದರು. ಅಂದಹಾಗೇ ಈ ರಘು ಶಿಲ್ಪಾಳ ಅಕ್ಕ ಪ್ರೇಮ ಮದುವೆಯಾಗಿದ್ದ, ಗಂಡನ ತಮ್ಮ, ಮದುವೆಯಾದ ಪ್ರಾರಂಭದಲ್ಲಿ ರಘು ಮತ್ತು ಶಿಲ್ಪಾ ದಾಪಂತ್ಯ ಚೆನ್ನಾಗಿಯೇ ಇತ್ತು. ಇಬ್ಬರು ಮುದ್ದಿನ ಗಂಡು ಮಕ್ಕಳಿದ್ದರು. ಎರಡನೇ ಮಗ ಅನಾರೋಗ್ಯದಿಂದ ಸಾವನ್ನಪ್ಪಿದ ನಂತರ ರಘುವಿನ ವರ್ತನೆಯೇ ಬದಲಾಯ್ತು ಅಂತಾರೆ ಶಿಲ್ಪಾ.
ಹೆಂಡತಿ ಹೆಸರಿನಲ್ಲಿ ಸಾಲ ಮಾಡುತ್ತಿದ್ದ ರಘು, ಏಕೆ ಸಾಲ ಮಾಡ್ತಿರಾ ಅಂತಾ ಹೆಂಡತಿ ಕೇಳಿದ್ರೆ, ನನಗೆ ಹಣ ಬೇಕು, ನಿನ್ನ ಸಹೋದರರಿಂದ ವರದಕ್ಷಿಣೆಯ ಹಣ ತಂದುಕೊಡುವಂತೆ ಕೇಳುತ್ತಿದ್ದನಂತೆ, ಹಣ ತಂದು ಕೊಡದಿದ್ದಾರೆ ಮತ್ತೊಂದು ಮದುವೆಯಾಗುವೆ ಎಂದು ಕಿರುಕುಳ ಕೊಡುತ್ತಿದ್ದಾನಂತೆ, ಶಿಲ್ಪಾ ವರದಕ್ಷಿಣೆ ಕಿರುಕುಳ ಪ್ರಕರಣವನ್ನ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲು ಮಾಡಿದ್ದಾರೆ.
ರಘು ದೊಡ್ಡಬಳ್ಳಾಪುರದ ಹುಡುಗಿಯೊಬ್ಬಳನ್ನು ಎರಡನೇ ಮದುವೆಯಾಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆತನ ತಂದೆಯೇ ಎರಡನೇ ಮದುವೆಯಾಗಿರುವ ಬಗ್ಗೆ ಸುದ್ದಿ ತಿಳಿಸಿದ್ದಾರೆ ಎಂದು ಶಿಲ್ಪಾ ಆರೋಪ ಮಾಡಿದ್ದಾರೆ, ರಘು ಎರಡನೇ ಮದುವೆಯಾಗಿರುವ ಹುಡುಗಿಗೂ ಸಹ ಇದು ಎರಡನೇ ಮದುವೆ, ಮೊದಲನೇ ಗಂಡ ಸಾವನ್ನಪ್ಪಿದ್ದಾನೆ, ಆಕೆಯ ಗಂಡನಿಂದ ಹಣ ಬರುವ ಸುಳಿವು ಸಿಕ್ಕ ರಘು ಮತ್ತು ಆತನ ಕುಟುಂಬದವರು ಆಕೆಯ ಜೊತೆ ಎರಡನೇ ಮದುವೆ ಮಾಡಿಸಿದ್ದಾರೆಂದು ಶಿಲ್ಪಾ ಮತ್ತು ಆಕೆಯ ಕುಟುಂಬ ಆರೋಪ ಮಾಡಿದೆ.
ನನಗೆ ನನ್ನ ಗಂಡ ಬೇಕು, ಯಾವುದೇ ಕೆಲಸಕ್ಕೆ ಹೋಗದ ನಾನು ಮಗನನ್ನು ಸಾಕುವುದು ಹೇಗೆ ನನಗೆ ನ್ಯಾಯ ಬೇಕೆಂದು ಕೇಳಿಕೊಂಡಿದ್ದಾರೆ, ಇತ್ತಾ ರಘು ಕುಟುಂಬದವರಿಂದ ಜೀವ ಬೆದರಿಕೆ ಇದ್ದು ನಮ್ಮ ರಕ್ಷಣೆ ಕೊಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…
ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…