ಅಣ್ಣ ಮದುವೆಯಾಗಿದ್ದ ಮನೆಗೆ ಬಂದು ಹೋಗುತ್ತಿದ್ದ ಆತ, ಬಂದು ಹೋಗುವ ಗ್ಯಾಪ್ ನಲ್ಲಿ ಅತ್ತಿಗೆ ತಂಗಿಯನ್ನ ಲವ್ ಮಾಡಿ ಮದುವೆಯಾದ, ಅವಳಿಗೆ ಇಬ್ಬರು ಮಕ್ಕಳನ್ನ ಕೊಟ್ಟವನು ಈಗ ಮತ್ತೊಬ್ಬಳನ್ನು ಮದುವೆಯಾಗುವ ಮೂಲಕ ಇಬ್ಬರ ಬಾಳಿನಲ್ಲಿ ಬಿರುಗಾಳಿ ಎಬ್ಬಿಸಿದ್ದಾನೆ.
ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ನಗರಗೆರೆ ಗ್ರಾಮದ ರಘು ಎಂಬಾತನ್ನು 10 ವರ್ಷಗಳ ಹಿಂದೆ ಮೊದಲನೇ ಹೆಂಡತಿ ಶಿಲ್ಪಾ ಪ್ರೀತಿಸಿ ಮದುವೆಯಾಗಿದ್ದರು. ಅಂದಹಾಗೇ ಈ ರಘು ಶಿಲ್ಪಾಳ ಅಕ್ಕ ಪ್ರೇಮ ಮದುವೆಯಾಗಿದ್ದ, ಗಂಡನ ತಮ್ಮ, ಮದುವೆಯಾದ ಪ್ರಾರಂಭದಲ್ಲಿ ರಘು ಮತ್ತು ಶಿಲ್ಪಾ ದಾಪಂತ್ಯ ಚೆನ್ನಾಗಿಯೇ ಇತ್ತು. ಇಬ್ಬರು ಮುದ್ದಿನ ಗಂಡು ಮಕ್ಕಳಿದ್ದರು. ಎರಡನೇ ಮಗ ಅನಾರೋಗ್ಯದಿಂದ ಸಾವನ್ನಪ್ಪಿದ ನಂತರ ರಘುವಿನ ವರ್ತನೆಯೇ ಬದಲಾಯ್ತು ಅಂತಾರೆ ಶಿಲ್ಪಾ.
ಹೆಂಡತಿ ಹೆಸರಿನಲ್ಲಿ ಸಾಲ ಮಾಡುತ್ತಿದ್ದ ರಘು, ಏಕೆ ಸಾಲ ಮಾಡ್ತಿರಾ ಅಂತಾ ಹೆಂಡತಿ ಕೇಳಿದ್ರೆ, ನನಗೆ ಹಣ ಬೇಕು, ನಿನ್ನ ಸಹೋದರರಿಂದ ವರದಕ್ಷಿಣೆಯ ಹಣ ತಂದುಕೊಡುವಂತೆ ಕೇಳುತ್ತಿದ್ದನಂತೆ, ಹಣ ತಂದು ಕೊಡದಿದ್ದಾರೆ ಮತ್ತೊಂದು ಮದುವೆಯಾಗುವೆ ಎಂದು ಕಿರುಕುಳ ಕೊಡುತ್ತಿದ್ದಾನಂತೆ, ಶಿಲ್ಪಾ ವರದಕ್ಷಿಣೆ ಕಿರುಕುಳ ಪ್ರಕರಣವನ್ನ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲು ಮಾಡಿದ್ದಾರೆ.
ರಘು ದೊಡ್ಡಬಳ್ಳಾಪುರದ ಹುಡುಗಿಯೊಬ್ಬಳನ್ನು ಎರಡನೇ ಮದುವೆಯಾಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆತನ ತಂದೆಯೇ ಎರಡನೇ ಮದುವೆಯಾಗಿರುವ ಬಗ್ಗೆ ಸುದ್ದಿ ತಿಳಿಸಿದ್ದಾರೆ ಎಂದು ಶಿಲ್ಪಾ ಆರೋಪ ಮಾಡಿದ್ದಾರೆ, ರಘು ಎರಡನೇ ಮದುವೆಯಾಗಿರುವ ಹುಡುಗಿಗೂ ಸಹ ಇದು ಎರಡನೇ ಮದುವೆ, ಮೊದಲನೇ ಗಂಡ ಸಾವನ್ನಪ್ಪಿದ್ದಾನೆ, ಆಕೆಯ ಗಂಡನಿಂದ ಹಣ ಬರುವ ಸುಳಿವು ಸಿಕ್ಕ ರಘು ಮತ್ತು ಆತನ ಕುಟುಂಬದವರು ಆಕೆಯ ಜೊತೆ ಎರಡನೇ ಮದುವೆ ಮಾಡಿಸಿದ್ದಾರೆಂದು ಶಿಲ್ಪಾ ಮತ್ತು ಆಕೆಯ ಕುಟುಂಬ ಆರೋಪ ಮಾಡಿದೆ.
ನನಗೆ ನನ್ನ ಗಂಡ ಬೇಕು, ಯಾವುದೇ ಕೆಲಸಕ್ಕೆ ಹೋಗದ ನಾನು ಮಗನನ್ನು ಸಾಕುವುದು ಹೇಗೆ ನನಗೆ ನ್ಯಾಯ ಬೇಕೆಂದು ಕೇಳಿಕೊಂಡಿದ್ದಾರೆ, ಇತ್ತಾ ರಘು ಕುಟುಂಬದವರಿಂದ ಜೀವ ಬೆದರಿಕೆ ಇದ್ದು ನಮ್ಮ ರಕ್ಷಣೆ ಕೊಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…