ಮೊದಲನೇ ಹೆಂಡತಿಗೆ ಮಗು ಕೊಟ್ಟು, ಡೈವರ್ಸ್ ನೀಡದೇ ಮತ್ತೊಬ್ಬಳಿಗೆ ಬಾಳು ಕೊಟ್ಟ ಭೂಪ..?: ಪೊಲೀಸ್ ಠಾಣೆ ಮೆಟ್ಟಿಲೇರಿದ ಫಸ್ಟ್ ವೈಫ್

ಅಣ್ಣ ಮದುವೆಯಾಗಿದ್ದ ಮನೆಗೆ ಬಂದು ಹೋಗುತ್ತಿದ್ದ ಆತ, ಬಂದು ಹೋಗುವ ಗ್ಯಾಪ್ ನಲ್ಲಿ ಅತ್ತಿಗೆ ತಂಗಿಯನ್ನ ಲವ್ ಮಾಡಿ ಮದುವೆಯಾದ, ಅವಳಿಗೆ ಇಬ್ಬರು ಮಕ್ಕಳನ್ನ ಕೊಟ್ಟವನು ಈಗ ಮತ್ತೊಬ್ಬಳನ್ನು ಮದುವೆಯಾಗುವ ಮೂಲಕ ಇಬ್ಬರ ಬಾಳಿನಲ್ಲಿ ಬಿರುಗಾಳಿ ಎಬ್ಬಿಸಿದ್ದಾನೆ.

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ನಗರಗೆರೆ ಗ್ರಾಮದ  ರಘು ಎಂಬಾತನ್ನು 10 ವರ್ಷಗಳ ಹಿಂದೆ ಮೊದಲನೇ ಹೆಂಡತಿ ಶಿಲ್ಪಾ ಪ್ರೀತಿಸಿ ಮದುವೆಯಾಗಿದ್ದರು. ಅಂದಹಾಗೇ ಈ ರಘು ಶಿಲ್ಪಾಳ ಅಕ್ಕ ಪ್ರೇಮ ಮದುವೆಯಾಗಿದ್ದ, ಗಂಡನ ತಮ್ಮ, ಮದುವೆಯಾದ ಪ್ರಾರಂಭದಲ್ಲಿ ರಘು ಮತ್ತು ಶಿಲ್ಪಾ ದಾಪಂತ್ಯ ಚೆನ್ನಾಗಿಯೇ ಇತ್ತು. ಇಬ್ಬರು ಮುದ್ದಿನ ಗಂಡು ಮಕ್ಕಳಿದ್ದರು. ಎರಡನೇ ಮಗ ಅನಾರೋಗ್ಯದಿಂದ ಸಾವನ್ನಪ್ಪಿದ ನಂತರ ರಘುವಿನ ವರ್ತನೆಯೇ ಬದಲಾಯ್ತು ಅಂತಾರೆ ಶಿಲ್ಪಾ.

ಹೆಂಡತಿ ಹೆಸರಿನಲ್ಲಿ ಸಾಲ ಮಾಡುತ್ತಿದ್ದ ರಘು, ಏಕೆ ಸಾಲ ಮಾಡ್ತಿರಾ ಅಂತಾ ಹೆಂಡತಿ ಕೇಳಿದ್ರೆ, ನನಗೆ ಹಣ ಬೇಕು, ನಿನ್ನ ಸಹೋದರರಿಂದ ವರದಕ್ಷಿಣೆಯ ಹಣ ತಂದುಕೊಡುವಂತೆ ಕೇಳುತ್ತಿದ್ದನಂತೆ, ಹಣ ತಂದು ಕೊಡದಿದ್ದಾರೆ ಮತ್ತೊಂದು ಮದುವೆಯಾಗುವೆ ಎಂದು ಕಿರುಕುಳ ಕೊಡುತ್ತಿದ್ದಾನಂತೆ, ಶಿಲ್ಪಾ ವರದಕ್ಷಿಣೆ ಕಿರುಕುಳ ಪ್ರಕರಣವನ್ನ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲು ಮಾಡಿದ್ದಾರೆ.

ರಘು ದೊಡ್ಡಬಳ್ಳಾಪುರದ ಹುಡುಗಿಯೊಬ್ಬಳನ್ನು ಎರಡನೇ ಮದುವೆಯಾಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆತನ ತಂದೆಯೇ ಎರಡನೇ ಮದುವೆಯಾಗಿರುವ ಬಗ್ಗೆ ಸುದ್ದಿ ತಿಳಿಸಿದ್ದಾರೆ ಎಂದು ಶಿಲ್ಪಾ ಆರೋಪ ಮಾಡಿದ್ದಾರೆ, ರಘು ಎರಡನೇ ಮದುವೆಯಾಗಿರುವ ಹುಡುಗಿಗೂ ಸಹ ಇದು ಎರಡನೇ ಮದುವೆ, ಮೊದಲನೇ ಗಂಡ ಸಾವನ್ನಪ್ಪಿದ್ದಾನೆ, ಆಕೆಯ ಗಂಡನಿಂದ ಹಣ ಬರುವ ಸುಳಿವು ಸಿಕ್ಕ ರಘು ಮತ್ತು ಆತನ ಕುಟುಂಬದವರು ಆಕೆಯ ಜೊತೆ ಎರಡನೇ ಮದುವೆ ಮಾಡಿಸಿದ್ದಾರೆಂದು ಶಿಲ್ಪಾ ಮತ್ತು ಆಕೆಯ ಕುಟುಂಬ ಆರೋಪ ಮಾಡಿದೆ.

ನನಗೆ ನನ್ನ ಗಂಡ ಬೇಕು, ಯಾವುದೇ ಕೆಲಸಕ್ಕೆ ಹೋಗದ ನಾನು ಮಗನನ್ನು ಸಾಕುವುದು ಹೇಗೆ ನನಗೆ ನ್ಯಾಯ ಬೇಕೆಂದು ಕೇಳಿಕೊಂಡಿದ್ದಾರೆ, ಇತ್ತಾ ರಘು ಕುಟುಂಬದವರಿಂದ ಜೀವ ಬೆದರಿಕೆ ಇದ್ದು ನಮ್ಮ ರಕ್ಷಣೆ ಕೊಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

1 hour ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

2 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

12 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

13 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago